ಡಿಸೆಂಬರ್ 16ರಂದು ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ
ನವದೆಹಲಿ, ಡಿಸೆಂಬರ್ 15: ಒಂದೆಡೆ ರೈತರ ಪ್ರತಿಭಟನೆ ನಡೆಯುತ್ತಿದೆ, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಸಚಿವ ಸಂಪುಟ ಸಭೆಯನ್ನು ಏರ್ಪಡಿಸಿದೆ.
ಡಿಸೆಂಬರ್ 16 ರಂದು ಬುಧವಾರ ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಬೆಳಿಗ್ಗೆ 11.25ರ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಡಿಸೆಂಬರ್ 9 ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಆತ್ಮನಿರ್ಭರ ಭಾರತ್ ರೋಜ್ಗಾರ್ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ಯೋಜನೆಯೂ ಹೊಸ ಉದ್ಯೋಗಾವಕಾಶಗಳಿಗೆ ದಾರಿ ಮಾಡಿಕೊಡಲಿದೆ.

ಹಲವು ದಿನಗಳಿಂದಲೂ ರೈತರು ದೆಹಲಿ ಗಡಿ ಪ್ರದೇಶದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಮಸೂದೆ ರದ್ದುಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಪ್ರತಿಭಟನೆ ನಡುವಲ್ಲೇ ಸಂಪುಟ ಸಭೆ ನಡೆಯುತ್ತಿರುವುದು ತೀವ್ರ ಕುತೂಹಲವನ್ನು ಮೂಡಿಸಿದೆ.
ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಇದುವರೆಗೆ ನಡೆದ 5 ಸುತ್ತಿನ ಸಭೆಗಳು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆಸಿದ ಅನೌಪಚಾರಿಕ ಮಾತುಕತೆಗಳೆಲ್ಲವೂ ವಿಫಲವಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ರೈತರ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರೆದಿದ್ದು 20ನೇ ದಿನಕ್ಕೆ ಕಾಲಿಟ್ಟಿದೆ. ಒಂದುವೇಳೆ ಕೇಂದ್ರ ಸರ್ಕಾರ ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, ಪಿಯೂಷ್ ಗೋಯಲ್, ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಹಾಗೂ ರೈತ ಸಂಘಟನೆಗಳ 35 ಪ್ರತಿನಿಧಿಗಳ ನಡುವೆ ಈವರೆಗೆ 5 ಸಭೆಗಳು ನಡೆದಿವೆ.
ಅಮಿತ್ ಶಾ ರೈತ ಸಂಘಟನೆಗಳ 13 ಪ್ರತಿನಿಧಿಗಳೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದ್ದಾರೆ. ಆದರೆ ಪ್ರಭಾವಿ ಅಮಿತ್ ಶಾ ಆಗಲಿ, ಇತರೆ ಕೇಂದ್ರ ಸಚಿವರಾಗಲಿ ರೈತರನ್ನು ಮನವೊಲಿಸಲು ಸಫಲರಾಗಿಲ್ಲ.
ಇದರಿಂದ ಮಾತುಕತೆಯಿಂದ ಸಮಸ್ಯೆ ಬಗೆಹರಿಯುವ ಸಾಧ್ಯತೆ ಕ್ಷೀಣಿಸಿದ್ದು ರೈತರು ಪ್ರತಿಭಟನೆ ಮುಂದುವರೆಸುತ್ತಿದ್ದಾರೆ. ದೆಹಲಿ ಚಲೊ, ಹೆದ್ದಾರಿ ತಡೆ, ಟೋಲ್ ಫ್ಲಾಜಾಗಳ ಬಂದ್, ಬಿಜೆಪಿ ನಾಯಕರ ಮನೆ ಮುಂದೆ ಮುಷ್ಕರ, ಭಾರತ್ ಬಂದ್, ಉಪವಾಸ ಸತ್ಯಾಗ್ರಹಗಳೆಲ್ಲವನ್ನೂ ಮಾಡಿರುವ ರೈತರು ಮುಂದೆ ಯಾವ ರೀತಿಯ ಪ್ರತಿಭಟನೆ ನಡೆಸುತ್ತಾರೆ ಎನ್ನುವುದನ್ನು ಕಾದುನೋಡಬೇಕಾಗಿದೆ.
-
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications