ಅನುಮಾನಾಸ್ಪದ ಬ್ಯಾಗ್ ಪತ್ತೆ: ರೈಲು ನಿಲ್ಲಿಸಿ ಬಾಂಬ್ ನಿಷ್ಕ್ರಿಯ ದಳ ತನಿಖೆ
ನವದೆಹಲಿ ಮಾರ್ಚ್ 14: ಸೋಮವಾರ ಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಶಂಕಿತ ಬಾಂಬ್ ಎಚ್ಚರಿಕೆ ಕರೆ ಬಂದಿದೆ. ಇದರ ಬೆನ್ನಲ್ಲೆ ಸ್ಥಳೀಯ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ. ಸ್ಥಳೀಯ ರೈಲು ಹರ್ಯಾಣದಿಂದ ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದಾಗ ಬ್ಯಾಗ್ ಕಂಡುಬಂದಿದೆ. ಜೊತೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ದೆಹಲಿಯ ಆದರ್ಶ ನಗರ ರೈಲು ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಸದ್ಯ ಚೀಲವನ್ನು ಪರಿಶೀಲಿಸುತ್ತಿದೆ ಎಂದು ಹೇಳಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಹರ್ಯಾಣದಿಂದ ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ಬರುತ್ತಿದ್ದ ಲೋಕಲ್ ರೈಲಿನಲ್ಲಿ ಸೋಮವಾರ ಬ್ಯಾಗ್ ವೊಂದು ಪತ್ತೆಯಾಗಿದೆ. ಈ ಬ್ಯಾಗ್ ಬಗ್ಗೆ ಪ್ರಯಾಣಿಕರನ್ನು ಸುತ್ತಮುತ್ತಲಿನ ಜನರನ್ನು ವಿಚಾರಿಸಿದಾಗ ಬ್ಯಾಗ್ ಯಾರದು ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಬ್ಯಾಗ್ ಬಗ್ಗೆ ಯಾರಿಗೂ ಮಾಹಿತಿ ತಿಳಿದಿರಲಿಲ್ಲ. ಈ ವೇಳೆ ತಕ್ಷಣವೇ GRP ಮತ್ತು RPF ಗೆ ಕರೆ ಮಾಡಲಾಗಿದೆ. ತರಾತುರಿಯಲ್ಲಿ ಬಂದ ಸೈನಿಕರು ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಬಿಗಿ ಭದ್ರತೆ ನೀಡಿದ್ದಾರೆ. ಇದೀಗ ಆದರ್ಶ ನಗರ ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಿ ತಪಾಸಣೆ ನಡೆಸಲಾಗುತ್ತಿದೆ.
Recommended Video