ತಲಾಖ್ ತಲಾಖ್ ತಲಾಖ್ ಗೆ ಭೇಷ್ ಭೇಷ್ ಭೇಷ್ ಎಂದ ಟ್ವಿಟ್ಟಿಗರು
ನವದೆಹಲಿ, ಆಗಸ್ಟ್ 22: ವಿವಾದಿತ ತ್ರಿವಳಿ ತಲಾಖ್ ಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ಇಂದು(ಆಗಸ್ಟ್ 22) ನೀಡಿದ ಐತಿಹಾಸಿಕ ತೀರ್ಪಿಗೆ ಹಲವು ಗಣ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಜೆ.ಎಸ್.ಖೇಹರ್ ನೇತ್ರತ್ವದ ಪಂಚ ಸದಸ್ಯ ಪೀಠ ತ್ರಿವಳಿ ತಲಾಖ್ ಅನ್ನು ಅಸಾಂವಿಧಾನಿಕ ಎಂದಿದೆ. ಆರು ತಿಂಗಳ ಕಾಲ ತ್ರಿವಳಿ ತಲಾಖ್ ಪದ್ಧತಿಗೆ ತಡೆ ನೀಡಲಾಗಿದ್ದು, ಆರು ತಿಂಗಳೊಳಗೆ ಈ ಸಂಬಂಧ ಕಾನೂನನ್ನು ಜಾರಿಗೆ ತರುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ತಿಳಿಸಿದೆ.
ಎಷ್ಟೋ ಇಸ್ಲಾಂ ದೇಶಗಳಲ್ಲೇ ತಲಾಖ್ ನಿಷೇಧಿಸಲಾಗಿದ್ದರೂ, ಭಾರತದಲ್ಲಿ ಅದರ ಆಚರಣೆ ಏಕೆ ಎಂದು ಸುಪ್ರೀಂ ಪ್ರಶ್ನಿಸಿದೆ. ಈ ಮೂಲಕ ತ್ರಿವಳಿ ತಲಾಖ್ ಎಂಬ ಅಸಂಬದ್ಧ ಪದ್ಧತಿಗೆ ಬ್ರೇಕ್ ಬಿದ್ದಂತಾಗಿದೆ.
|
ಹೊಸ ಯುಗದ ಆರಂಭ
ತ್ರಿವಳಿ ತಲಾಖ್ ಕುರಿತು ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ತೀರ್ಪು ಮುಸ್ಲಿಂ ಮಹಿಳೆಯರ ಸ್ವಾಭಿಮಾನ ಮತ್ತು ಸಮಾನತೆಯ ಬದುಕಿನ ಹೊಸ ಯುಗಕ್ಕೆ ನಾಂದಿಹಾಡಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
|
ತಸ್ಲಿಮಾ ನಸ್ರಿನ್
ಕುರಾನ್ (2:229) ತ್ರಿವಳಿ ತಲಾಖ್ ಬಗ್ಗೆ ಹೇಳುತ್ತದೆ. ಕುರಾನ್(4:34) ಪತ್ನಿಗೆ ಹೊಡೆಯುವುದರ ಬಗ್ಗೆಯೂ ಹೇಳುತ್ತದೆ. ಈ 1400 ವರ್ಷ ಹಳೆಯ ಕುರಾನ್ ಕಾನೂನನ್ನು ನಿಷೇಧಿಸಿ. ಸಮಾನತೆಯ ಆಧಾರದ ಮೇಲೆ ಹೊಸ ಕಾನೂನನ್ನು ಜಾರಿಗೆ ತರುವ ಅಗತ್ಯವಿದೆ ಎಂದು ಪ್ರಖ್ಯಾತ ಲೇಖಕಿ ತಸ್ಲಿಮಾ ನಸ್ರೀನ್ ಟ್ವೀಟ್ ಮಾಡಿದ್ದಾರೆ.
|
ತೀರ್ಪಿಗೆ ಸ್ವಾಗತ!
ಸರ್ವೋಚ್ಚ ನ್ಯಾಯಾಲಯ ಇಂದು ನೀಡಿದ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ತ್ರಿವಳಿ ತಲಾಖ್ ನಂಥ ಕ್ರೂರ ಪದ್ಧತಿಗೆ ನಾಗರಿಕ ಸಮಾಜದಲ್ಲಿ ಯಾವತ್ತಿಗೂ ಜಾಗವಿರಬಾರದು ಎಂದು ಉಡುಪಿ-ಚಿಕ್ಕಮಗಳೂರು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದಾರೆ.
|
ಸತ್ಯಮೇವ ಜಯತೆ!
ಸತ್ಯಮೇವ ಜಯತೆ! ಮುಸ್ಲಿಂ ಮಹಿಳೆಯರ ಧೈರ್ಯ, ನರೇಂದ್ರ ಮೋದಿ ಸರ್ಕಾರದ ಕಳಕಳಿ ಮತ್ತು ಸರ್ವೋಚ್ಚ ನ್ಯಾಯಾಲಯದ ನ್ಯಾಯಯುತ ತೀರ್ಪು ಇಂದು ತ್ರಿವಳಿ ತಲಾಖ್ ನಿಂದ ಮುಕ್ತಿ ನೀಡಿದೆ ಎಂದು ಯೋಗ ಗುರು ಬಾಬಾ ರಾಮದೇವ ಟ್ವೀಟ್ ಮಾಡಿದ್ದಾರೆ.
|
ಐತಿಹಾಸಿಕ ಮೈಲಿಗಲ್ಲು
ತ್ರಿವಳಿ ತಲಾಖ್ ಅನ್ನು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಭಾರತೀಯ ಮಹಿಳಾ ಹಕ್ಕು ಹೋರಾಟದ ಐತಿಹಾಸಿಕ ಮೈಲಿಗಲ್ಲು ಎಂದು ತುಫೈಲ್ ಅಹ್ಮದ್ ಟ್ವೀಟ್ ಮಾಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications