ವಿರೋಧ ಪಕ್ಷ ಮುಕ್ತ ಭಾರತ ನಿರ್ಮಾಣವೇ ಬಿಜೆಪಿ ಗುರಿ!
ನವದೆಹಲಿ, ಜೂ. 22: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮಾದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಪ್ರತಿಕ್ರಿಯೆ ನೀಡಿದ್ದಾರೆ. "ಇಡೀ ಭಾರತ ದೇಶವನ್ನು ವಶಪಡಿಸಿಕೊಳ್ಳುವುದು ಬಿಜೆಪಿ ಪಕ್ಷದ ಗುರಿಯಾಗಿದೆ" ಎಂದು ಕಿಡಿಕಾರಿದ್ದಾರೆ.
ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಅವರು, "ಪ್ರತಿಪಕ್ಷಗಳು ಬಿಜೆಪಿ ವಿರುದ್ಧ ಮಾತನಾಡಿದರೆ ಅದನ್ನು ಬಿಜೆಪಿ ಸಹಿಸುವುದಿಲ್ಲ. ಅವರು ವಿರೋಧ ಪಕ್ಷ ಮುಕ್ತ ಭಾರತ ನಿರ್ಮಾಣದ ಹಾದಿಯಲ್ಲಿ ಸಾಗುತ್ತಿದ್ದಾರೆ. ಮೊದಲು ಅವರು ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಮಾತನಾಡಿದ್ದಾರೆ. ಈಗ ಅದನ್ನು ವಿಪಕ್ಷ ಮುಕ್ತ ಎಂದು ಬದಲಾಯಿಸಿದ್ದಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕರ ಬಂಡಾಯ; "ಮಹಾರಾಷ್ಟ್ರದ 30 ಶಾಸಕರು ತಮ್ಮೊಂದಿಗೆ ಅಸ್ಸಾಂನ ಗುವಾಹಟಿಗೆ ತೆರಳಿದ್ದು, ಅವರು ಬಾಳಾಸಾಹೇಬ್ ಠಾಕ್ರೆ ಅವರ ಹಿಂದುತ್ವ ಸಿದ್ಧಾಂತಕ್ಕೆ ಬದ್ಧರಾಗಿದ್ದಾರೆ. 30 ಶಾಸಕರು ಕೂಡ ತಮ್ಮ ಜೊತೆಗಿದ್ದಾರೆ. ಆದರೆ ಅವರು ಯಾರ ಬಗ್ಗೆಯೂ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ" ಎಂದು ಶಿವಸೇನೆಯ ಭಿನ್ನಮತೀಯ ನಾಯಕ ಏಕನಾಥ್ ಶಿಂಧೆ ಬುಧವಾರ ಹೇಳಿದ್ದಾರೆ.

ಬಿಜೆಪಿ ನಾಯಕರಿಂದ ಸ್ವಾಗತ; ಮಹಾರಾಷ್ಟ್ರದಲ್ಲಿ ಮಹಾವಿಕಾಸ ಅಘಾಡಿ ನೇತೃತ್ವದ ಸರ್ಕಾರದ ವಿರುದ್ಧ ಶಿವಸೇನೆ ಶಾಸಕರು ಬಂಡಾಯವೆದ್ದಿದ್ದಾರೆ. ಬಂಡಾಯ ಶಾಸಕರನ್ನು ಗುವಾಹಟಿಯ ವಿಮಾನ ನಿಲ್ದಾಣದಲ್ಲಿ ಅಸ್ಸಾಂನ ಬಿಜೆಪಿ ಸಂಸದ ಪಲ್ಲಬ್ ಲೋಚನ್ ದಾಸ್ ಮತ್ತು ಶಾಸಕ ಸುಶಾಂತ ಬೊರ್ಗೊಹೈನ್ ಬರಮಾಡಿಕೊಂಡರು.
ಬಂಡಾಯ ಶಾಸಕರನ್ನು ಅಸ್ಸಾಂ ರಾಜ್ಯ ಸಾರಿಗೆ ಸಂಸ್ಥೆಯ ಮೂರು ಬಸ್ಗಳಲ್ಲಿ ಪೊಲೀಸ್ ರಕ್ಷಣೆಯೊಂದಿಗೆ ನಗರದ ಹೊರವಲಯದಲ್ಲಿರುವ ಐಷಾರಾಮಿ ಹೋಟೆಲ್ಗೆ ಕರೆದೊಯ್ಯಲಾಗಿದೆ. 30 ಶಿವಸೇನೆ ಮತ್ತು ಏಳು ಸ್ವತಂತ್ರ ಶಾಸಕರು ಸೇರಿದಂತೆ 40 ಮಹಾರಾಷ್ಟ್ರ ಶಾಸಕರು ಪತ್ರಕ್ಕೆ ಸಹಿ ಹಾಕುವ ಮೂಲಕ ಏಕನಾಥ ಶಿಂಧೆಗೆ ಬೆಂಬಲ ಸೂಚಿಸಿದ್ದಾರೆ.

ಬಿಜೆಪಿ ಬಂಡಾಯ ಎಬ್ಬಿಸಿದೆ; ಬಂಡಾಯ ಶಾಸಕರು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಗಾಗಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಗೆ ಪತ್ರ ಬರೆಯಬಹುದು ಎಂದು ಮೂಲಗಳು ತಿಳಿಸಿವೆ. ಆಡಳಿತಾರೂಢ ಎಂವಿಎ ಮೈತ್ರಿಕೂಟವನ್ನು ಉರುಳಿಸಲು ಬಿಜೆಪಿಯು ಬಂಡಾಯ ಎಬ್ಬಿಸಿದೆ ಎಂದು ಸಂಜಯ್ ರಾವುತ್ ಹೇಳಿದ್ದಾರೆ. ಆದರೆ ಇದನ್ನು ಬಿಜೆಪಿ ನಿರಾಕರಿಸಿದೆ.
ಮ್ಯಾಜಿಕ್ ನಂಬರ್; ಮಹಾವಿಕಾಸ ಅಘಾಡಿ ನೇತೃತ್ವದ ಶಿವಸೇನೆಯು ವಿಧಾನಸಭೆಯಲ್ಲಿ 55 ಶಾಸಕರನ್ನು ಹೊಂದಿದೆ. ನಂತರದ ಸ್ಥಾನದಲ್ಲಿ ಮಿತ್ರಪಕ್ಷಗಳಾದ ಎನ್ಸಿಪಿ 53 ಮತ್ತು ಕಾಂಗ್ರೆಸ್ 44 ಶಾಸಕರು ಇದ್ದಾರೆ. 288 ಸದಸ್ಯರ ವಿಧಾನಸಭೆಯಲ್ಲಿ ಪ್ರಸ್ತುತ ಸರಳ ಬಹುಮತಕ್ಕೆ 144 ಜನರ ಬೆಂಬಲ ಬೇಕಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications