ರಾಜ್ಯದ ಮೂರು ಸಮುದಾಯ ಎಸ್ಟಿ ಗೆ ಸೇರ್ಪಡೆ
ನವದೆಹಲಿ, ಫೆಬ್ರವರಿ 11: 'ಪರಿವಾರ', 'ತಳವಾರ', 'ಸಿದ್ದಿ' ಸಮುದಾಯವನ್ನು ಎಸ್ಟಿ ಗೆ ಸೇರಿಸುವ ಮಸೂದೆಗೆ ಲೋಕಸಭೆ ಮಂಗಳವಾರ ಅಂಗೀಕಾರ ನೀಡಿತು.
ಈ ಮೂರೂ ಸಮುದಾಯವನ್ನು ಎಸ್ಟಿ ಗೆ ಸೇರ್ಪಡೆ ಮಾಡಬೇಕೆಂಬ ಮಸೂದೆಗೆ ಕಳೆದ ಡಿಸೆಂಬರ್ ನಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ರಾಜ್ಯಸಭೆಯು ಅಂಗೀಕಾರ ನೀಡಿತ್ತು. ಈಗ ಲೋಕಸಭೆಯು ಅಂಗೀಕಾರ ನೀಡಿದ್ದು, ರಾಷ್ಟ್ರಪತಿಗಳ ಅಂಕಿತ ಬಾಕಿ ಇದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 'ಪರಿವಾರ', 'ತಳವಾರ', 'ಸಿದ್ದಿ' ಜನಾಂಗದ ಜನರು ವಾಸಿಸುತ್ತಿದ್ದು. ಮಸೂದೆಯಿಂದ ಈ ಸಮುದಾಯದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸಿದಂತಾಗುತ್ತದೆ. ಸಮುದಾಯಕ್ಕೆ ಹೆಚ್ಚಿನ ಆದ್ಯತೆ ದೊರೆತಂತಾಗುತ್ತದೆ.

ಮಸೂದೆ ಕುರಿತು ಲೋಕಸಭೆಯಲ್ಲಿ ಕನ್ನಡದಲ್ಲಿಯೇ ಮಾತನಾಡಿದ ಪ್ರತಾಪ್ ಸಿಂಹ, 'ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಈ ಸಮುದಾಯದ ಜನರು ಮಾಡಿದ್ದ ಬೇಡಿಕೆ 36 ವರ್ಷಗಳ ನಂತರ ಈಡೇರುತ್ತಿದೆ. ಇದಕ್ಕೆ ಯಡಿಯೂರಪ್ಪ, ಮೋದಿ, ಅಮಿತ್ ಶಾ, ಸಿದ್ದರಾಮಯ್ಯ ಸೇರಿ ಅನೇಕರು ಅಭಿನಂದನಾರ್ಹರು' ಎಂದರು.
ವಿವಿಧ ರಾಜ್ಯಗಳ ಹಲವು ಸಂಸದರು ಮಸೂದೆ ಕುರಿತು ಮಾತನಾಡಿ, ವಿವಿಧ ರಾಜ್ಯಗಳಲ್ಲಿ ಈ ಜನಾಂಗದ ಜನರನ್ನು ಬೇರೆ-ಬೇರೆ ಹೆಸರಿನಿಂದ ಕರೆಯಲಾಗುತ್ತದೆ. ಇವರಿಗೆ ಎಸ್ಟಿ ಗೆ ಸೇರ್ಪಡೆಗೊಳಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications