ನಾಲ್ಕು ವರ್ಷದ ಬಾಲಕಿಯ ಕತ್ತು ಸೀಳಿದ ಗಾಳಿಪಟ ದಾರ
ನವದೆಹಲಿ, ಆಗಸ್ಟ್ 26: ಗಾಳಿಪಟ ದಾರ ನಾಲ್ಕು ವರ್ಷದ ಬಾಲಕಿಯ ಕತ್ತು ಸೀಳಿದ ಘಟನೆ ದೆಹಲಿಯಲ್ಲಿ ನಡೆದಿದೆ.
ಅದು ಗಾಜು ಲೇಪಿತ ,ಆಜಾ ದಾರವಾಗಿದ್ದು, ತಂದೆ ಮತ್ತು ಮಗಳು ಹನುಮಾನ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಖಜೂರಿ ಚೌಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕಿಯನ್ನು 4 ವರ್ಷದ ಇಶಿಕಾ ಎಂದು ಗುರುತಿಸಲಾಗಿದ್ದು, ಈಕೆ ಸೋನಿಯಾ ವಿಹಾರ್ ನಿವಾಸಿ ಎಂದು ತಿಳಿದುಬಂದಿದೆ.
ಜನವರಿಯಲ್ಲಿ ಜೈಪುರದ ವಿದ್ಯಾನಗರದಲ್ಲಿ 6 ವರ್ಷದ ಬಾಲಕನೋರ್ವ ಇದೇ ಮಾಂಜಾ ದಾರಕ್ಕೆ ಬಲಿಯಾಗಿದ್ದ.

ಇತ್ತೀಚೆಗೆ ಇದೇ ದೆಹಲಿಯಲ್ಲಿ ಟೆಕ್ಕಿಯೊಬ್ಬ ಬೈಕ್ ನಲ್ಲಿ ತೆರಳುತ್ತಿದ್ದಾಗ ಮಾಜಾ ದಾರ ಆತನ ಕುತ್ತಿಗೆ ಸೀಳಿ ಕೊಂದು ಹಾಕಿತ್ತು. ಈ ಘಟನೆ ಹಸಿರಾಗಿರುವಾಗಲೇ ಮತ್ತೊಂದು ಧಾರುಣ ಘಟನೆ ನಡೆದಿದೆ.
ಮಗಳ ಕುತ್ತಿಗೆಗೆ ಹೊಡೆದ ಗಾಳಿಪಟ ದಾರವನ್ನು ಗಮನಿಸಿದ ಸಂತ್ರಸ್ತೆಯ ತಂದೆ ಆಕೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಮಗು ಮೃತಪಟ್ಟಿದೆ ಎಂದು ಘೋಷಿಸಲಾಯಿತು.
ಬಾಲಕಿ ಇಶಿಕಾ ತನ್ನ ತಂದೆಯೊಂದಿಗೆ ಮೋಟಾರುಬೈಕ್ನಲ್ಲಿ ಪ್ರಯಾಣಿಸುತ್ತಿದ್ದಾಗ ಗಾಜು ಲೇಪಿತ ಗಾಳಿಪಟದ ದಾರ (ಮಂಜಾ) ಕುತ್ತಿಗೆಗೆ ಸುತ್ತಿಗೊಂಡು ಗಾಯಗೊಂಡು ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ ಜನರ ಪ್ರಾಣಕ್ಕೆ ಕುತ್ತು ತರುವಂತಹ ವಸ್ತುಗಳಿಂದ ಅದೇನು ಖುಷಿ ಸಿಗುತ್ತೆ ಹೇಳಿ, ತಮ್ಮ ಸಂತೋಷವನ್ನು ಬದಿಗಟ್ಟು ಜನರ ಸುರಕ್ಷತೆಯನ್ನು ನೋಡಿಕೊಳ್ಳುವುದು ಒಳಿತು. ಗಾಳಿಪಟ ದಾರಕ್ಕೆ ಪ್ರತಿ ವರ್ಷ ಸುಮಾರು ನಾಲ್ಕುರಿಂದ ಐದು ಮಂದಿ ಮೃತಪಡುತ್ತಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications