ದೆಹಲಿ ಗಲಭೆ ಪ್ರಕರಣ: ತಿಹಾರ್ ಜೈಲಿನಿಂದ ಬಿಡುಗಡೆಯಾದ ಮೂವರ ಪ್ರತಿಕ್ರಿಯೆ
ನವದೆಹಲಿ, ಜೂನ್ 17: "ನಮ್ಮನ್ನು ಜೈಲಿಗೆ ಹಾಕುವುದರ ಮೂಲಕ ಬೆದರಿಸುವುದಕ್ಕೆ ಯಾವುದೇ ಕಾರಣಕ್ಕೂ ಸಾಧ್ಯವಾಗುವುದಿಲ್ಲ. ಒಂದು ವೇಳೆ ಅವರು ನಮ್ಮನ್ನು ಬಂಧಿಸುವುದಾಗಿ ಬೆದರಿಕೆ ಹಾಕಿದರೆ, ಅದು ನಮ್ಮ ಪ್ರತಿಭಟನೆಯನ್ನು ಮುಂದುವರಿಸುವುದಕ್ಕೆ ಪ್ರೋತ್ಸಾಹಿಸಿದಂತೆ ಆಗುತ್ತದೆ," ಎಂದು ಸಾಮಾಜಿಕ ಹೋರಾಟಗಾರ್ತಿ ನತಾಶಾ ನಾರ್ವಾಲ್ ಹೇಳಿದ್ದಾರೆ.
ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಪಿತೂರಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದ ಮೂವರು ವಿದ್ಯಾರ್ಥಿ ಮುಖಂಡರನ್ನು ತತ್ ಕ್ಷಣವೇ ಬಿಡುಗಡೆಗೊಳಿಸುವಂತೆ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿತು.
ನವದೆಹಲಿಯ ತಿಹಾರ್ ಜೈಲಿನಿಂದ ಗುರುವಾರ ನತಾಶಾ ನರ್ವಾನ್, ದೇವಾಂಗನ ಕಲಿತಾ ಹಾಗೂ ಆಸಿಫ್ ಇಕ್ಬಾಲ್ ತನ್ಹಾ ಬಿಡುಗಡೆಯಾದರು. ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ಮೂವರು ಸಾಮಾಜಿಕ ಹೋರಾಟಗಾರ್ತಿಯರು ಪ್ರತಿಕ್ರಿಯೆ ನೀಡಿದ್ದಾರೆ.

ತಿಹಾರ್ ಜೈಲಿನಿಂದ ಹೊರ ಬಂದವರು ಹೇಳಿದ್ದೇನು?:
"ಇದು ಸರ್ಕಾರದ ಹತಾಶೆಯನ್ನು ಎತ್ತಿ ತೋರಿಸುತ್ತದೆ, ಆದರೆ ನಾವು ಅವರಿಗೆ ಹೆದರುವ ಮಹಿಳೆಯರೇ ಅಲ್ಲ," ಎಂದು ದೇವಾಂಗನಾ ಕಲಿತಾ ಹೇಳಿದ್ದಾರೆ. ತಿಹಾರ್ ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆ ಅಲ್ಲಿ ನೆರೆದ ಜನರನ್ನು ಕಂಡು, ""ಸ್ನೇಹಿತರಿಂದ, ಹಿತೈಷಿಗಳಿಂದ ನಮಗೆ ಅಪಾರ ಬೆಂಬಲ ದೊರೆತ ಕಾರಣ ನಾವು ಬದುಕುಳಿದೆವು. ಅವರೆಲ್ಲರಿಗೂ ಧನ್ಯವಾದಗಳು," ಎಂದು ಹೇಳಿದ್ದಾರೆ.
ದೆಹಲಿ ಉಚ್ಛ ನ್ಯಾಯಾಲಯಕ್ಕೆ ಧನ್ಯವಾದ:
"ಅದು ಹೇಗೇ ಆದರೂ, ನಮ್ಮ ನಂಬಿಕೆಯನ್ನು ಎತ್ತಿ ಹಿಡಿದಿದ ದೆಹಲಿ ಉಚ್ಛ ನ್ಯಾಯಾಲಯಕ್ಕೆ ನಾವು ಧನ್ಯವಾದ ಹೇಳಲು ಬಯಸುತ್ತೇವೆ. ನಮ್ಮ ಯಾವುದೇ ಪ್ರತಿಭಟನೆಗಳು ಭಯೋತ್ಪಾದನೆ ಆಗಿರಲಿಲ್ಲ. ಇದು ಮಹಿಳೆಯರ ನೇತೃತ್ವದಲ್ಲಿ ನಡೆಸಿದ ಪ್ರಜಾಪ್ರಭುತ್ವ ಪ್ರತಿಭಟನೆಯಾಗಿತ್ತು. ಅವರು ನಮ್ಮನ್ನು ಜೈಲಿಗೆ ಕಳುಹಿಸುವ ಮೂಲಕ ಬೆದರಿಸಲು ಪ್ರಯತ್ನಿಸಿದ್ದು ಅದು ಸಾಧ್ಯವಾಗಲಿಲ್ಲ. ನಮ್ಮನ್ನು ಬಂಧಿಸುವ ಬೆದರಿಕೆ ಹಾಕಿದರೆ, ಅದು ನಮ್ಮ ಹೋರಾಟವನ್ನು ಮುಂದುವರಿಸುವ ಸಂಕಲ್ಪವನ್ನು ಬಲಪಡಿಸುತ್ತದೆ," ಎಂದು ನತಾಶಾ ನಾರ್ವಾಲ್ ಎಚ್ಚರಿಕೆ ನೀಡಿದ್ದಾರೆ.

ದೆಹಲಿ ಗಲಭೆ ಪ್ರಕರಣದ ಆರೋಪಿಗಳಿಗೆ ಜಾಮೀನು:
2020ರ ಮೇ ತಿಂಗಳಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಯುಎಪಿಎ) ಅಡಿ ನತಾಶಾ ನರ್ವಾನ್, ದೇವಾಂಗನ ಕಲಿತಾ ಹಾಗೂ ಆಸಿಫ್ ಇಕ್ಬಾಲ್ ತನ್ಹಾರನ್ನು ಬಂಧಿಸಲಾಗಿತ್ತು. ಕಳೆದ 2021ರ ಜೂನ್ 15ರಂದು ದೆಹಲಿ ಹೈಕೋರ್ಟ್ ಈ ಮೂವರಿಗೂ ಜಾಮೀನು ನೀಡಿದ್ದು, ಆರೋಪಿಗಳಿಗೆ ತಲಾ 50,000 ರೂ. ವೈಯಕ್ತಿಕ ಬಾಂಡ್ಗಳನ್ನು ಸಲ್ಲಿಸುವಂತೆ ಸೂಚಿಸಲಾಗಿತ್ತು.
ಮೂವರು ಆರೋಪಿಗಳಿಗೆ ಜಾಮೀನು ನೀಡಿದ ದೆಹಲಿ ಹೈಕೋರ್ಟ್ ಆರೋಪಿಗಳು ತಮ್ಮ ನಿವಾಸ ಬದಲಾವಣೆಯ ಸಂದರ್ಭದಲ್ಲಿ ಪೊಲೀಸ್ ಠಾಣಾ ಸಿಬ್ಬಂದಿಗೆ ಮಾಹಿತಿ ನೀಡಬೇಕು. ಅಲ್ಲದೆ, ಪ್ರಕರಣದ ಯಾವುದೇ ಸಾಕ್ಷಿದಾರರೊಂದಿಗೆ ಸಂಪರ್ಕ ಮಾಡದಂತೆ ಅಥವಾ ಸಾಕ್ಷ್ಯಗಳ ನಾಶ ಮಾಡದಂತೆ ಆದೇಶಿಸಿದೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications