ವಿರೋಧದ ನಡುವೆಯೂ ಎರಡು ಪ್ರಮುಖ ಮಸೂದೆ ಅಂಗೀಕಾರ
ನವದೆಹಲಿ, ಜುಲೈ 25: ವಿಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಸಂಸತ್ನಲ್ಲಿ ಇಂದು ಎರಡು ಪ್ರಮುಖ ಮಸೂದೆಗಳು ಅಂಗೀಕಾರವಾಗಿವೆ.
ಲೋಕಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಇಂದು ಅಂಗೀಕಾರವಾಗಿದೆ. ಆದರೆ ಇದಕ್ಕೆ ತೃಣಮೂಲ ಕಾಂಗ್ರೆಸ್, ಕಾಂಗ್ರೆಸ್ ಮತ್ತು ಇತರೆ ವಿಪಕ್ಷಗಳು ಪ್ರಬಲ ವಿರೋಧವನ್ನು ವ್ಯಕ್ತಪಡಿಸಿದ್ದವು.
ಬಹು ಚರ್ಚೆ, ವಿರೋಧದ ಬಳಿಕ, ತೃಣಮೂಲ ಕಾಂಗ್ರೆಸ್, ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಮಸೂದೆಯನ್ನು ವಿರೋಧಿಸಿ ಸದನದಿಂದ ಹೊರೆನಡೆದವು. ಅಂತಿಮವಾಗಿ ದ್ವನಿ ಮತದ ಮೂಲಕ ತ್ರಿವಳಿ ತಲಾಖ್ ಮಸೂದೆ ಅಂಗೀಕಾರವಾಯಿತು.

ರಾಜ್ಯಸಭೆಯಲ್ಲಿ ಇಂದು ಆರ್ಟಿಐ ಕಾಯ್ದೆ ತಿದ್ದುಪತಿಗೆ ಅಂಗೀಕಾರ ದೊರೆಯಿತು. ಅಲ್ಲಿಯೂ ಸಹ ಕಾಂಗ್ರೆಸ್ ಪಕ್ಷದ ಸದಸ್ಯರು ತಿದ್ದುಪಡಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.
ಗುಲಾಂ ನಬಿ ಆಜಾದ್ ಸೇರಿದಂತೆ ಕಾಂಗ್ರೆಸ್ ಹಾಗೂ ವಿಪಕ್ಷಗಳ ಹಲವು ಸದಸ್ಯರು ಆರ್ಟಿಐ ಕಾಯ್ದೆಯ ತಿದ್ದುಪಡಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ತಿದ್ದುಪಡಿಯು ಕಾಯ್ದೆಯನ್ನು ನಿಶ್ಯಕ್ತಗೊಳಿಸುತ್ತದೆ ಎಂದು ವಾದಿಸಿದರು ಆದರೆ ಅಂತಿಮವಾಗಿ ತಿದ್ದುಪಡಿ ಅಂಗೀಕಾರವಾಯಿತು.
ರಾಜ್ಯಸಭೆಯಲ್ಲಿಯೂ ಸಹ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಕಾಯ್ದೆಯ ತಿದ್ದುಪಡಿ ವಿರೋಧಿಸಿ ಸದನದಿಂದ ಹೊರನಡೆದರು.
ಇದೇ ದಿನ ಲೋಕಸಭೆಯ ಕಲಾಪವನ್ನು ಆಗಸ್ಟ್ 7 ರವರೆಗೆ ನಡೆಸುವ ನಿರ್ಣಯವನ್ನೂ ತೆಗೆದುಕೊಳ್ಳಲಾಯಿತು. ಜೂನ್ 17 ರಂದು ಆರಂಭವಾಗಿರುವ ಸಂಸತ್ ಮುಂಗಾರು ಅಧಿವೇಶನವು ಜುಲೈ 26 ಕ್ಕೆ ಮುಕ್ತಾಯವಾಗಬೇಕಿತ್ತು. ಆದರೆ ಮಸೂದೆಗಳು ಮಂಡನೆ ಆಗಬೇಕಿರುವ ಕಾರಣ ಹತ್ತು ದಿನಗಳ ಕಾಲ ಹೆಚ್ಚಿಗೆ ಅಧಿವೇಶನ ನಡೆಸಲಾಗುತ್ತಿದ್ದು, ಆಗಸ್ಟ್ 7 ರಂದು ಅಧಿವೇಶನ ಕೊನೆಗೊಳ್ಳಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications