ಕೇಂದ್ರ ಸಂಪುಟ ಸಭೆ ನಿರ್ಧಾರ: ಜವಳಿ ವಲಯಕ್ಕೆ 10,600 ಕೋಟಿ ಪ್ರೋತ್ಸಾಹ ಧನ
ನವದೆಹಲಿ, ಸೆಪ್ಟೆಂಬರ್ 8: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆಸ ಸಭೆಯಲ್ಲಿ ಜವಲಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಲಾಗಿದೆ. ಜವಳಿ ಉತ್ಪಾದನೆ ಪ್ರೋತ್ಸಾಹಿತ ಯೋಜನೆಗೆ 10,600 ಕೋಟಿ ರೂಪಾಯಿ ಅನುಮೋದನೆ ನೀಡಲಾಗಿದೆ.
ಕೇಂದ್ರ ಸರ್ಕಾರ ಮಂಡಿಸಿದ 2021ನೇ ಬಜೆಟ್ ನಲ್ಲಿ ಒಟ್ಟು 13 ಕ್ಷೇತ್ರಗಳಿಗೆ ಉತ್ಪಾದನೆ ಸಂಬಂಧಿತ ಪ್ರೋತ್ಸಾಹಕ(ಪಿಎಲ್ಐ) ಯೋಜನೆಯನ್ನು ಘೋಷಿಸಲಾಗಿದೆ. ಒಟ್ಟು 1.97 ಲಕ್ಷ ಕೋಟಿ ರೂಪಾಯಿ ಮೌಲ್ಯದ ಪ್ರೋತ್ಸಾಹದಲ್ಲಿ ಜವಳಿ ಕ್ಷೇತ್ರವೂ ಒಂದಾಗಿದೆ.
ಬುಧವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾದ ವಿಷಯಗಳೇನು. ಕೇಂದ್ರ ಸಂಪುಟ ಸಭೆಯಲ್ಲಿನ ಪ್ರಮುಖ ನಿರ್ಧಾರಗಳೇನು ಎಂಬುದನ್ನು ಮುಂದಿನ ಪಟ್ಟಿಯಲ್ಲಿ ತಿಳಿದುಕೊಳ್ಳೋಣ.

ಪ್ರಧಾನಿ ಮೋದಿ ಸಂಪುಟ ಸಭೆ ನಿರ್ಧಾರದ ಪ್ರಮುಖಾಂಶಗಳು:
* ಮುಂದಿನ 5 ವರ್ಷಗಳಲ್ಲಿ ಜವಳಿ ವಲಯದ ಪಿಎಲ್ಐ ಯೋಜನೆಯಡಿ 10,683 ಕೋಟಿ ಮೌಲ್ಯದ ಪ್ರೋತ್ಸಾಹಧನ ನೀಡಲಾಗುವುದು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದರು.
* ಈ ನಿರ್ಧಾರವು ಕೆಲವು ಜಾಗತಿಕ ಚಾಂಪಿಯನ್ಗಳನ್ನು ಹುಟ್ಟು ಹಾಕುತ್ತದೆ ಎಂದು ನಾವು ಭಾವಿಸುತ್ತೇವೆ. ಮಹತ್ವಾಕಾಂಕ್ಷೆಯ ಜಿಲ್ಲೆಗಳು ಅಥವಾ 3 ಮತ್ತು 4ನೇ ಶ್ರೇಣಿ ನಗರಗಳನ್ನು ಆಧರಿಸಿದ ಕಾರ್ಖಾನೆಗಳಿಗೆ ಆದ್ಯತೆ ನೀಡಲಾಗುವುದು. ಇದರಿಂದ ಗುಜರಾತ್, ಉತ್ತರ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಪಂಜಾಬ್, ಆಂಧ್ರಪ್ರದೇಶ, ತೆಲಂಗಾಣ ಇತ್ಯಾದಿಗಳಿಗೆ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದರು.
* ಐದು ವರ್ಷಗಳಲ್ಲಿ ರೂ 19,000 ಕೋಟಿಗಿಂತ ಹೆಚ್ಚಿನ ಹೂಡಿಕೆ.
* ಐದು ವರ್ಷಗಳಲ್ಲಿ 3 ಲಕ್ಷ ಕೋಟಿ ರೂ.ಗಿಂತ ಹೆಚ್ಚಿನ ಉತ್ಪಾದನಾ ವಹಿವಾಟು.
* 7.5 ಲಕ್ಷಕ್ಕೂ ಅಧಿಕ ಜನರಿಗೆ ಉದ್ಯೋಗ ಸೃಷ್ಟಿ ಮತ್ತು ಬೆಂಬಲಿತ ಚಟುವಟಿಕೆಗಳಿಗೆ ಪ್ರೋತ್ಸಾಹ.
* ಯಾವುದೇ ವ್ಯಕ್ತಿಯು ಭೂಮಿ ಮತ್ತು ಆಡಳಿತಾತ್ಮಕ ಕಟ್ಟಡದ ವೆಚ್ಚವನ್ನು ಹೊರತುಪಡಿಸಿ ಉತ್ಪಾದನೆಗೆ ಸಂಬಂಧಿಸಿದಂತೆ (ಜವಳಿ ವಲಯ) ಸಸ್ಯ ಬೆಳೆಸುವಿಕೆ, ಯಂತ್ರೋಪಕರ, ಸಲಕರಣೆ ಮತ್ತು ಸಹಕಾರಿ ಕಾರ್ಯಗಳಿಗೆ ಹಾಗೂ ತಾಂತ್ರಿಕವಾಗಿ ಬಟ್ಟೆ ಉತ್ಪಾದಿಸುವುದಕ್ಕೆ ಸಂಬಂಧಿಸಿದಂತೆ 300 ಕೋಟಿ ರೂಪಾಯಿ ಹಣ ಹೂಡಿಕೆ ಮಾಡಲು ಅರ್ಹರಾಗಿರುತ್ತಾರೆ.
* ಕನಿಷ್ಠ 100 ಕೋಟಿ ಹೂಡಿಕೆ ಮಾಡಲು ಇಚ್ಛಿಸುವ ಯಾವುದೇ ವ್ಯಕ್ತಿ (ಸಂಸ್ಥೆ / ಕಂಪನಿ ಸೇರಿದಂತೆ) ಈ ಯೋಜನೆಯ ಭಾಗವಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
* ಇದರ ಜೊತೆಗೆ 3 ಮತ್ತು 4ನೇ ಶ್ರೇಣಿ ಪಟ್ಟಣಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೂಡಿಕೆಗೆ ಆದ್ಯತೆ ನೀಡಲಾಗುವುದು. ಆ ಮೂಲಕ ಹಿಂದುಳಿದ ಪ್ರದೇಶಕ್ಕೆ ಉದ್ಯಮಗಳು ಲಗ್ಗೆ ಇಡಲು ಪ್ರೋತ್ಸಾಹ ನೀಡಲಾಗುವುದು.
* ಈ ಯೋಜನೆ ವಿಶೇಷವಾಗಿ ಗುಜರಾತ್, ಉತ್ತರ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಪಂಜಾಬ್, ಆಂಧ್ರ ಪ್ರದೇಶ, ತೆಲಂಗಾಣ, ಒಡಿಶಾ ಸೇರಿದಂತೆ ಮುಂತಾದ ರಾಜ್ಯಗಳ ಮೇಲೆ ಹೆಚ್ಚು ಸಕಾರಾತ್ಮಕ ಪರಿಣಾಮ ಬೀರುತ್ತದೆ.
* PLI ಯೋಜನೆಯು ಭಾರತದ ಕಂಪನಿಗಳು ಜಾಗತಿಕ ಮಟ್ಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಲು ಸಹಾಯ ಮಾಡುತ್ತದೆ, ಕೇಂದ್ರ ಸರ್ಕಾರವು ಇದು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಗೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು.
* ಇಲ್ಲಿಯವರೆಗೆ, ನಾವು ಮುಖ್ಯವಾಗಿ ಹತ್ತಿ ಜವಳಿ ಮೇಲೆ ಕೇಂದ್ರೀಕರಿಸಿದ್ದೇವೆ. ಆದರೆ ಅಂತರರಾಷ್ಟ್ರೀಯ ಜವಳಿ ಮಾರುಕಟ್ಟೆಯ 2/3 ಪಾಲು ಮಾನವ ನಿರ್ಮಿತ ಮತ್ತು ತಾಂತ್ರಿಕ ಜವಳಿ. ಈ ಪಿಎಲ್ಐ ಯೋಜನೆಯನ್ನು ಅನುಮೋದಿಸಲಾಗಿದೆ. ಇದರಿಂದ ಭಾರತವು ಮಾನವ ನಿರ್ಮಿತ ನಾರುಗಳ ಉತ್ಪಾದನೆಗೆ ಕೊಡುಗೆ ನೀಡುತ್ತದೆ ಎಂದು ಗೋಯಲ್ ಹೇಳಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications