ಭಾರತದಲ್ಲಿ ಶತ್ರುಗಳ ಡ್ರೋನ್ ಹೊಡೆದುರುಳಿಸಲು ಹೊಸ ತಂತ್ರಜ್ಞಾನ
ನವದೆಹಲಿ, ನವೆಂಬರ್.29: ಭಾರತದ ರಕ್ಷಣೆ ಮತ್ತು ಸಂಶೋಧನಾ ಅಭಿವೃದ್ಧಿ ಸಂಸ್ಥೆಯು ಭದ್ರತಾ ಪಡೆಗೆ ಅಗತ್ಯವಿರುವ ಡ್ರೋನ್ ವಿರೋಧಿ ವ್ಯವಸ್ಥೆ ಅಭಿವೃದ್ಧಿಪಡಿಸುವ ಮತ್ತು ಉತ್ಪಾದಿಸುವ ಪ್ರಮುಖ ಸಂಸ್ಥೆಯಾಗಿ ಭಾರತ್ ಎಲೆಕ್ಟ್ರಾನಿಕ್ ನ್ನು ನೇಮಿಸಿದೆ.
ನೂತನ ಡ್ರೋನ್ ವಿರೋಧಿ ವ್ಯವಸ್ಥೆಯು ಪ್ರಮುಖವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಗೃಹ ಕಚೇರಿ, ಕಾರು, ಅಶ್ವದಳದ ಒಂದು ಭಾಗವಾಗಿರಲಿದೆ. ಡ್ರೋನ್ ಬೆದರಿಕೆ ಎದುರಾದ ಹಿನ್ನೆಲೆಯಲ್ಲಿ ಕಳೆದ 2020ರ ಆರಂಭದಿಂದಲೂ ಈ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿತ್ತು.
ಪಾಕಿಸ್ತಾನ್ ಮೂಲದ ಉಗ್ರರು ಚೀನಾ ನಿರ್ಮಿತ ಡ್ರೋನ್ ಗಳನ್ನು ಬಳಸಿಕೊಂಡು ದುಷ್ಕೃತ್ಯವನ್ನು ಎಸಗಲು ಪ್ರಯತ್ನಿಸುತ್ತಿದ್ದರು. ಜಮ್ಮು ಕಾಶ್ಮೀರ ಮತ್ತು ಅಂತಾರಾಷ್ಟ್ರೀಯ ಗಡಿರೇಖೆಯಲ್ಲಿ ಬಳಕೆಯಾಗುತ್ತಿರುವ ಡ್ರೋನ್ ಗಳನ್ನು ಪತ್ತೆ ಮಾಡುವ ಮತ್ತು ಶತ್ರುಗಳ ಡ್ರೋನ್ ಗಳನ್ನು ಹೊಡೆದುರುಳಿಸುವ ಪರಿಣಾಮಕಾರಿ ಡ್ರೋನ್ ವಿರೋಧಿ ತಂತ್ರಜ್ಞಾನವನ್ನು ಬಳಸಿಕೊಳ್ಳುವುದಕ್ಕೆ ಭಾರತದ ರಕ್ಷಣಾ ಮತ್ತು ಸಂಶೋಧನಾ ಅಭಿವೃದ್ಧಿ ಸಂಸ್ಥೆಯು ಮುಂದಾಗಿದೆ.

ಡ್ರೋನ್ ವಿರೋಧಿ ವ್ಯವಸ್ಥೆ:
ರಕ್ಷಣೆ ಮತ್ತು ಸಂಶೋಧನಾ ಅಭಿವೃದ್ಧಿ ಸಂಸ್ಥೆಯ ಮುಖ್ಯಸ್ಥ ಸತೀಶ್ ರೆಡ್ಡಿಯವರು ಸ್ಥಳೀಯ ಡ್ರೋನ್ ವಿರೋಧಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಸಶಸ್ತ್ರ ಪಡೆಗಳಿಗೆ ಪತ್ರ ಬರೆಯಲಿದ್ದಾರೆ ಎಂದು ತಿಳಿದು ಬಂದಿದೆ. 2020ರ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದ ಸಂದರ್ಭಗಳಲ್ಲಿ ಅಳವಡಿಸಿದ್ದ ಡ್ರೋನ್ ವಿರೋಧಿ ವ್ಯವಸ್ಥೆಯು ಸುತ್ತಮುತ್ತಲಿನ ಎರಡ್ಮೂರು ಕಿಲೋ ಮೀಟರ್ ವ್ಯಾಪ್ತಿಯ ರಾಡರ್ ಸಾಮರ್ಥ್ಯವನ್ನು ಪತ್ತೆ ಮಾಡುವ ಶಕ್ತಿ ಹೊಂದಿತ್ತು. ಮಾನವರಹಿತ ವೈಮಾನಿಕ ವಾಹನಗಳನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ಈ ಡ್ರೋನ್ ವಿರೋಧಿ ವ್ಯವಸ್ಥೆಯು ಒಳಗೊಂಡಿರುತ್ತದೆ.
ಕಳೆದ 2019ರಲ್ಲಿ ಅಂತಾರಾಷ್ಟ್ರೀಯ ಗಡಿ ಪ್ರದೇಶ ಪಂಜಾಬ್ ಸುತ್ತಮುತ್ತಲು ಶಸ್ತ್ರಾಸ್ತ್ರ ಮತ್ತು ಮಾದಕ ವಸ್ತುಗಳನ್ನು ಸಾಗಿಸುವುದಕ್ಕೆ ಪಾಕಿಸ್ತಾನದ ಉಗ್ರರ ತಂಡವು ಇದೇ ಡ್ರೋನ್ ಗಳನ್ನು ಬಳಸಿಕೊಂಡಿರುವುದು ಬೆಳಕಿಗೆ ಬಂದಿತ್ತು. ಅದೇ ತರನಾದ ಡ್ರೋನ್ ಗಳನ್ನು ಅಂತಾರಾಷ್ಟ್ರೀಯ ಗಡಿ ಮತ್ತು ಜಮ್ಮು ಕಾಶ್ಮೀರದ ಗಡಿ ಪ್ರದೇಶಗಳಲ್ಲಿ ಇತ್ತೀಚಿಗೆ ಬಳಕೆಯಾಗಿರುವು ಗೊತ್ತಾಗಿದೆ.
ಚೀನಾ ಅಭಿವೃದ್ಧಿಪಡಿಸಿದ ಈ ಡ್ರೋನ್ ಗಳಲ್ಲಿ 10 ಕೆಜಿ ತೂಕದ ಶಸ್ತ್ರಾಸ್ತ್ರ ಮತ್ತು ಮಾದಕ ವಸ್ತುಗಳನ್ನು ಸಾಗಿಸಬಹುದಾಗಿದೆ. ಇದೀಗ ಭಾರತದ ರಕ್ಷಣೆ ಮತ್ತು ಸಂಶೋಧನಾ ಅಭಿವೃದ್ಧಿ ಸಂಸ್ಥೆಯು ಇಂಥ ಡ್ರೋನ್ ಗಳಿಂದ ದೇಶಕ್ಕೆ ಎದುರಾಗುವ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಡ್ರೋನ್ ವಿರೋಧಿ ವ್ಯವಸ್ಥೆ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications