ಸಿಪಿಪಿ ಸಭೆ: ಚರ್ಚಿಸಲಾದ ವಿಷಯಗಳು ಬಗ್ಗೆ ಮಾಹಿತಿ ನೀಡಿದ ಖರ್ಗೆ
ನವದೆಹಲಿ ಮಾರ್ಚ್ 13: ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಪಕ್ಷದ ಕಾರ್ಯತಂತ್ರದ ಕುರಿತು ಕಾಂಗ್ರೆಸ್ ಉನ್ನತ ನಾಯಕರು ಭಾನುವಾರ ಚರ್ಚಿಸಿದ್ದು ಸಾರ್ವಜನಿಕ ಪ್ರಾಮುಖ್ಯತೆಯ ಸಮಸ್ಯೆಗಳನ್ನು ಎತ್ತಲು ಇತರ ಸಮಾನ ಮನಸ್ಕ ಪಕ್ಷಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡಲು ನಿರ್ಧರಿಸಿದ್ದಾರೆ. ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರದ ಗುಂಪಿನ ಸಭೆ ನಡೆಯಿತು. ಸೋಮವಾರದಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ಚರ್ಚಿಸಲಾಯಿತು. ಅಧಿವೇಶನದಲ್ಲಿ ಸಾರ್ವಜನಿಕ ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡುತ್ತೇವೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
ಇಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆ ಕುರಿತು ಸಂಸದೀಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಲು ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಆನಂದ್ ಶರ್ಮಾ, ಕೆ ಸುರೇಶ್, ಮನೀಶ್ ತಿವಾರಿ, ಜೈರಾಮ್ ರಮೇಶ್ ಆಗಮಿಸಿದ್ದರು. ಈ ವೇಳೆ ಮುಂಬರುವ ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ಚರ್ಚಿಸಿದ್ದೇವೆ ಎಂದು ಸಭೆಯ ನಂತರ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಹಣದುಬ್ಬರ, ನಿರುದ್ಯೋಗ, ರೈತರಿಗೆ ಕನಿಷ್ಠ ಬೆಂಬಲ ಬೆಲೆ, ಉಕ್ರೇನ್ನಿಂದ ಹಿಂದಿರುಗುವ ವೈದ್ಯಕೀಯ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ನಾವು ಧ್ವನಿ ಎತ್ತಲು ಪ್ರಯತ್ನಿಸುತ್ತೇವೆ ಎಂದರು.

ಸಂಸತ್ತಿನ ಪ್ರತಿ ಅಧಿವೇಶನಕ್ಕೂ ಮುನ್ನ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರದ ಗುಂಪಿನ ಸಭೆ ನಡೆಯುತ್ತದೆ. ಬಜೆಟ್ ಅಧಿವೇಶನದ ಎರಡನೇ ಭಾಗ ಸೋಮವಾರದಿಂದ ಆರಂಭವಾಗಿದ್ದು, ಏಪ್ರಿಲ್ 8ರವರೆಗೆ ನಡೆಯಲಿದೆ.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications