ರಾಜಸ್ತಾನ ವಿಧಾನಸಭೆ ಬಿಜೆಪಿ ಟಿಕೆಟ್ ಬಗ್ಗೆ ಕೊನೆಯಾಗದ ಚರ್ಚೆ
ರಾಜಸ್ತಾನ ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಇನ್ನೂ ಕೆಲ ದಿನ ಅಂತಿಮವಾಗುವಂತೆ ಕಾಣುತ್ತಿಲ್ಲ. ಇನ್ನಷ್ಟು ಸುತ್ತಿನ ಚರ್ಚೆ ನಡೆದ ನಂತರ ಹೆಸರು ಆಖೈರು ಮಾಡುವ ಸಾಧ್ಯತೆ ಇದೆ. ಕ್ಷೇತ್ರವಾರು ಸಮೀಕ್ಷೆಯೇನೋ ಪೂರ್ಣಗೊಂಡಿದೆ. ಅದಕ್ಕೆ ಸಂಬಂಧಿಸಿದ ಸಂಪೂರ್ಣ ದತ್ತಾಂಶವೂ ಕಲೆಹಾಕಲಾಗಿದೆ. ಆದರೆ ಅಭ್ಯರ್ಥಿಗಳ ಆಯ್ಕೆ ಇನ್ನಷ್ಟು ತಡವಾಗಲಿದೆ.
ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ರಾಜಸ್ತಾನದ ಉಸ್ತುವಾರಿಯಾಗಿ ಮಾಡಲಾಗಿದೆ. ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಅವರು ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ವರ್ಚಸ್ಸು ಹೆಚ್ಚಿಸುವುದನ್ನು ಅವರು ಆದ್ಯತೆ ಮೇಲೆ ಮಾಡುತ್ತಿದ್ದಾರೆ ಎನ್ನುತ್ತವೆ ಮೂಲಗಳು. ಪಕ್ಷದೊಳಗಿನ ಸಾಮಾಜಿಕ ಮಾಧ್ಯಮ ಘಟಕ, ಮಾಧ್ಯಮ ಘಟಕ, ವಕ್ತಾರರು ಒಟ್ಟಾರೆ ಪಕ್ಷಕ್ಕೆ ಆಂತರಿಕವಾಗಿ ಬಲ ತುಂಬಲು ಜಾವಡೇಕರ್ ಶ್ರಮಿಸುತ್ತಿದ್ದಾರೆ.
ಎಲ್ಲಕ್ಕಿಂತ ಮುಖ್ಯವಾಗಿ ಕೇಸರಿ ಪಕ್ಷಕ್ಕೆ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ. ಈ ಗುಂಪಿಗೆ ಅಷ್ಟು, ಆ ಗುಂಪಿಗೆ ಇಷ್ಟು ಎಂದು ಸುಮ್ಮನೆ ಟಿಕೆಟ್ ಹಂಚಿಕೆ ಮಾಡುವುದು ಬೇಕಿಲ್ಲ. ಆ ಕಾರಣದಿಂದಲೇ ಪ್ರತಿ ಅಭ್ಯರ್ಥಿಯೂ ಜಾವಡೇಕರ್ ಪಾಲಿಗೆ ಗಂಭೀರ ಆಯ್ಕೆಯಾಗಲಿದ್ದಾರೆ ಎನ್ನುತ್ತವೆ ಮೂಲಗಳು.

ವಸುಂಧರಾ ರಾಜೇ-ಓಂ ಮಾಥುರ್ ಭೇಟಿ
ಅಂತಿಮ ಹಂತದ ಆಯ್ಕೆಗೂ ಮುನ್ನ ಇನ್ನಷ್ಟು ಸುತ್ತಿನ ಚರ್ಚೆ ಆಗಬೇಕಿದೆ ಎನ್ನುತ್ತಾರೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಓಂ ಮಾಥುರ್. ಪಕ್ಷದ ಅಧ್ಯಕ್ಷ ಅಮಿತ್ ಶಾರನ್ನು ದೆಹಲಿಯಲ್ಲಿ ಭೇಟಿ ಆಗುವ ಮುನ್ನ ಜೈಪುರದಲ್ಲಿ ಮಾಥುರ್ ರನ್ನು ಮುಖ್ಯಮಂತ್ರಿ ವಸುಂಧರಾ ರಾಜೇ ಭೇಟಿ ಆಗಿದ್ದಾರೆ.

ಒಮ್ಮತದ ತೀರ್ಮಾನವೇ ತೆಗೆದುಕೊಳ್ತೀವಿ
ಆ ಭೇಟಿ ನಂತರ ಮಾತನಾಡಿದ ಮಾಥುರ್, ಟಿಕೆಟ್ ಹಂಚಿಕೆ ವಿಚಾರವಾಗಿ ಇನ್ನೂ ಒಮ್ಮತದ ತೀರ್ಮಾನಕ್ಕೆ ಬಂದಿಲ್ಲ. ಬಿಜೆಪಿಯಲ್ಲಿ ಯಾವಾಗಲೂ ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ. ಒಟ್ಟಿನಲ್ಲಿ ಪಕ್ಷದಲ್ಲಿ ಗೊಂದಲ ಹಾಗೇ ಮುಂದುವರಿದಿರುವುದು ಸತ್ಯ.

ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜತೆಗೂ ಚರ್ಚೆ
ಸದ್ಯದಲ್ಲೇ ಪಕ್ಷದ ರಾಷ್ಟ್ರಾಧ್ಯಕ್ಷರನ್ನು ಭೇಟಿಯಾಗಿ, ಚರ್ಚೆ ನಡೆಸುತ್ತೇವೆ. ಟಿಕೆಟ್ ಘೋಷಣೆಗೂ ಮುನ್ನ ಇನ್ನಷ್ಟು ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂದು ಮಾಥುರ್ ಹೇಳಿದ್ದಾರೆ. ಇನು ವಸುಂಧರಾ ರಾಜೇ ಅವರ ಭೇಟಿಗೂ ಮುನ್ನ ಮಾಥುರ್, ರಾಜಸ್ತಾನ ಸರಕಾರದ ಸಚಿವ ರಾಜೇಂದ್ರ ರಾಥೋಡ್ ನನ್ನು ಸಹ ಭೇಟಿಯಾಗಿದ್ದು, ದೀರ್ಘ ಕಾಲದ ಚರ್ಚೆ ನಡೆಸಿದ್ದಾರೆ.

79 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ
ಇಬ್ಬರೂ ನಾಯಕರು ಪಕ್ಷದ ರಾಷ್ಟ್ರಾಧ್ಯಕ್ಷರನ್ನು ಭೇಟಿ ಮಾಡಲು ದೆಹಲಿಯಲ್ಲಿ ಇದ್ದಾರೆ. ರಾಜಸ್ತಾನ ವಿಧಾನಸಭೆಯ 79 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ಆಗಿದೆ. ಆದರೆ ಚರ್ಚೆ ಮುಂದುವರಿದಿದೆ. ರಾಜಸ್ತಾನದಲ್ಲಿ ಚುನಾವಣೆ ಪ್ರಚಾರದ ನೇತೃತ್ವದ ವಹಿಸಿರುವ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರನ್ನು ಅಮಿತ್ ಶಾ ಭೇಟಿ ಆಗಿ, ಚರ್ಚೆ ನಡೆಸಲಿದ್ದಾರೆ. ಇನ್ನು ಪಕ್ಷದ ರಾಷ್ಟ್ರೀಯ ಸಂಘಟನಾ ಜಂಟಿ ಪ್ರಧಾನ ಕಾರ್ಯದರ್ಶಿ ವಿ.ಸತೀಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಜತೆಗೂ ಟಿಕೆಟ್ ಹಂಚಿಕೆ ಮಾತ್ರವಲ್ಲದೆ ರಾಜಸ್ತಾನದ ಒಟ್ಟಾರೆ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಲಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications