Breaking:ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಉದ್ಧವ್ ಬಣ
ನವದೆಹಲಿ, ಜುಲೈ 25: ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯ ಹೂಡಿದ್ದ ಶಾಸಕರನ್ನು ಅನರ್ಹಗೊಳಿಸುವ ನಿರ್ಧಾರ ಪ್ರಟಗೊಳ್ಳುವವರೆಗೂ, ಪಕ್ಷದ ಮೇಲಿನ ನಿಯಂತ್ರಣದ ಬಗ್ಗೆ ಚುನಾವಣಾ ಆಯೋಗ ನಿರ್ಧರಿಸುವುದನ್ನು ತಡೆಯಬೇಕು ಎಂದು ಉದ್ಧವ್ ಠಾಕ್ರೆ ಅವರ ಶಿವಸೇನೆ ಬಣವು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ.
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಣ ಮತ್ತು ಬಿಜೆಪಿಯ ಬೆಂಬಲದೊಂದಿಗೆ ಸರ್ಕಾರ ರಚಿಸಿದ ಹಾಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣ ಇಬ್ಬರು ತಮ್ಮದು ನಿಜವಾದ ಶಿವಸೇನೆ ಎಂದು ಹೇಳಿಕೊಂಡಿವೆ.
ಮಹಾರಾಷ್ಟ್ರದ ಈ ಪಕ್ಷವನ್ನು ಯಾರು ಪ್ರತಿನಿಧಿಸುತ್ತಾರೆ ಎಂಬುದನ್ನು ಸಾಬೀತುಪಡಿಸಲು ಆಗಸ್ಟ್ 8 ರೊಳಗೆ ಸಾಕ್ಷ್ಯಚಿತ್ರದ ಸಾಕ್ಷಿ ಮತ್ತು ಲಿಖಿತ ಹೇಳಿಕೆಗಳನ್ನು ನೀಡುವಂತೆ ಚುನಾವಣಾ ಆಯೋಗವು ಎರಡೂ ಸೇನಾ ಗುಂಪುಗಳಿಗೆ ತಿಳಿಸಿದೆ. ಆ ಬಳಿಕವಷ್ಟೇ ಚುನಾವಣಾ ಆಯೋಗ ಪ್ರಕರಣದ ವಿಚಾರಣೆ ನಡೆಸಲಿದೆ.

ಕಳೆದ ತಿಂಗಳು ಉದ್ಧವ್ ಸರ್ಕಾರವನ್ನು ಕೆಳಗಿಳಿಸಲು ಗುಜರಾತ್ನಿಂದ ಅಸ್ಸಾಂಗೆ ಅಲ್ಲಿಂದ ಗೋವಾಕ್ಕೆ ಬಂದು ಬಂಡಾಯ ಹೂಡಿದ್ದ ಶಾಸಕರ ಅನರ್ಹತೆಯ ಬಗ್ಗೆ ಸ್ಪಷ್ಟತೆ ಸಿಗಬೇಕು. ಅಲ್ಲಿಯವರೆಗೆ ಶಿವಸೇನೆಯನ್ನು ಯಾವ ಗುಂಪು ಪ್ರತಿನಿಧಿಸುತ್ತದೆ ಎಂಬುದನ್ನು ಚುನಾವಣಾ ಆಯೋಗವು ನಿರ್ಧರಿಸಲು ಸಾಧ್ಯವಿಲ್ಲ ಎಂದು ಠಾಕ್ರೆ ಬಣ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಚುನಾವಣೆಗಳಿಗೆ ಪಕ್ಷದ ಚಿಹ್ನೆಗಳನ್ನು ಹಂಚುವ ಮತ್ತು ಚುನಾವಣೆ ನಡೆಸುವ ಜವಾಬ್ದಾರಿ ಹೊಂದಿರುವ ಸಾಂವಿಧಾನಿಕ ಸಂಸ್ಥೆ ಚುನಾವಣಾ ಆಯೋಗಕ್ಕೆ ಏಕನಾಥ್ ಶಿಂಧೆ ಬಣ ಪತ್ರ ಬರೆದಿದ್ದು, ತಮ್ಮ ತಂಡವು 55 ಶಾಸಕರ ಪೈಕಿ 40 ಮತ್ತು 18 ಲೋಕಸಭೆಯ ಸಂಸದರ ಪೈಕಿ 12 ಸಂಸದರ ಬೆಂಬಲವನ್ನು ಹೊಂದಿದೆ ಎಂದು ಘೋಷಿಸಿಕೊಂಡಿದ್ದಾರೆ.

"ಶಿವಸೇನೆಯಲ್ಲಿ ಒಡಕು ಇರುವುದು ಸ್ಪಷ್ಟವಾಗಿದೆ, ಅದರಲ್ಲಿ ಒಂದು ಗುಂಪನ್ನು ಏಕನಾಥ್ ಶಿಂಧೆ ಮುನ್ನಡೆಸುತ್ತಿದ್ದಾರೆ ಮತ್ತು ಇನ್ನೊಂದು ಗುಂಪನ್ನು ಉದ್ಧವ್ ಠಾಕ್ರೆ ಮುನ್ನಡೆಸುತ್ತಿದ್ದಾರೆ. ಎರಡೂ ಗುಂಪುಗಳು ತಮ್ಮದು ನಿಜವಾದ ಶಿವಸೇನೆ ಎಂದು ಹೇಳಿಕೊಳ್ಳುತ್ತವೆ. ತಮ್ಮ ನಾಯಕ ಶಿವಸೇನಾ ಪಕ್ಷದ ಅಧ್ಯಕ್ಷ ಎಂದು ಹೇಳಿಕೊಳ್ಳುತ್ತವೆ. ಹೀಗಾಗಿ ಆಗಸ್ಟ್ 8 ರೊಳಗೆ ಪಕ್ಷದ ನಿಯಂತ್ರಣಕ್ಕೆ ಸಾಕ್ಷ್ಯಚಿತ್ರದ ಸಾಕ್ಷಿ ನೀಡಿ" ಎಂದು ಎಂದು ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications