ಬಿಜೆಪಿಯದ್ದು ರಾಷ್ಟ್ರನೀತಿ, ರಾಜನೀತಿಯಲ್ಲ: ಮೋದಿ
ನವದೆಹಲಿ,ಏ.19: ನಮ್ಮದು ರೈತ ಪರ ಸರ್ಕಾರ, ಭೂ ಸ್ವಾಧೀನ ಕಾಯ್ದೆ ಬಡವರ ವಿರೋಧಿಯಲ್ಲ, ನಾವು ರಾಷ್ಟ್ರ ನೀತಿಯಲ್ಲಿ ನಂಬಿಕೆ ಇಟ್ಟುರುವವರೇ ಹೊರತು ರಾಜನೀತಿಯಲ್ಲಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಸಂಸದರನ್ನು ಉದ್ದೇಶಿಸಿ ಭಾನುವಾರ ಆರಂಭವಾದ ಕಾರ್ಯಾಗಾರದಲ್ಲಿ ಹೇಳಿದರು.
ನಮ್ಮ ಸರ್ಕಾರದ ಭೂ ಸ್ವಾಧೀನ ಕಾಯ್ದೆ ಮಸೂದೆಯನ್ನು ರೈತರು ಮತ್ತು ಬಡವರ ವಿರೋಧಿ ಎಂದು ವಿಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಇದಕ್ಕೆ ತಕ್ಕ ಉತ್ತರ ನೀಡುವ ಶಕ್ತಿ ನಿಮ್ಮಲ್ಲಿ ಇದೆ. ಕೇವಲ ಮಾಧ್ಯಮಗಳಲ್ಲಿ ಹೈಲೆಟ್ ಆಗುವುದನ್ನು ಬಿಡಿ. ಜನರ ಮನಸಿನಲ್ಲಿ ಉಳಿಯುವಂಥ ಕೆಲಸ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕಿವಿಮಾತು ಹೇಳಿದರು. ['ಮೋದಿಗೆ ಸಿಕ್ತು ಮೌಕಾ ಮಾಡಿದ್ದೆಲ್ಲ ದೋಖಾ']
ಕೇಂದ್ರ ಭೂಸ್ವಾಧೀನ ಕಾಯ್ದೆ ವಿರುದ್ದ ಕಾಂಗ್ರೆಸ್ ಹಮ್ಮಿಕೊಂಡಿರುವ ರೈತರ ಬೃಹತ್ ಪ್ರತಿಭಟನೆ ಆರಂಭಕ್ಕೆ ಮುನ್ನ ಅವರು ಇಂದು ಬಿಜೆಪಿ ಸಂಸದರನ್ನುದ್ದೇಶಿಸಿ ಮಾತನಾಡಿದರು. ಈ ಕಾರ್ಯಾಗಾರದಲ್ಲಿ ಬಿಜೆಪಿಯ ಹಿರಿಯ ನಾಯಕರು, ದೇಶದೆಲ್ಲೆಡೆಯಿಂದ ಬಂದ ಸಂಸದರು ಪಾಲ್ಗೊಂಡಿದ್ದಾರೆ.

ನಮ್ಮ ಸರ್ಕಾರದ ಏಕೈಕ ಉದ್ದೇಶ ಬಡತನ ನಿರ್ಮೂಲನೆ
ನಮ್ಮ ಸರ್ಕಾರದ ಏಕೈಕ ಉದ್ದೇಶ ಬಡತನ ನಿರ್ಮೂಲನೆ ಮತ್ತು ಬಡವರ ಉದ್ಧಾರ. ಮುಖ್ಯವಾಗಿ ಹಳ್ಳಿಗಳು ಮತ್ತು ಹಳ್ಳಿಗಳಲ್ಲಿನ ಜನಜೀವನ ಪರಿಸ್ಥಿತಿ ಬದಲಾಗಬೇಕಿದೆ. ಹಳ್ಳಿ ಜನರು ನಗರ ಪ್ರದೇಶದ ಜನರಂತೆಯೇ ಎಲ್ಲ ಅಗತ್ಯ ಸೌಲಭ್ಯಗಳನ್ನು ಪಡೆಯಬೇಕು.

ಸಂಸದರು ತ್ವರಿತಗತಿಯಲ್ಲಿ ಕಾರ್ಯ ನಿರ್ವಹಿಸಬೇಕು
ಬಡವರ ಉದ್ದಾರಕ್ಕಾಗಿ ಅವರಿಗೆ ಅನುಕೂಲವಾಗುವ ಯಾವುದೇ ಕೆಲಸಗಳನ್ನು ಸಚಿವರು, ಸಂಸದರು ತ್ವರಿತಗತಿಯಲ್ಲಿ ಕೈಗೆತ್ತಿಕೊಂಡು ಮಾಡಬೇಕು. ನಮ್ಮ ಸರ್ಕಾರದ ಒಳ್ಳೆಯ ಕೆಲಸಗಳ ಬಗ್ಗೆ ವಿರೋಧ ಪಕ್ಷಗಳು ನೋಡಲು ಅಥವಾ ಕೇಳಲು ಇಷ್ಟಪಡುವುದಿಲ್ಲ. ಸರ್ಕಾರದ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸುತ್ತಾರೆ. ಅದಕ್ಕೆಲ್ಲ ನೀವು ಕಿವಿಗೊಡಬೇಡಿ

ಸಚಿವ ವಿ.ಕೆ.ಸಿಂಗ್ ಯೆಮನ್ ಕಾರ್ಯಾಚರಣೆ
ವಿ.ಕೆ.ಸಿಂಗ್ಗೆ ಶಹಭಾಸ್ಗಿರಿ: ಯುದ್ಧ ಪೀಡಿತ ಯೆಮನ್ನಲ್ಲಿ ಸಿಲುಕಿಕೊಂಡಿದ್ದ ನಾಲ್ಕು ಸಾವಿರಕ್ಕೂ ಅಧಿಕ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತಂದ ಕೇಂದ್ರ ಸಚಿವ ಜನರಲ್ ವಿ.ಕೆ.ಸಿಂಗ್ ಅವರನ್ನು ಮೋದಿ ಪ್ರಶಂಸಿಸಿದರು.

ಸೈನಿಕನಂತೆ ಕಾರ್ಯ ನಿರ್ವಹಿಸಿದ ವಿಕೆ ಸಿಂಗ್
ಸಚಿವ ವಿ.ಕೆ.ಸಿಂಗ್ ಅವರು ಸೈನಿಕನಂತೆ ಅಲ್ಲಿ ನಿಂತು ಕಾರ್ಯ ನಿರ್ವಹಿಸಿದರು. ಭಾರತೀಯರನ್ನು ಅಲ್ಲಿಂದ ತೆರವುಗೊಳಿಸುವ ವೇಳೆ ಅವರು ಕೈಗೊಂಡ ಕಾಳಜಿ ಬಗ್ಗೆ ವಿವರಿಸಬೇಕಾಗಿಲ್ಲ. ಇದರಿಂದ ಭಾರತದ ಹಿರಿಮೆ ಹೆಚ್ಚಿದೆ ಎಂದು ಮೋದಿ ಕೊಂಡಾಡಿದರು.

9ದಿನಗಳ ಪ್ರವಾಸದ ಬಗ್ಗೆ ಮೋದಿ
9 ದಿನಗಳ ವಿದೇಶ ಪ್ರವಾಸದ ಬಗ್ಗೆ ಮಾತನಾಡಿದ ಮೋದಿ, ಫ್ರಾನ್ಸ್, ಜರ್ಮನಿ ಮತ್ತು ಕೆನಡಾ ತ್ರಿರಾಷ್ಟ್ರ ಪ್ರವಾಸ ಅತ್ಯಂತ ಫಲಪ್ರದವಾಗಿದೆ. ಬಂಡವಾಳ ಹೂಡಿಕೆ ಜೊತೆಗೆ ಬಾಂಧವ್ಯ ಇನ್ನಷ್ಟು ಗಟ್ಟಿಯಾಗಿದೆ ಎಂದರು.
|
ಮೋದಿಗೆ ಪ್ರತಿವಂದಿಸಿದ ವಿಕೆ ಸಿಂಗ್
ಮೋದಿಗೆ ಪ್ರತಿವಂದಿಸಿದ ವಿಕೆ ಸಿಂಗ್ ಅವರು ನನ್ನ ಕರ್ತವ್ಯ ನಿರ್ವಹಿಸಿದೆ. ನನ್ನ ಜೊತೆ ಕಾರ್ಯ ನಿರ್ವಹಿಸಿದ ಸಿಬ್ಬಂದಿಗೆ ಈ ಗೌರವ ಸಲ್ಲಬೇಕು ಎಂದಿದ್ದಾರೆ.

ಬಡವರ ಕಲ್ಯಾಣ ಯೋಜನೆ ಕಾರ್ಯಾಗಾರ
ಬಡವರ ಕಲ್ಯಾಣ ಯೋಜನೆಯಲ್ಲಿ ಸಂಸದರ ಪಾತ್ರ ಎಂಬ ವಿಷಯವಾಗಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಮೋದಿ ಅಲ್ಲದೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಗ್ರಾಮೀಣಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಹಾಗೂ ತಾವರ್ಚಂದ್ ಗೆಹ್ಲೋಟ್ ಮಾತನಾಡಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications