ಗದ್ದಲದ ನಡುವೆಯೇ ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆ ಮಂಡನೆ
ನವದೆಹಲಿ, ಜನವರಿ 03: ರಾಜ್ಯಸಭೆಯಲ್ಲಿ ಇಂದು ಕೇಂದ್ರ ಸಚಿವ ಕಾನೂನು ಸಚಿವ ರವಿಶಂಕರ್ ಅವರು ಗದ್ದಲದ ನಡುವೆಯೇ ತ್ರಿವಳಿ ತಲಾಖ್ ಮಸೂದೆ ಮಂಡನೆ ಮಾಡಿದರು.
ತ್ರಿವಳಿ ತಲಾಖ್ ಮಸೂದೆಯು ಡಿಸೆಂಬರ್ 23ರಂದು ಲೋಕಸಭೆಯಲ್ಲಿ ಮಸೂದೆ ಮಂಡನೆಯಾಗಿ ರಾಜ್ಯಸಭೆಗೆ ವರ್ಗಾಯಿಸಲ್ಪಟ್ಟಿತ್ತು. ಆದರೆ ಇಂದು ಕಾಂಗ್ರೆಸ್ ಸೇರಿದಂತೆ ಕೆಲವು ಸದಸ್ಯರು ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಬಿಜೆಪಿ ಬೇಸರ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಸಂಸದ ಆನಂದ್ ಶರ್ಮಾ ಅವರು ಮಸೂದೆಯನ್ನು ಸೆಲೆಕ್ಟ್ ಕಮಿಟಿಗೆ ಕಳುಹಿಸುವಂತೆ ನೋಟೀಸ್ ನೀಡಿದರು ಹಾಗೂ ಸೆಲೆಕ್ಟ್ ಕಮಿಟಿಯ ಸದಸ್ಯರನ್ನೂ ಸೂಚಿಸದರು. ಇದಕ್ಕೆ ಹಣಕಾಸು ಸಚಿವ ಅರುಣ್ ಜೇಟ್ಲಿ ತೀರ್ವ ಬೇಸರ ವ್ಯಕ್ತಪಡಿಸಿದರು.
ಕಲಾಪದ ನಂತರ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು 'ಕಾಂಗ್ರೆಸ್ ಸದಸ್ಯರು ಲೋಕಸಭೆಯಲ್ಲಿ ಮಸೂದೆಗೆ ಬೆಂಬಲ ಸೂಚಿಸಿ ಈಗ ರಾಜ್ಯಸಭೆಯಲ್ಲಿ ವಿರೋಧ ವ್ಯಕ್ತಪಡಿಸಿರುವುದು ಅವರ ಇಬ್ಬಂದಿತನವನ್ನು ಸೂಚಿಸುತ್ತದೆ, ಲೋಕಸಭೆಯಲ್ಲಿ ಅವರ ಸಂಖ್ಯೆ ಕಡಿಮೆ ಇತ್ತು ಹಾಗಾಗಿ ಅಷ್ಟೆ ಅವರು ಬೆಂಬಲ ಸೂಚಿಸಿದ್ದರು, ಜನರ ಹಿತದೃಷ್ಠಿಯಿಂದ ಅಲ್ಲ' ಎಂದಿದ್ದಾರೆ.

ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದರ ಬಗ್ಗೆ ಮಾತನಾಡಿದ ತೃಣಮೂಲ ಕಾಂಗ್ರೆಸ್ ನ ಸಂಸದ ಡೆರೆಕ್ ಓ ಬ್ರಿಯನ್ ಅವರು "ಇದೊಂದು ದೋಷಪೂರಿತ ಮಸೂದೆಯಾಗಿದ್ದು, ಯಾವುದೇ ಮಹಿಳಾ ಸಂಘಗಳು, ಭಾದಿತರೊಂದಿಗೆ ಬಳಿ ಚರ್ಚೆ ನಡೆಸದೆ ಮಸೂದೆ ತಯಾರಿಸಲಾಗಿದೆ, ಮಹಿಳಾ ಸಂಘ ಹಾಗೂ ಭಾದಿತರೊಂದಿಗೆ ಜೊತೆ ಮಾತನಾಡಿ ಮಸೂದೆ ಮಂಡಿಸಿ ಎಂದಷ್ಟೆ ನಾವು ಕೇಳುತ್ತಿದ್ದೇವೆ' ಎಂದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications