ಯುವತಿ ಕಿರುಕುಳ ಆರೋಪ, ಉಬರ್ ಚಾಲಕ ಅಮಾನತು
ನವದೆಹಲಿ, ಜೂ.01: ಮೊಬೈಲ್ ಅಪ್ಲಿಕೇಷನ್ ಆಧಾರಿತ ಟ್ಯಾಕ್ಸಿ ಸೇವೆ ನೀಡುವ ಸಂಸ್ಥೆ ಮತ್ತೆ ಕೆಟ್ಟ ವಿಷಯಕ್ಕೆ ಸುದ್ದಿಯಾಗಿದೆ. ಗುರ್ ಗಾಂವ್ ನಲ್ಲಿ ಉಬರ್ ಟ್ಯಾಕ್ಸಿ ಚಾಲಕನೊಬ್ಬ ಯುವತಿಯೊಬ್ಬಳಿಗೆ ಮುತ್ತು ನೀಡಲು ಹೋಗಿ ಕೆಲಸ ಕಳೆದುಕೊಂಡಿದ್ದಾರೆ. ಉಬರ್ ಫೇಸ್ ಬುಕ್ ಪುಟದಲ್ಲಿ ದೂರು ದಾಖಲಾದ ಕೆಲ ಸಮಯದಲ್ಲೇ ಕ್ರಮ ಜರುಗಿಸಿದ್ದು ವಿಶೇಷ.
ಉಬರ್ ಟ್ಯಾಕ್ಸಿ ಡ್ರೈವರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಮತ್ತೊಮ್ಮೆ ದಾಖಲಾಗಿದೆ. 21 ವರ್ಷ ವಯಸ್ಸಿನ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚಾಲಕನನ್ನು ಸಂಸ್ಥೆ ಹೊರಹಾಕಿದೆ. ಯುವತಿಯ ಸೋದರ ಉಬರ್ ಫೇಸ್ ಬುಕ್ ಪುಟದಲ್ಲಿ ಘಟನೆ ಬಗ್ಗೆ ವಿವರಿಸಿ ದೂರು ದಾಖಲಿಸಿದ್ದರು. [ಉಬೇರ್ ಚಾಲಕನಿಂದ ಲೈಂಗಿಕ ಕಿರುಕುಳ]

ನನ್ನ ಸೋದರಿ ಗುರ್ ಗಾಂವ್ ನಿಂದ ನಿಮ್ಮ ಸಂಸ್ಥೆ ಟ್ಯಾಕ್ಸಿ ಬಳಸಿದ್ದರು. ಚಾಲಕ ವಿನೋದ್ ಆಕೆಗೆ ಬಲವಂತವಾಗಿ ಮುತ್ತು ನೀಡಲು ಯತ್ನಿಸಿದ್ದಾನೆ. ಆತನ ವಿರುದ್ಧ ದೂರು ದಾಖಲಿಸಿದ್ದೇನೆ. ಇನ್ನೂ ಕ್ರಮ ಕೈಗೊಂಡಿಲ್ಲ. ನಿಮ್ಮ ಸಂಸ್ಥೆಯ ಟ್ಯಾಕ್ಸಿಯಲ್ಲಿ ಪ್ರಯಾಣಿಸುವುದು ಕಷ್ಟಕರವಾಗಿದೆ. ಕೂಡಲೇ ಕ್ರಮ ಕೈಗೊಳ್ಳಿ ಎಂದು ಬರೆದಿದ್ದಾರೆ. [ಓಲಾ, ಉಬರ್ ಟ್ಯಾಕ್ಸಿ ಮೊಬೈಲ್ ಅಪ್ಲಿಕೇಷನ್ ಗೆ ನಿಷೇಧ?]
ಇದಕ್ಕೆ ಉತ್ತರಿಸಿದ ಉಬರ್ ದೆಹಲಿಯ ಪ್ರಧಾನ ವ್ಯವಸ್ಥಾಪಕ ಗಗನ್ ಭಾಟಿಯಾ, ನಮ್ಮ ತಂಡ ಕೂಡಲೇ ಚಾಲಕನನ್ನು ಸಂಪರ್ಕಿಸಿ ಘಟನೆ ಬಗ್ಗೆ ಮಾಹಿತಿ ಕಲೆಹಾಕಿದೆ. ಘಟನೆ ಬಗ್ಗೆ ತನಿಖೆ ನಡೆಸಲಾಗಿದ್ದು, ಚಾಲಕ ತಪ್ಪಿತಸ್ಥ ಎಂದು ಕಂಡು ಬಂದ ಕೂಡಲೇ ಆತನನ್ನು ಅಮಾನತುಗೊಳಿಸಲಾಗಿದೆ. ನಾವು ಯುವತಿಯರ ಸುರಕ್ಷತೆ ಬಗ್ಗೆ ಅಗತ್ಯ ಕ್ರಮವನ್ನು ತೆಗೆದುಕೊಂಡಿದ್ದೇವೆ ಎಂದಿದ್ದಾರೆ. [ಬೆಂಗಳೂರು ಸಿಟಿ ಟ್ಯಾಕ್ಸಿ ದೂರವಾಣಿ ಸಂಖ್ಯೆಗಳು]
ದೆಹಲಿಯಲ್ಲಿ ಉಬರ್ ಕ್ಯಾಬ್ ಚಾಲಕ ಶಿವಕುಮಾರ್ ಯಾದವ್ ಅವರು 2014ರ ಡಿಸೆಂಬರ್ ನಲ್ಲಿ 27 ವರ್ಷ ವಯಸ್ಸಿನ ಮಹಿಳೆಗೆ ಲೈಂಗಿಕ ಕಿರುಕುಳ ನಡೆದಿದ್ದರು. ದೆಹಲಿಯ ಸರಾಯಿ ರೊಹಿಲ್ಲಾ ಪ್ರದೇಶದಲ್ಲಿ ನಡೆದ ಈ ದುರ್ಘಟನೆ ನಂತರ ಇಂಟರ್ನೆಟ್, ಮೊಬೈಲ್ ಮೂಲಕ ಉಬರ್ ಕ್ಯಾಬ್ ಟ್ಯಾಕ್ಸಿ ಸೇವೆ ನೋಂದಣಿಯನ್ನು ನಿಷೇಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications