ಸಿಬಿಎಸ್ಇ ಫಲಿತಾಂಶದ ಬಳಿಕ ಪದವಿ ಕೋರ್ಸ್ಗಳಿಗೆ ಪ್ರವೇಶ ಆರಂಭಿಸಲು ಸೂಚನೆ
ಹೊಸದಿಲ್ಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್ಇ) 2022 ಸಾಲಿನ 12ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದ್ದು ಫಲಿತಾಂಶವನ್ನು ಪ್ರಕಟಿಸುವ ಹಂತದಲ್ಲಿದೆ. ಫಲಿತಾಂಶ ಪ್ರಕಟಿಸಿದ ಬಳಿಕವಷ್ಟೇ ಪದವಿ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅಂತಿಮ ದಿನಾಂಕವನ್ನು ಪ್ರಕಟಿಸುವಂತೆ ವಿಶ್ವವಿದ್ಯಾನಿಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಜಗದೀಶ್ ಕುಮಾರ್ ಶಿಕ್ಷಣ ಸಂಸ್ಥೆಗಳಿಗೆ ತಿಳಿಸಿದ್ದಾರೆ.
ಸಿಬಿಎಸ್ಇ ಫಲಿತಾಂಶದ ನಂತರ ಪದವಿ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಲು ಸಮಯವನ್ನ ಕಲ್ಪಿಸಲಾಗಿದೆ ಎಂದು ಯುಜಿಸಿ ಹೇಳಿದೆ. ಈ ಕುರಿತು ಯುಜಿಸಿ ಅಧ್ಯಕ್ಷ ಎಂ. ಜಗದೀಶ್ ಕುಮಾರ್ ಟ್ವೀಟ್ ಮಾಡಿ, ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು 12ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಿದ ನಂತರ ವಿದ್ಯಾರ್ಥಿಗಳಿಗೆ ಪದವಿ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು ಎಂದಿದ್ದಾರೆ.
ಫಲಿತಾಂಶದ ನಂತರ ಪದವಿ ಕೋರ್ಸ್ಗಳಿಗೆ ಅಂತಿಮ ದಿನಾಂಕವನ್ನು ನಿಗದಿಪಡಿಸುವಂತೆ ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ಅವರು ಉಪಕುಲಪತಿಗಳು, ಪ್ರಾಂಶುಪಾಲರು ಮತ್ತು ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಈಗಾಗಲೇ ಕೆಲವು ವಿಶ್ವವಿದ್ಯಾನಿಲಯಗಳು ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿರುವುದು ಗಮನಕ್ಕೆ ಬಂದಿದೆ. ಸಿಬಿಎಸ್ಇ ಫಲಿತಾಂಶ ಪ್ರಕಟಿಸುವ ಮೊದಲು ವಿಶ್ವವಿದ್ಯಾಲಯಗಳು ಅಂತಿಮ ದಿನಾಂಕವನ್ನು ನಿಗದಿಪಡಿಸಿದರೆ ವಿದ್ಯಾರ್ಥಿಗಳು ಪದವಿ ಕೋರ್ಸ್ಗಳ ಪ್ರವೇಶದಿಂದ ವಂಚಿತರಾಗುತ್ತಾರೆ ಎಂದು ಯುಜಿಸಿ ಪತ್ರದ ಮೂಲಕ ತಿಳಿಸಿದ್ದಾರೆ. ಟರ್ಮ್ 11ರ ಮೌಲ್ಯಮಾಪನ ನಡೆಯುತ್ತಿದ್ದು, ಫಲಿತಾಂಶ ತಯಾರಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಯುಜಿಸಿ ಪತ್ರದಲ್ಲಿ ತಿಳಿಸಿದೆ.

ನಿಯಮಗಳ ಆಧಾರದ ಮೇಲೆ ಅಂತಿಮ ಫಲಿತಾಂಶವನ್ನು ಘೋಷಿಸಲಾಗುತ್ತದೆ. ಸಂಪೂರ್ಣ ಪ್ರಕ್ರಿಯೆಯು ಫಲಿತಾಂಶವನ್ನು ಪ್ರಕಟಿಸಲು ಸುಮಾರು ಒಂದು ತಿಂಗಳು ಸಮಯ ಬೇಕಾಗುತ್ತದೆ. ಸಿಬಿಎಸ್ಇ ಜುಲೈ ಕೊನೆಯ ವಾರದ ವೇಳೆಗೆ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳ ಅಂತಿಮ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ಫಲಿತಾಂಶ ಪ್ರಕಟಿಸುವವರೆಗೂ ಪದವಿ ಪ್ರವೇಶದ ಅಂತಿಮ ದಿನಾಂಕವನ್ನ ಪ್ರಟಕಟಿಸಬಾರದೆಂದು ವಿಶ್ವವಿದ್ಯಾಲಯಗಳಿಗೆ ಸೂಚನೆ ಯುಜಿಸಿ ಸೂಚಿಸಿದೆ. ಹಾಗೂ ಫಲಿತಾಂಶಕ್ಕೂ ಮುನ್ನ ಪದವಿ ಪ್ರವೇಶ ಪ್ರಕ್ರಿಯೆ ಆರಂಭಿಸಿದರೆ ವಿದ್ಯಾರ್ಥಿಗಳು ಕೋರ್ಸ್ಗಳಿಂದ ವಂಚಿತರಾಗುತ್ತಾರೆ ಎಂದು ಹೇಳಿದೆ.
Recommended Video
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications