ಕೆಂಪುಕೋಟೆಯಲ್ಲಿ ರೈತರು ಧ್ವಜ ಹಾರಿಸಿದ್ದು ಖಂಡನೀಯ: ಸಚಿವ ಪ್ರಹ್ಲಾದ್
ನವದೆಹಲಿ, ಜನವರಿ 26: ಐತಿಹಾಸಿಕ ಕೆಂಪುಕೋಟೆಗೆ ರೈತರು ಪ್ರವೇಶಿಸಿದ್ದು ಖಂಡನೀಯ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಪಟೇಲ್ ಹೇಳಿದ್ದಾರೆ.
ಐತಿಹಾಸಿಕ ಕೆಂಪು ಕೋಟೆಗೆ ಪ್ರವೇಶಿಸಿ ರೈತರು ಧ್ವಜ ಹಾರಿಸಿರುವುದು ದೇಶದ ಪ್ರಜಾಪ್ರಭುತ್ವದ ಘನತೆಗೆ ಮಾಡಿದ ಅಗೌರವ ಎಂದು ಅವರು ಹೇಳಿದ್ದಾರೆ.
ಕೆಂಪುಕೋಟೆ ನಮ್ಮ ಪ್ರಜಾಪ್ರಭುತ್ವದ ಘನತೆಯ ಸಂಕೇತವಾಗಿದೆ.
ರೈತರು ಅದರಿಂದ ದೂರ ಇರಬೇಕು.ಈ ಘನತೆಯನ್ನು ಉಲ್ಲಂಘಿಸಿರುವುದನ್ನು ಖಂಡಿಸುತ್ತೇನೆ. ಇದು ದುರದೃಷ್ಟಕರ ಮತ್ತು ವಿಷಾದದ ಘಟನೆಯಾಗಿದೆ ಎಂದು ಪಟೇಲ್ ಟ್ವೀಟ್ ಮಾಡಿದ್ದಾರೆ.

ಉದ್ದೇಶಿತ ಟ್ರ್ಯಾಕ್ಟರ್ ಪರೇಡ್ಗಾಗಿ ಗೊತ್ತುಪಡಿಸಿದ ಮಾರ್ಗದಿಂದ ವಿಮುಖರಾಗಿ ಪೊಲೀಸರಿಂದ ಹಿಂದಕ್ಕೆ ಕಳುಹಿಸಲಾದ ಪ್ರತಿಭಟನಾಕಾರರ ಗುಂಪೊಂದು ಕೆಂಪು ಕೋಟೆಯ ಕಡೆಗೆ ನುಗ್ಗಿದೆ. ಕೆಲ ರೈತರು ಹಾಗೂ ನಿಹಾಂಗ್ ( ಸಾಂಪ್ರದಾಯಿಕ ಸಿಖ್ ಯೋಧರು) ಕೆಂಪು ಕೋಟೆ ಪ್ರವೇಶಿಸಿದ್ದು, ಧ್ವಂಜಸ್ತಂಭವನ್ನೇರಿ ಬಾವುಟ ಹಾರಿಸಿದ್ದಾರೆ.
ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ದೆಹಲಿಯ ಕೆಂಪುಕೋಟೆಗೆ ಮುತ್ತಿಗೆ ಹಾಕಿದ ರೈತರು ಧ್ವಜಸ್ತಂಭ ಮತ್ತು ಕೆಂಪುಕೋಟೆಯ ಗುಂಬಜ್ ಮೇಲೆ ಕಿಸಾನ್ ಮತ್ತು ಸಿಖ್ ಬಾವುಟವನ್ನು ಹಾರಿಸಲಾಗಿದೆ.
ಈ ವೇಳೆ ಪೊಲೀಸರು ಹರಸಾಹಸ ಪಟ್ಟು ರೈತರನ್ನು ಚದುರಿಸಬೇಕಾಯಿತು. ಲಾಠಿ ಚಾರ್ಜ್ ಮತ್ತು ಟಿಯರ್ ಗ್ಯಾಸ್ ಪ್ರಯೋಗಿಸುತ್ತಾ ಪೊಲೀಸರು ರೈತರನ್ನು ಕೆಂಪುಕೋಟೆ ಆವರಣದಿಂದ ಚದುರಿಸುತ್ತಿದ್ದಾರೆ.
ಕೆಂಪುಕೋಟೆಗೆ ನುಗ್ಗಿದ ರೈತರು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜ ಹಾರಿಸುವ ಧ್ವಜಸ್ಥಂಭದ ಮೇಲೆ ಕಿಸಾನ್ ಮತ್ತು ಸಿಖ್ ಧ್ವಜವನ್ನು ಹಾರಿಸಿದ್ದಾರೆ. ಇನ್ನು ಕೆಲ ರೈತರು ಗುಂಜಬ್ ಮೇಲೆ ಸಿಖ್ ಧ್ವಜವನ್ನು ಹಾರಿಸಿದ್ದಾರೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications