ಕಲ್ಲೇಟು ತಿಂದ ಅಲಕಾ ವಿರುದ್ಧ ಪೊಲೀಸರಿಂದ ಎಫ್ಐಆರ್
ನವದೆಹಲಿ, ಆಗಸ್ಟ್ 10: ಆಮ್ ಆದ್ಮಿ ಪಕ್ಷದ ಶಾಸಕಿ ಅಲಕಾ ಲಂಬಾ ಅವರ ಕಲ್ಲೇಟು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಉತ್ತರ ದೆಹಲಿಯಲ್ಲಿ ಶಾಸಕಿ ಅಲಕಾ ಅವರು ಅಂಗಡಿ ಮಳಿಗೆಗೆ ನುಗ್ಗಿ ದುಂಡಾವರ್ತನೆ ಮಾಡಿದ ಆರೋಪ ಹೊತ್ತಿದ್ದು, ಪೊಲೀಸರು ಈ ಸಂಬಂಧ ದೂರು ದಾಖಲಿಸಿಕೊಂಡು ಎಫ್ ಐಆರ್ ಹಾಕಿದ್ದಾರೆ.
ಸಿಎನ್ಎನ್ ಐಬಿಎನ್ ವರದಿ ಪ್ರಕಾರ, ಶಾಸಕಿ ಅಲಕಾ ಅವರು ಅಂಗಡಿ ಮಳಿಗೆಗೆ ಕಾಲಿಟ್ಟು ಅಲ್ಲಿದ್ದ ಬಿಲ್ ಕಟ್ಟುವ ಯಂತ್ರವನ್ನು ದೂಡುತ್ತಾರೆ. ನಂತರ ಇತರೆ ಕಾರ್ಯಕರ್ತರು ಒಳಗೆ ನುಗ್ಗಿ ದಾಂಧಲೆ ಮಾಡುತ್ತಾರೆ. ಈ ದೃಶ್ಯಗಳಿರುವ ಸಿಸಿಟಿವಿ ಕ್ಲಿಪ್ಪಿಂಗ್ ಗಳು ಬಿಡುಗಡೆಯಾದ ಬೆನ್ನಲ್ಲೇ ಪೊಲೀಸರು ಕ್ರಮ ಜರುಗಿಸಿದ್ದಾರೆ.[ಅಲಕಾ ಲಂಬಾ ತಲೆಗೆ ಗುನ್ನ, ಬಿಜೆಪಿಯೇ ಕಾರಣ: ಎಎಪಿ]

ಭಾರತೀಯ ದಂಡ ಸಂಹಿತೆ ಸೆಕ್ಷನ್ 451,427,186, 353 ಅನ್ವಯ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡು ಎಫ್ ಐಆರ್ ಹಾಕಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಈ ಘಟನೆಯಲ್ಲಿ ಪ್ರಮುಖ ಸಾಕ್ಷಿಯಾಗಿದ್ದು, ಇದರ ಪರಿಶೀಲನೆ ಜಾರಿಯಲ್ಲಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಿಎಸ್ ಬಸ್ಸಿ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷದ ಶಾಸಕಿ ಅಲಕಾ ಅವರು ಉತ್ತರ ದೆಹಲಿಯ ರಾಜ್ ಘಾಟ್ ಪ್ರದೇಶದ ಕಾಶ್ಮೀರಿ ಗೇಟ್ ಬಳಿ ಮಾದಕ ವ್ಯಸನ ಕುರಿತಂತೆ ಭಾಷಣ ಆರಂಭಿಸುತ್ತಿದ್ದಂತೆ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲು ತೂರಾಟ ನಡೆಸಿದ ಘಟನೆ ಭಾನುವಾರ ನಡೆದಿತ್ತು. ಈ ಸಂಬಂಧ ಓರ್ವ ವ್ಯಕ್ತಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. ಈ ಘಟನೆಗೆ ಬಿಜೆಪಿ ಓಂ ಪ್ರಕಾಶ್ ಅವರೆ ಕಾರಣ ಎಂದು ಎಎಪಿ ಮುಖಂಡ ಆಶುತೋಷ್ ಕಿಡಿಕಾರಿದ್ದನ್ನು ಇಲ್ಲಿ ಸ್ಮರಿಸಬಹುದು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications