"3 ದಿನ, 3 ಮಸೂದೆ? ಇದೇನು ಪಿಜ್ಜಾ ಡೆಲಿವರಿ ಅಂದ್ಕೊಂಡ್ರಾ!"
ನವದೆಹಲಿ, ಜುಲೈ 31: ಕೇಂದ್ರ ಸರ್ಕಾರ ಅವಸರವಸರವಾಗಿ ಕೆಲವು ಮಹತ್ವದ ಮಸೂದೆಗಳನ್ನು ಮಂಡಿಸುತ್ತಿರುವುದನ್ನು ಪ್ರಶ್ನಿಸಿದ ತೃಣಮೂಲ ಕಾಂಗ್ರೆಸ್ ಮುಖಂಡ ಡೆರೆಕ್ ಒ ಬ್ರಿಯನ್, 'ಇದೇನು ಪಿಜ್ಜಾ ಡೆಲಿವರಿ ಅಂದ್ಕೊಂಡ್ರಾ' ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾನೂನನ್ನು ಜಾರಿಗೆ ತರುವುದು ಎಂದರೆ ಅಷ್ಟೊಂದು ಸುಲಭವೇ? ಮೂರು ದಿನದಲ್ಲಿ ಮೂರು ಮಹತ್ವದ ಮಸೂದೆಗಳನ್ನು ಅಂಗೀಕರಿಸುವುದು ಎಂದರೆ ಏನು? ಅದೇನು ಪಿಜ್ಜಾ ಡೆಲಿವರಿ ಮಾಡಿದಂತೆಯೇ ಅಂದ್ಕೊಂಡ್ರಾ? ಎಂದು ಬ್ರಿಯನ್ ಖಾರವಾಗಿ ಪ್ರಶ್ನಿಸಿದ್ದಾರೆ.
ಸಂಸತ್ತಿನಲ್ಲೂ ಈ ಬಗ್ಗೆ ಮಾತನಾಡಿದ್ದ ಬ್ರಿಯನ್, ಟ್ವಿಟ್ಟರ್ ನಲ್ಲೂ ಇದೇ ಪ್ರಶ್ನೆಯನ್ನು ಎತ್ತಿದ್ದಾರೆ. ಜೊತೆಗೆ 2004 ರಿಂದ ಇಲ್ಲಿಯವರೆಗಿನ ಐದೈದು ವರ್ಷಗಳ ಸರ್ಕಾರದ ಅವಧಿಯಲ್ಲಿ ಎಷ್ಟು ಮಸೂದೆಗಳನ್ನು ಮಂಡಿಸಲಾಗಿದೆ ಎಂಬ ಬಗ್ಗೆಯೂ, ಅವುಗಳಲ್ಲಿ ಯಾವುದನ್ನು ಕೂಲಂಕಷ ಪರಿಶೀಲನೆಗೆ ಅಂಗೀಕರಿಸದೆ ಬಿಡಲಾಗಿತ್ತು ಎಂಬ ಮಾಹಿತಿಯುಳ್ಳ ಚಾರ್ಟ್ ಅನ್ನು ಅವರು ಟ್ವಿಟ್ಟರ್ ನಲ್ಲಿ ಲಗತ್ತಿಸಿದ್ದಾರೆ.

ಕಳೆದ ಕೆಲವೇ ದಿನಗಳ ಅವಧಿಯಲ್ಲಿ ಸಂಸತ್ತಿನಲ್ಲಿ ತ್ರಿವಳಿ ತಲಾಕ್(ಮುಸ್ಲಿಂ ಮಹಿಳೆಯರ ಕಾಯ್ದೆ), ಆರ್ ಟಿಐ ಕಾಯ್ದೆ ಮತ್ತು ಮೆಡಿಕಲ್ ಕಮಿಶನ್ ಬಿಲ್ ಅನ್ನು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿತ್ತು.
ಕೆಲವು ಮಹತ್ವದ ಮಸೂದೆಗಳನ್ನು ಮಂಡಿಸುವ ಸಲುವಾಗಿಯೇ ಜುಲೈ 26 ಕ್ಕೆ ಮುಗಿಯಬೇಕಿದ್ದ ಮುಂಗಾರು ಅಧಿವೇಶನವನ್ನು ಆಗಸ್ಟ್ 7 ರವರೆಗೆ ಅಂದರೆ ಹತ್ತು ದಿನಗಳ ಕಾಲ ಕೇಂದ್ರ ಸರ್ಕಾರ ಮುಂದೂಡಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications