ಐಪಿಎಲ್ 7ಗೂ ಬುಕ್ಕಿಗಳ ಕಾಟ : ಗವಾಸ್ಕರ್

ಐಪಿಎಲ್ಗೆ ಬೆಟ್ಟಿಂಗ್ ಭೂತದಿಂದ ಮುಕ್ತಿ ಸಿಗುವ ಹಾಗೆ ಕಾಣುತ್ತಿಲ್ಲ, ಬುಕ್ಕಿಗಳ ಕಾಟ ಮಿತಿಮೀರಿದೆ. ಸುಪ್ರೀಂಕೋರ್ಟ್ ಮಧ್ಯ ಪ್ರವೇಶದಿಂದಾಗಿ ಸುನಿಲ್ ಗವಾಸ್ಕರ್ ಅವರು ಐಪಿಎಲ್ ಸಾರಥ್ಯ ವಹಿಸಿಕೊಂಡರೂ, ಬುಕ್ಕಿಗಳ ಕಾಟ ತಪ್ಪಿಲ್ಲ. ಅವರೇ ತಿಳಿಸಿರುವಂತೆ ಪ್ರಸಕ್ತ ಐಪಿಎಲ್ ಸೀಸನ್ 7ರಲ್ಲಿ ಪಾಲ್ಗೊಂಡಿರುವ ಇಬ್ಬರು ಆಟಗಾರರನ್ನು ಬುಕ್ಕಿಯೋರ್ವ ಸಂಪರ್ಕಿಸಿದ್ದಾನೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಸುನಿಲ್ ಗವಾಸ್ಕರ್ ಅವರು ಭ್ರಷ್ಟಾಚಾರ ತಡೆ ಘಟಕದ ಅಧಿಕಾರಿಗಳಿಗೆ ಮತ್ತು ಭದ್ರತಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮೂಲಗಳ ಪ್ರಕಾರ ಬೆಟ್ಟಿಂಗ್ ವಿಚಾರ ಮಾಧ್ಯಮಗಳಿಗೆ ಲೀಕ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯೂಜಿಲೆಂಡ್ ದೇಶದ ಕ್ರಿಕೆಟಿಗ ಬ್ರೆಂಡನ್ ಮೆಕಲಮ್ ಅವರ ಪ್ರಕರಣದ ತನಿಖೆ ವೇಳೆ ಬುಕ್ಕಿಯೊಬ್ಬ ಇಬ್ಬರು ಆಟಗಾರರಿಗೆ ಹಣದ ಆಮಿಷ ತೋರಿದ ವಿಚಾರ ಬಹಿರಂಗಗೊಂಡಿದೆ. ಆದರೆ ಬುಕ್ಕಿ ಸಂಪರ್ಕಿಸಿದ್ದ ಆಟಗಾರರ ಬಗೆಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಈ ವಿಚಾರ ಐಪಿಎಲ್ನಲ್ಲಿ ಪಾಲ್ಗೊಂಡಿರುವ ಯಾವುದೇ ತಂಡದ ಆಟಗಾರನಿಂದ ಬಹಿರಂಗಗೊಂಡಿಲ್ಲ ಎಂದು ಗವಾಸ್ಕರ್ ಸ್ಪಷ್ಟಪಡಿಸಿದ್ದಾರೆ.
'ನಮ್ಮಲ್ಲಿ ಆಂತರಿಕ ತನಿಖಾಧಿಕಾರಿಗಳಿದ್ದು, ಈ ಸಮಯದಲ್ಲಿ ಎಲ್ಲ ತಂಡಗಳೊಂದಿಗೆ ಅವರು ನಿರಂತರ ಸಂಪರ್ಕದಲ್ಲಿದ್ದಾರೆ. ಅಕ್ರಮದ ಕುರಿತು ಯಾವುದೇ ವಿಚಾರವನ್ನು ಆಟಗಾರರು ಈ ಅಧಿಕಾರಿಗಳೊಂದಿಗೆ ಹಂಚಿಕೊಳ್ಳಬಹುದು ಮತ್ತು ಅವರ ಮಾಹಿತಿಯನ್ನು ಅಧಿಕಾರಿಗಳು ಗೌಪ್ಯವಾಗಿಡುತ್ತಾರೆ. ಹೀಗಾಗಿ ಆಟಗಾರರು ಯಾವುದೇ ಸಂಕೋಚವಿಲ್ಲದೆ, ಮುಜುಗರವಿಲ್ಲದೆ ಮಾಹಿತಿ ಹಂಚಿಕೊಳ್ಳಬಹುದು' ಎಂದು ಹೇಳಿದರು.
ಒಟ್ಟಾರೆ ಕಳೆದ 6 ಸೀಸನ್ಗಳಿಂದಲೂ ಬುಕ್ಕಿಗಳ ಕಾಟದಿಂದ ಬಳಲಿದ್ದ ಐಪಿಎಲ್ ಅನ್ನು ಸುಪ್ರೀಂಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ಐಪಿಎಲ್ ಹಂಗಾಮಿ ಅಧ್ಯಕ್ಷರಾಗಿ ಗವಾಸ್ಕರ್ ಅವರು ನೇಮಕಗೊಂಡು ಅವರ ಅಧ್ಯಕ್ಷತೆಯಲ್ಲಿ ಐಪಿಎಲ್ ಸೀಸನ್ 7 ನಡೆಯುತ್ತಿದ್ದು, ಇದರ ಮೇಲೂ ಬುಕ್ಕಿಗಳ ಕೆಂಗಣ್ಣು ಬಿದ್ದಿರುವುದು ಕ್ರಿಕೆಟ್ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಎನ್ ಶ್ರೀನಿವಾಸನ್ ಅವರು ಮತ್ತೊಮ್ಮೆ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಮರಳಲು ಸತತ ಪ್ರಯತ್ನ ನಡೆಸುತ್ತಿದ್ದು ಕೋರ್ಟ್ ಅನುಮತಿ ನೀಡಿಲ್ಲ. (ಪಿಟಿಐ)
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications