'ಲಾಕ್ಡೌನ್ ವಿಫಲ': ಸಾಕ್ಷಿ ಮುಂದಿಟ್ಟು ಸರ್ಕಾರಕ್ಕೆ ಚಾಟಿ ಬೀಸಿದ ರಾಹುಲ್ ಗಾಂಧಿ
ದೆಹಲಿ, ಜೂನ್ 6: ಕೊರೊನಾವೈರಸ್ ನಿಯಂತ್ರಿಸುವಲ್ಲಿ ಭಾರತ ಸರ್ಕಾರ ಸೋತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪದೇ ಪದೇ ಆರೋಪಿಸುತ್ತಲೇ ಇದ್ದಾರೆ. ಯಾವುದೇ ಮುಂಜಾಗ್ರತೆ ಕ್ರಮಗಳ ಬಗ್ಗೆ ನಿರ್ಧರಿಸಿದೆ ಏಕಾಏಕಿ ಲಾಕ್ಡೌನ್ ಘೋಷಣೆ ಮಾಡಿದ ಮೋದಿ ಸರ್ಕಾರ ದೇಶದಲ್ಲಿ ಆರ್ಥಿಕ ಕುಸಿತಕ್ಕೆ ಕಾರಣವಾಯಿತು ಎಂದು ಟೀಕಿಸಿದ್ದರು.
Recommended Video
ಇದೀಗ, ಅದರ ಮುಂದುವರೆದ ಭಾಗ ಎಂಬಂತೆ ಜಗತ್ತಿನ ಇತರೆ ದೇಶಗಳು ಹಾಗೂ ಭಾರತದಲ್ಲಿ ಹೇಗೆ ಕೊರೊನಾ ವೈರಸ್ ಪ್ರಕರಣಗಳ ಏರಿಕೆ ಮತ್ತು ಇಳಿಕೆಯಾಗುತ್ತಿದೆ ಎಂಬುದನ್ನು ಗ್ರಾಫ್ ಮೂಲಕ ತೋರಿಸುತ್ತಿದ್ದಾರೆ.
ಎಲ್ಲ ದೇಶಗಳಲ್ಲಿ ಕೊರೊನಾ ಪ್ರಕರಣಗಳನ್ನು ನಿಯಂತ್ರಿಸಲು ಲಾಕ್ಡೌನ್ ಜಾರಿ ಮಾಡಿದರು. ಅದರಲ್ಲಿ ಸಫಲತೆ ಕಂಡಿದ್ದಾರೆ. ಆದರೆ, ಭಾರತ ಸರ್ಕಾರ ಮಾತ್ರ ಸೋಂಕು ಏರಿಕೆಯಾಗುತ್ತಿದ್ದರೂ ಲಾಕ್ಡೌನ್ ತೆರೆವುಗೊಳಿಸುತ್ತಿದೆ ಎಂದು ವ್ಯಂಗ್ಯ ಮಾಡಿದ್ದಾರೆ. ಮುಂದೆ ಓದಿ...
|
ಭಾರತದಲ್ಲಿ ಲಾಕ್ಡೌನ್ ವಿಫಲ
ಸ್ಪೇನ್, ಜರ್ಮನ್, ಇಟಲಿ, ಯುಕೆ ರಾಷ್ಟ್ರಗಳಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮಾಡಿತ್ತು. ಲಾಕ್ಡೌನ್ ಹಾಗೂ ಇನ್ನಿತರ ಮುನ್ನೆಚ್ಚರಿಕೆ ಕ್ರಮಗಳನ್ನು ಜರುಗಿಸಿದ ಬಳಿಕ ಈಗ ಆ ದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಆದರೆ, ಆ ದೇಶಗಳಿಗೆ ಹೋಲಿಸಿಕೊಂಡರೆ ಭಾರತ ಜಾರಿ ಮಾಡಿದ ಲಾಕ್ಡೌನ್ ಸಂಪೂರ್ಣ ವಿಫಲವಾಗಿದೆ ಎಂದು ರಾಹುಲ್ ಗಾಂಧಿ ಗ್ರಾಫ್ ಮೂಲಕ ಉದಾಹರಣೆ ನೀಡಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಭಾರತದಲ್ಲಿ ಪ್ರತಿದಿನದ ಸೋಂಕು ಏರಿಕೆ
ಭಾರತದಲ್ಲಿ ಪ್ರತಿದಿನ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದೆ. ಶುಕ್ರವಾರ ದೇಶದಲ್ಲಿ 9887 ಜನರಿಗೆ ಸೋಂಕು ದೃಢವಾಗಿದೆ. ಅಮೆರಿಕ, ಬ್ರೆಜಿಲ್ ಬಿಟ್ಟರೆ ಭಾರತದಲ್ಲಿ ದಿನವೊಂದರಲ್ಲಿ ಅತಿ ಹೆಚ್ಚು ಕೇಸ್ ವರದಿಯಾಗುತ್ತಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,36,657ಕ್ಕೆ ಏರಿದೆ.

6 ಸ್ಥಾನಕ್ಕೆ ಏರಿದ ಭಾರತ
ಅತಿ ಹೆಚ್ಚು ಸೋಂಕಿತರನ್ನು ಹೊಂದಿರು ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಈಗ ಆರನೇ ಸ್ಥಾನಕ್ಕೆ ಏರಿದೆ. ನಿನ್ನೆಯ ಅಂಕಿ ಅಂಶದ ಬಳಿಕ ಇಟಲಿ ದೇಶವನ್ನು ಹಿಂದಿಕ್ಕಿದ ಭಾರತ ಮೇಲಕ್ಕೆ ಜಿಗಿದಿದೆ. ಅಮೆರಿಕ (1,965,912), ಬ್ರೆಜಿಲ್ (646,006), ರಷ್ಯಾ (458,689), ಸ್ಪೇನ್ (288,058), ಯುಕೆ (283,311) ನಂತರ ಭಾರತ (2,36,657) ಸ್ಥಾನ ಪಡೆದುಕೊಂಡಿದೆ.

ಲಾಕ್ಡೌನ್ನಿಂದ ಅನ್ಲಾಕ್ ಕಡೆ ಭಾರತ
ದೇಶದಲ್ಲಿ ಕಡಿಮೆ ಸೋಂಕು ವರದಿಯಾಗುತ್ತಿದ್ದ ವೇಳೆ ಲಾಕ್ಡೌನ್ ಮಾಡಿದ ಸರ್ಕಾರ, ದಿನನಿತ್ಯ ಸುಮಾರು 10 ಸಾವಿರವರೆಗೂ ಸೋಂಕು ಪತ್ತೆಯಾಗುತ್ತಿರುವ ಇಂತಹ ಸಮಯದಲ್ಲಿ ಅನ್ಲಾಕ್ ಕಡೆ ಮುಖ ಮಾಡಿದೆ. ಇದು ದೇಶದ ಆರ್ಥಿಕತೆ ದೃಷ್ಟಿಯಿಂದ ಒಳ್ಳೆಯದು ಎನಿಸಿದರೂ, ಕೊರೊನಾ ವಿಚಾರದಲ್ಲಿ ಪರಿಸ್ಥಿತಿ ಕೈಮೀರುತ್ತಿದೆ ಎಂಬ ವಾದ ಕಾಂಗ್ರೆಸ್ ಪಕ್ಷದ್ದೂ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications