ರಮ್ಯಾ ಮೇಡಂ ಈಗ ಸೋಶಿಯಲ್ ಮೀಡಿಯಾ ಹೆಡ್: ಟ್ವಿಟ್ಟಿಗರು ಏನಂತಾರೆ?
ಕನ್ನಡತಿ, ಮಾಜಿ ಸಂಸದೆ ರಮ್ಯಾ ಅವರನ್ನು ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಮುಖ್ಯಸ್ಥೆಯನ್ನಾಗಿ ನೇಮಿಸಿರುವುದನ್ನು ಆಕೆಯ ಅಭಿಮಾನಿಗಳು ಟ್ವಿಟ್ಟರ್ ನಲ್ಲಿ ಮುಕ್ತ ಕಂಠದಿಂದ ಸ್ವಾಗತಿಸಿದ್ದಾರೆ.
ನವದೆಹಲಿ, ಮೇ 10: ಕನ್ನಡತಿ, ಮಾಜಿ ಸಂಸದೆ ರಮ್ಯಾ ಅವರನ್ನು ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಮುಖ್ಯಸ್ಥೆಯನ್ನಾಗಿ ನೇಮಿಸಿರುವುದನ್ನು ಕನ್ನಡಿಗರು ಮುಕ್ತ ಕಂಠದಿಂದ ಸ್ವಾಗತಿಸಿದ್ದಾರೆ. ಹಲವರು ಟೀಕಿಸಿದ್ದಾರೆ ಕೂಡ!
ಹಲವು ಚುನಾವಣೆಗಳ ಸತತ ಸೋಲಿನ ನಂತರ ಎಚ್ಚೆತ್ತುಕೊಂಡ ಕಾಂಗ್ರೆಸ್ 17 ಕ್ಕೂ ಹೆಚ್ಚು ಕಾರ್ಯದರ್ಶಿಗಳನ್ನು ಬದಲಾಯಿಸಿದ್ದು, ಆಮೂಲಾಗ್ರ ಬದಲಾವಣೆಗೆ ಮುಂದಾಗಿದೆ. ರಾಜಸ್ಥಾನ ಮತ್ತು ಗುಜರಾತಿನ ಪ್ರಧಾನ ಕಾರ್ಯದರ್ಶಿಗಳನ್ನೂ ಬದಲಾಯಿಸಲಾಗಿದೆ.[ರಮ್ಯಾಗೆ ದೊಡ್ಡ ಜವಾಬ್ದಾರಿ ನೀಡಿದ ರಾಹುಲ್ ಗಾಂಧಿ!]
ಕಳೆದ ಬಾರಿಯ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮಗಳು ಮಹತ್ವದ ಸ್ಥಾನ ಪಡೆದಿರುವುದನ್ನು ಮನಗಂಡ ಕಾಂಗ್ರೆಸ್, ಈ ಬಾರಿ ತಾನೂ ಸಾಮಾಜಿಕ ಮಾಧ್ಯಮಗಳನ್ನು ಸಮರ್ಥವಾಗಿ ಬಳಸಿಕೊಳ್ಳಲು ನಿಶ್ಚಯಿಸಿದೆ. ಆದ್ದರಿಂದ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಚಟುವಟಿಕೆಯಲ್ಲಿರುವ ರಮ್ಯಾ ಅವರನ್ನು ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆಯನ್ನಾಗಿ ನೇಮಿಸುವ ನಿರ್ಧಾರ ಮಾಡಲಾಗಿದೆ.[ಸೋಷಿಯಲ್ ಮೀಡಿಯಾ ಕುಸ್ತಿ : ಜಟ್ಟಿ ಮೋದಿ Vs ಗಟ್ಟಿಗಿತ್ತಿ ರಮ್ಯಾ]
ರೋಹ್ಟಕ್ ನ ಸಂಸದ ದೀಪೇಂದ್ರ ಹೋಡಾ ಅವರು ಹೆಚ್ಚೇನೂ ಉತ್ತಮ ಪ್ರದರ್ಶನ ನೀಡದ ಕಾರಣ ಅವರ ಬದಲಿಗೆ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಅವರನ್ನು ಈ ಸ್ಥಾನಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆಯ್ಕೆ ಮಾಡಿದ್ದಾರೆ.[ರಮ್ಯಾ ಟ್ವಿಟ್ಟರಲ್ಲಿ ನಡೆಯುತ್ತಿದೆ ಹೊಸ ಕರೆನ್ಸಿ ನೋಟು ಪರೀಕ್ಷೆ!]
ಕಾಂಗ್ರೆಸ್ ನ ಮಹತ್ವದ ಹುದ್ದೆಯೊಂದಕ್ಕೆ ಆಯ್ಕೆಯಾಗಿರುವ ಕನ್ನಡತಿ ರಮ್ಯಾಗೆ ಟ್ವೀಟ್ಟರ್ ನಲ್ಲಿ ಅಭಿನಂದನೆಯ ಮಹಾಪೂರವೇ ಹರಿದುಬರುತ್ತಿದೆ.[ಬೆಂಗಳೂರಿನ ನೀರಿನ ಸಮಸ್ಯೆಗೆ 'ದಿವ್ಯ' ಉಪಾಯ ನೀಡಿದ ರಮ್ಯಾ]
|
ಅಭಿನಂದನೆಗಳು ರಮ್ಯಾ
ಕಾಂಗ್ರೆಸ್ ನ ಸೋಶಿಯಲ್ ಮೀಡಿಯಾ ಮುಖ್ಯಸ್ಥೆಯಾಗಿ ಅಯ್ಕೆಯಾಗಿರುವ ರಮ್ಯ ಅವರಿಗೆ ಅಭಿನಂದನೆಗಳು ಮತ್ತು ಶುಭಾರೈಕೆಗಳು ಎಂದು ವಿದ್ಯಾ ಸಿಂಗ್ ಎನ್ನುವವರು ಟ್ವೀಟ್ ಮಾಡಿದ್ದಾರೆ.
|
ಕಾಂಗ್ರೆಸ್ ನಲ್ಲಿ ಮಹತ್ವದ ಬದಲಾವಣೆ
ಉತ್ತಮ ಪ್ರದರ್ಶನ ನೀಡದ ಕಾರಣ ದೀಪೇಂದ್ರ ಹೂಡಾ ಅವರನ್ನು ಸೋಶಿಯಲ್ ಮೀಡಿಯಾ ಮುಖ್ಯಸ್ಥ ಹುದ್ದೆಯಿಂದ ಇಳಿಸಿ, ಆ ಹುದ್ದೆಗೆ ಕನ್ನಡತಿ ರಮ್ಯಾ ಅವರನ್ನು ನೇಮಿಸಲಾಗಿದೆ. ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಹಲವು ರೀತಿಯ ಬದಲಾವಣೆ ಕೈಗೊಳ್ಳುತ್ತಿದ್ದಾರೆ.
|
ಮಹಿಳಾ ರಾಯಭಾರಿ
ರಮ್ಯಾ ಅವರು ಎಲ್ಲ ಮಹಿಳಾ ಸಮುದಾಯದ ರಾಯಭಾರಿ, ತಮಗೆ ನೀಡಿದ ಜವಾಬ್ದಾರಿಯನ್ನು ಅವರು ನ್ಯಾಯಯುತವಾಗಿ ನಡೆಸುತ್ತಾರೆಂಬ ವಿಶ್ವಾಸವಿದೆ. ಆಕೆ ಕರ್ನಾಟಕದ ಹೆಮ್ಮೆ ಎಂದು ಜಯರಾಮ್ ಎನ್ನುವವರು ಟ್ವೀಟ್ ಮಾಡಿದ್ದಾರೆ.
|
ಸ್ವಾಗತಾರ್ಹ ನಿರ್ಧಾರ
ರಮ್ಯಾ ಅವರನ್ನು ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆಯನ್ನಾಗಿ ನೇಮಿಸಿರುವುದು ಸ್ವಾಗತಾರ್ಹ ನಿರ್ಧಾರ ಎಂದು ಮುನಿಶ್ ಕಾಲಿಯಾ ಎಂಬುವವರು ಟ್ವೀಟ್ ಮಾಡಿದ್ದಾರೆ.
|
ಪಾಕ್ ಪ್ರೇಮಿಗೆ ಇಂಥ ಪಟ್ಟ!
ಕಾಂಗ್ರೆಸ್ ಇದೀಗ ಕೆಟ್ಟ ಸ್ಥಿತಿಯಿಂದ ಅತ್ಯಂತ ಕೆಟ್ಟ ಸ್ಥಿತಿಯತ್ತ ದಾಪುಗಾಲಿಡುತ್ತಿದೆ! ಪಾಕ್ ಪ್ರೇಮಿ ರಮ್ಯಾ ಅವರಿಗೆ ಸೋಶಿಯಲ್ ಮೀಡಿಯಾ ಇನ್ ಚಾರ್ಜ್ ಸ್ಥಾನ ನೀಡಲಾಗಿದೆ ಎಂದು ಜಸುಮತಿ ಎನ್ನುವವರು ವ್ಯಂಗ್ಯವಾಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications