'ಲಾಕ್ಡೌನ್ ವಿಫಲ': ಸಾಕ್ಷಿ ಮುಂದಿಟ್ಟು ಸರ್ಕಾರಕ್ಕೆ ಚಾಟಿ ಬೀಸಿದ ರಾಹುಲ್ ಗಾಂಧಿ
ದೆಹಲಿ, ಜೂನ್ 6: ಕೊರೊನಾವೈರಸ್ ನಿಯಂತ್ರಿಸುವಲ್ಲಿ ಭಾರತ ಸರ್ಕಾರ ಸೋತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪದೇ ಪದೇ ಆರೋಪಿಸುತ್ತಲೇ ಇದ್ದಾರೆ. ಯಾವುದೇ ಮುಂಜಾಗ್ರತೆ ಕ್ರಮಗಳ ಬಗ್ಗೆ ನಿರ್ಧರಿಸಿದೆ ಏಕಾಏಕಿ ಲಾಕ್ಡೌನ್ ಘೋಷಣೆ ಮಾಡಿದ ಮೋದಿ ಸರ್ಕಾರ ದೇಶದಲ್ಲಿ ಆರ್ಥಿಕ ಕುಸಿತಕ್ಕೆ ಕಾರಣವಾಯಿತು ಎಂದು ಟೀಕಿಸಿದ್ದರು.
Recommended Video
ಇದೀಗ, ಅದರ ಮುಂದುವರೆದ ಭಾಗ ಎಂಬಂತೆ ಜಗತ್ತಿನ ಇತರೆ ದೇಶಗಳು ಹಾಗೂ ಭಾರತದಲ್ಲಿ ಹೇಗೆ ಕೊರೊನಾ ವೈರಸ್ ಪ್ರಕರಣಗಳ ಏರಿಕೆ ಮತ್ತು ಇಳಿಕೆಯಾಗುತ್ತಿದೆ ಎಂಬುದನ್ನು ಗ್ರಾಫ್ ಮೂಲಕ ತೋರಿಸುತ್ತಿದ್ದಾರೆ.
ಎಲ್ಲ ದೇಶಗಳಲ್ಲಿ ಕೊರೊನಾ ಪ್ರಕರಣಗಳನ್ನು ನಿಯಂತ್ರಿಸಲು ಲಾಕ್ಡೌನ್ ಜಾರಿ ಮಾಡಿದರು. ಅದರಲ್ಲಿ ಸಫಲತೆ ಕಂಡಿದ್ದಾರೆ. ಆದರೆ, ಭಾರತ ಸರ್ಕಾರ ಮಾತ್ರ ಸೋಂಕು ಏರಿಕೆಯಾಗುತ್ತಿದ್ದರೂ ಲಾಕ್ಡೌನ್ ತೆರೆವುಗೊಳಿಸುತ್ತಿದೆ ಎಂದು ವ್ಯಂಗ್ಯ ಮಾಡಿದ್ದಾರೆ. ಮುಂದೆ ಓದಿ...
|
ಭಾರತದಲ್ಲಿ ಲಾಕ್ಡೌನ್ ವಿಫಲ
ಸ್ಪೇನ್, ಜರ್ಮನ್, ಇಟಲಿ, ಯುಕೆ ರಾಷ್ಟ್ರಗಳಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮಾಡಿತ್ತು. ಲಾಕ್ಡೌನ್ ಹಾಗೂ ಇನ್ನಿತರ ಮುನ್ನೆಚ್ಚರಿಕೆ ಕ್ರಮಗಳನ್ನು ಜರುಗಿಸಿದ ಬಳಿಕ ಈಗ ಆ ದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಆದರೆ, ಆ ದೇಶಗಳಿಗೆ ಹೋಲಿಸಿಕೊಂಡರೆ ಭಾರತ ಜಾರಿ ಮಾಡಿದ ಲಾಕ್ಡೌನ್ ಸಂಪೂರ್ಣ ವಿಫಲವಾಗಿದೆ ಎಂದು ರಾಹುಲ್ ಗಾಂಧಿ ಗ್ರಾಫ್ ಮೂಲಕ ಉದಾಹರಣೆ ನೀಡಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಭಾರತದಲ್ಲಿ ಪ್ರತಿದಿನದ ಸೋಂಕು ಏರಿಕೆ
ಭಾರತದಲ್ಲಿ ಪ್ರತಿದಿನ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದೆ. ಶುಕ್ರವಾರ ದೇಶದಲ್ಲಿ 9887 ಜನರಿಗೆ ಸೋಂಕು ದೃಢವಾಗಿದೆ. ಅಮೆರಿಕ, ಬ್ರೆಜಿಲ್ ಬಿಟ್ಟರೆ ಭಾರತದಲ್ಲಿ ದಿನವೊಂದರಲ್ಲಿ ಅತಿ ಹೆಚ್ಚು ಕೇಸ್ ವರದಿಯಾಗುತ್ತಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,36,657ಕ್ಕೆ ಏರಿದೆ.

6 ಸ್ಥಾನಕ್ಕೆ ಏರಿದ ಭಾರತ
ಅತಿ ಹೆಚ್ಚು ಸೋಂಕಿತರನ್ನು ಹೊಂದಿರು ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಈಗ ಆರನೇ ಸ್ಥಾನಕ್ಕೆ ಏರಿದೆ. ನಿನ್ನೆಯ ಅಂಕಿ ಅಂಶದ ಬಳಿಕ ಇಟಲಿ ದೇಶವನ್ನು ಹಿಂದಿಕ್ಕಿದ ಭಾರತ ಮೇಲಕ್ಕೆ ಜಿಗಿದಿದೆ. ಅಮೆರಿಕ (1,965,912), ಬ್ರೆಜಿಲ್ (646,006), ರಷ್ಯಾ (458,689), ಸ್ಪೇನ್ (288,058), ಯುಕೆ (283,311) ನಂತರ ಭಾರತ (2,36,657) ಸ್ಥಾನ ಪಡೆದುಕೊಂಡಿದೆ.

ಲಾಕ್ಡೌನ್ನಿಂದ ಅನ್ಲಾಕ್ ಕಡೆ ಭಾರತ
ದೇಶದಲ್ಲಿ ಕಡಿಮೆ ಸೋಂಕು ವರದಿಯಾಗುತ್ತಿದ್ದ ವೇಳೆ ಲಾಕ್ಡೌನ್ ಮಾಡಿದ ಸರ್ಕಾರ, ದಿನನಿತ್ಯ ಸುಮಾರು 10 ಸಾವಿರವರೆಗೂ ಸೋಂಕು ಪತ್ತೆಯಾಗುತ್ತಿರುವ ಇಂತಹ ಸಮಯದಲ್ಲಿ ಅನ್ಲಾಕ್ ಕಡೆ ಮುಖ ಮಾಡಿದೆ. ಇದು ದೇಶದ ಆರ್ಥಿಕತೆ ದೃಷ್ಟಿಯಿಂದ ಒಳ್ಳೆಯದು ಎನಿಸಿದರೂ, ಕೊರೊನಾ ವಿಚಾರದಲ್ಲಿ ಪರಿಸ್ಥಿತಿ ಕೈಮೀರುತ್ತಿದೆ ಎಂಬ ವಾದ ಕಾಂಗ್ರೆಸ್ ಪಕ್ಷದ್ದೂ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications