NRCಗೂ ಮೊದಲು NPR: ಕೇಂದ್ರದ ಮಹತ್ವದ ತೀರ್ಮಾನ
ನವದೆಹಲಿ, ಡಿಸೆಂಬರ್ 24: ರಾಷ್ಟ್ರದಾದ್ಯಂತ ಪೌರತ್ವ ನೋಂದಣಿ (ಎನ್ಆರ್ಸಿ) ಜಾರಿಗೊಳಿಸಲು ಸಿದ್ಧವಾಗಿರುವ ಕೇಂದ್ರ ಸರ್ಕಾರ, ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಮುಂದಿನ ವರ್ಷ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಕಾರ್ಯಕ್ರಮವನ್ನು ದೇಶದಾದ್ಯಂತ ನಡೆಸಲು ಕೇಂದ್ರ ಸಚಿವ ಸಂಪುಟ ತೀರ್ಮಾನಿಸಿದೆ.
ಜನಸಂಖ್ಯಾ ನೋಂದಣಿಗೆ (ಎನ್ಪಿಆರ್) ಕೇಂದ್ರ ಸಚಿವ ಸಂಪುಟ ಮಂಗಳವಾರದ ಸಭೆಯಲ್ಲಿ ಅನುಮೋದನೆ ನೀಡಿದೆ. ಈ ಯೋಜನೆಗಾಗಿ ಕೇಂದ್ರ ಸರ್ಕಾರ 8700 ಕೋಟಿ ರೂ. ಮೀಸಲಿಡಲಿದೆ.

ಏಪ್ರಿಲ್- ಸೆಪ್ಟೆಂಬರ್ ಅವಧಿಯಲ್ಲಿ ಎನ್ಪಿಆರ್ ನಡೆಯಲಿದ್ದು, ಜನ್ಮಸ್ಥಳ, ಜನ್ಮದಿನಾಂಕದ ನೋಂದಣಿಗೆ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಲಿದೆ. ಎನ್ಆರ್ಸಿ ಜಾರಿಗೂ ಮೊದಲು ನಡೆಯುವ ಎನ್ಪಿಆರ್, ಕೇಂದ್ರ ಸರ್ಕಾರದ ಯೋಜನೆಗೆ ನೆರವಾಗಲಿದೆ.
ದೇಶದ ಪ್ರತಿ ಸಾಮಾನ್ಯ ನಾಗರಿಕರ ಗುರುತಿನ ಮೂಲ ಡಾಟಾಬೇಸ್ ಸೃಷ್ಟಿಸುವುದು ಎನ್ಪಿಆರ್ ಉದ್ದೇಶವಾಗಿದೆ. ಇದು ಜನಸಂಖ್ಯಾಶಾಸ್ತ್ರ ಮತ್ತು ಬಯೋಮೆಟ್ರಿಕ್ ಎರಡೂ ವಿವರಗಳನ್ನು ಹೊಂದಲಿದೆ.
ಅಸ್ಸಾಂ ಹೊರತುಪಡಿಸಿ ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಎನ್ಪಿಆರ್ ಯೋಜನೆ ನಡೆಯಲಿದೆ. ಅಸ್ಸಾಂನಲ್ಲಿ ಎನ್ಆರ್ಸಿ ಮೂಲಕ ಈಗಾಗಲೇ ಅಕ್ರಮ ವಲಸಿಗರನ್ನು ಗುರುತಿಸುವ ಕಾರ್ಯ ಮುಕ್ತಾಯಗೊಂಡಿದೆ.
ಎನ್ಪಿಆರ್ ಡೇಟಾಗಳನ್ನು 2010ರಲ್ಲಿ ಯುಪಿಎ ಸರ್ಕಾರದ ಎರಡನೆಯ ಅವಧಿಯಲ್ಲಿ ಮೊದಲ ಬಾರಿಗೆ ಸಂಗ್ರಹಿಸಲಾಗಿತ್ತು. ಇದರೊಟ್ಟಿಗೆ 2011ರ ಜನಗಣತಿಯ ಜತೆ ಮನೆಗಳ ಪಟ್ಟಿಯನ್ನೂ ಸಿದ್ಧಪಡಿಸಲಾಗಿತ್ತು.
ಮನೆಯಿಂದ ಮನೆಗೆ ನಡೆಸಿದ ಸಮೀಕ್ಷೆಯ ಬಳಿಕ 2015ರಲ್ಲಿ ಎನ್ಪಿಆರ್ ಡೇಟಾವನ್ನು ಮೊದಲ ಸಲ ಅಪ್ಡೇಟ್ ಮಾಡಲಾಗಿತ್ತು. ಈ ಎಲ್ಲ ಡೇಟಾಗಳ ಡಿಜಿಟೈಸೇಷನ್ ಕಾರ್ಯ ಈಗ ಪೂರ್ಣಗೊಂಡಿದೆ. ಮುಂದಿನ ಹಂತದಲ್ಲಿ ಸರ್ಕಾರವು 2021ರ ಜನಗಣತಿಯ ಎನ್ಪಿಆರ್ ಹಾಗೂ ಮನೆಗಳ ಪಟ್ಟಿಯ ಪ್ರಕ್ರಿಯೆಯನ್ನು ನಡೆಸಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications