ಅತ್ಯಾಚಾರಿಗೇ ಅವಮಾನವಾಗಿದೆ ಎಂದಳು 'ನಿರ್ಭಯಾ'
ನವದೆಹಲಿ, ಜ. 2: ನಗರದಲ್ಲಿ ಎರಡು ವರ್ಷಗಳ ಹಿಂದೆ ಚಲಿಸುವ ಬಸ್ನಲ್ಲಿ ನಡೆದಿದ್ದ ಅಮಾನುಷ ಗ್ಯಾಂಗ್ ರೇಪ್ ವಿರುದ್ಧ ಇಡೀ ದೇಶವೇ ಬೀದಿಗಿಳಿದು ಪ್ರತಿಭಟಿಸಿತ್ತು. ಅತ್ಯಾಚಾರಕ್ಕೊಳಗಾದ ಯುವತಿ ತೀವ್ರ ನಿತ್ರಾಣಳಾಗಿದ್ದರೂ ಬದುಕುವ ಆಸೆ ವ್ಯಕ್ತಪಡಿಸಿದ್ದಳು. ಇದಕ್ಕಾಗಿಯೇ ಆಕೆಗೆ 'ನಿರ್ಭಯಾ' ಎಂಬ ಬಿರುದು ನೀಡಿ, ಅದೇ ಹೆಸರಿನಿಂದ ಕರೆಯಲಾಗುತ್ತಿದೆ.
ಈಚೆಗಷ್ಟೇ ನವ ದೆಹಲಿಯಲ್ಲಿ ಉಬೇರ್ ಟ್ಯಾಕ್ಸಿ ಚಾಲಕನಿಂದ ಅತ್ಯಾಚಾರಕ್ಕೊಳಗಾದ ಯುವತಿ ಅನೇಕ ದಿನಗಳ ನಂತರ ಮೌನ ಮುರಿದಿದ್ದಾರೆ. ಮತ್ತೆ ಆತ್ಮಶಕ್ತಿ ಕ್ರೋಢೀಕರಿಸಿಕೊಂಡು ಸಮಾಜವನ್ನು ಧೈರ್ಯದಿಂದ ಎದುರಿಸಲು ಸಜ್ಜಾಗಿದ್ದಾರೆ. "ಇನ್ನು ಮುಂದೆ ಅತ್ಯಾಚಾರಿಗಳ ವಿರುದ್ಧ ಹೋರಾಟ ಮುಂದುವರಿಸುತ್ತೇನೆ" ಎಂದು ಘೋಷಿಸಿದ್ದಾರೆ. [ಕೆಲವೇ ಗಂಟೆಯಲ್ಲಿ ಅತ್ಯಾಚಾರಿ ಸೆರೆ ಸಿಕ್ಕಿದ್ದು ಹೇಗೆ?]
"ಅತ್ಯಾಚಾರಕ್ಕೊಳಗಾದ ನಂತರ ನೆಮ್ಮದಿಯ ನಿದ್ದೆಯನ್ನೇ ಕಳೆದುಕೊಂಡಿದ್ದೆ. ಆ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಹಾಗೂ ಕಚೇರಿಯಲ್ಲಿ ಸಹೋದ್ಯೋಗಿಗಳು ಮಾನಸಿಕ ಬೆಂಬಲ ನೀಡಿದರು. ಇದರಿಂದ ಮಾನಸಿಕವಾಗಿ ಚೇತರಿಸಿಕೊಂಡಿದ್ದೇನೆ" ಎಂದು ಶ್ಲಾಘಿಸಿದರು.

ಅತ್ಯಾಚಾರಿಗೇ ಅವಮಾನವಾಗಿದೆ : "ಕೆಲವರು ನನ್ನನ್ನು ವ್ಯಂಗ್ಯವಾಗಿ ನೋಡುತ್ತಿರುವುದೂ ನಿಜ. ಆದರೆ, ಅವರಿಗೆ ನಾನು ಬೆದರಲ್ಲ. ನನಗಾದ ಅತ್ಯಾಚಾರವನ್ನು ನಾನು ಅವಮಾನವೆಂದು ಬಗೆದಿಲ್ಲ. ಬದಲಿಗೆ ಅತ್ಯಾಚಾರಗೈದವನಿಗೇ ಅವಮಾನವಾಗಿದೆ ಎಂದು ಬಗೆಯುತ್ತೇನೆ" ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ನಿರ್ಭಯಾಳ ಮೇಲೆ ಅತ್ಯಾಚಾರ ನಡೆದ ಮೇಲೆ ರಚಿಸಿದ ಕಠಿಣ ಕಾನೂನು ಕೂಡ ಅತ್ಯಾಚಾರಿಗಳಲ್ಲಿ ಭಯ ಹುಟ್ಟಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದಾರೆ. [ಅತ್ಯಾಚಾರಿ ಟ್ಯಾಕ್ಸಿ ಚಾಲಕನ ಬಂಧನ]
ನನ್ನ ಮೇಲೆ ನಡೆದ ಅತ್ಯಾಚಾರದಿಂದ ನಾನು ಗಲಿಬಿಲಿಗೊಂಡಿಲ್ಲ. ಸಂದರ್ಭವನ್ನು ಧೈರ್ಯದಿಂದಲೇ ಎದುರಿಸಿದ್ದೇನೆ. ಆದ್ದರಿಂದಲೇ ಅತ್ಯಾಚಾರ ಕುರಿತು ಪಾಲಕರಿಗಿಂತ ಮೊದಲು ಪೊಲೀಸರಿಗೆ ತಿಳಿಸಿದ್ದೇನೆ ಎಂದು ಅತ್ಯಾಚಾರ ಸಂತ್ರಸ್ತ ಯುವತಿ ಹೇಳಿಕೊಂಡಿದ್ದಾರೆ.
ಅತ್ಯಾಚಾರ ಪ್ರತಿಭಟಿಸಿ : "ಮಹಿಳೆಯರು ಅತ್ಯಾಚಾರಕ್ಕೊಳಗಾದಾಗ ಮರ್ಯಾದೆಗೆ ಹೆದರಿ ಸುಮ್ಮನುಳಿಯುತ್ತಾರೆ. ಇದರಿಂದ ಅತ್ಯಾಚಾರಿಗಳಿಗೆ ಮತ್ತಷ್ಟು ಧೈರ್ಯ ಬರುತ್ತದೆ. ದೌರ್ಜನ್ಯಕ್ಕೊಳಗಾದ ಮಹಿಳೆಯರು ಪ್ರತಿಭಟಿಸಿದಾಗಲೇ ನೀಚ ಕೃತ್ಯ ಎಸಗುವವರಿಗೆ ಭಯ ಮೂಡುತ್ತದೆ" ಎಂದು ಕರೆ ನೀಡಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications