ಕ್ರಿಸ್ಮಸ್ ರಜೆಗೆ ಕುತ್ತಿಲ್ಲ; ಪ್ರಬಂಧ ಸ್ಪರ್ಧೆ ಕಡ್ಡಾಯವೂ ಅಲ್ಲ
ನವದೆಹಲಿ, ಡಿ. 15: ಕ್ರಿಸ್ಮಸ್ ದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸಲು ಕೇಂದ್ರ ಸರ್ಕಾರ ಸೂಚಿಸಿದೆ ಎಂಬ ಮಾಧ್ಯಮಗಳ ವರದಿ ಸುಳ್ಳು ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಸ್ಪಷ್ಟಪಡಿಸಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಹಿಂದೂ ಮಹಾಸಭಾ ಸಂಸ್ಥಾಪಕ ಮದನ ಮೋಹನ ಮಾಳವೀಯ ಅವರ ಜನ್ಮದಿನದ ನಿಮಿತ್ತ ಕ್ರಿಸ್ಮಸ್ ದಿನದಂದು ಉತ್ತಮ ಆಡಳಿತ ದಿನ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಶಾಲೆಗಳಲ್ಲಿ ಡಿ. 25ರಂದು ಉತ್ತಮ ಆಡಳಿತ ದಿನ ಆಚರಿಸಬೇಕು. ಪ್ರಬಂಧ ಸ್ಪರ್ಧೆ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಬೇಕೆಂದು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು ಆದೇಶ ಹೊರಡಿಸಿದೆ. ಈಗಾಗಲೇ ನವೋದಯ ಶಾಲೆಗಳಿಗೆ ಸುತ್ತೋಲೆ ಕಳುಹಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದರಿಂದ ಸರ್ಕಾರದ ಕ್ರಮಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. [ಸ್ಮೃತಿ ಇರಾನಿ ರಾಷ್ಟ್ರಪತಿ ಆಗ್ತಾರಂತೆ]

ಈ ಕಾರಣದಿಂದ ಕೇಂದ್ರ ಶಿಕ್ಷಣ ಸಚಿವಾಲಯ ಸೋಮವಾರ ಟ್ವಿಟ್ಟರ್ ಮೂಲಕ ಸ್ಪಷ್ಟೀಕರಣ ನೀಡಿದೆ. ಕ್ರಿಸ್ಮಸ್ ದಿನವಾದ ಡಿ. 25ರಂದು ಶಾಲೆ ತೆರೆದಿಡುವ ಯೋಚನೆ ಕೇಂದ್ರ ಸರ್ಕಾರಕ್ಕಿಲ್ಲ. ಅಲ್ಲದೆ, ಹಮ್ಮಿಕೊಂಡಿರುವ ಪ್ರಬಂಧ ಸ್ಪರ್ಧೆಯು ಆನ್ಲೈನ್ ಆಗಿದ್ದು, ಐಚ್ಛಿಕವಾಗಿದೆ ಎಂದು ಹೇಳಿಕೆ ನೀಡಿದೆ. [ಸಂಸ್ಕೃತ-ಜರ್ಮನಿ ಏನಿದು ಸಂಬಂಧ?]
ನಂತರ ಪತ್ರಿಕಾ ಪ್ರಕಟಣೆಯನ್ನೂ ನೀಡಲಾಗಿದ್ದು, ಕ್ರಿಸ್ಮಸ್ ದಿನದಂದು ಸಿಬಿಎಸ್ಸಿ ಕಚೇರಿಗೂ ರಜೆ ನೀಡಲಾಗಿದೆ. ಚಳಿಗಾಲದ ರಜೆ ಇಲ್ಲದ ಶಾಲೆಗಳಲ್ಲಿ ಮಾತ್ರ ಪ್ರಬಂಧ ಸ್ಪರ್ಧೆ ನಡೆಸಲು ಸೂಚಿಸಲಾಗಿದ್ದು, ಅದೂ ಐಚ್ಛಿಕವಾಗಿದೆ ಎಂದು ಸ್ಮೃತಿ ಇರಾನಿ ತಿಳಿಸಿದ್ದಾರೆ. [ಎಲ್.ಎಲ್. ಭೈರಪ್ಪಗೆ ರಾಷ್ಟ್ರೀಯ ಪ್ರೊಫೆಸರ್ ಗೌರವ]
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications