'ಬಿಲ್ ಕಟ್ಟಿಲ್ಲ ಎಂದು ಶವವನ್ನು ಆಸ್ಪತ್ರೆಯಲ್ಲಿ ಇಟ್ಟುಕೊಳ್ಳುವಂತಿಲ್ಲ'
ನವದೆಹಲಿ, ಸೆಪ್ಟೆಂಬರ್ 17: ಇನ್ನುಮುಂದೆ ಆಸ್ಪತ್ರೆ ಬಿಲ್ ಕಟ್ಟಿಲ್ಲ ಎಂದು ಯಾವುದೇ ಕಾರಣಕ್ಕು ಶವವನ್ನು ಆಸ್ಪತ್ರೆಯಲ್ಲಿ ಇರಿಸಿಕೊಳ್ಳುವಂತಿಲ್ಲ ಹೀಗೊಂದು ಕಾಯ್ದೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ.
ಕೆಲವು ಆಸ್ಪತ್ರೆಗಳಲ್ಲಿ ಬಿಲ್ ಹಣವನ್ನು ಬಾಕಿ ಉಳಿಸಿಕೊಂಡಿದ್ದಾರೆ, ಆ ಹಣವನ್ನು ನೀಡುವವರೆಗೂ ಆಸ್ಪತ್ರೆಯಿಂದ ಶವವನ್ನು ಸಾಗಿಸಲು ಅವಕಾಶ ಮಾಡಿಕೊಡುವುದಿಲ್ಲ ಎಂದು ಆಸ್ಪತ್ರೆ ವೈದ್ಯರು ಕಡಾಖಂಡಿತವಾಗಿ ಹೇಳಿಬಿಡುತ್ತಿದ್ದರು. ಆದರೆ ಇನ್ನುಮುಂದೆ ಯಾವುದೇ ಆಸ್ಪತ್ರೆಯಲ್ಲೂ ವಿವಿಧ ಕಾರಣಗಳನ್ನೊಡ್ಡಿ ಆಸ್ಪತ್ರೆಗಳಲ್ಲಿ ಶವವನ್ನು ಇಟ್ಟುಕೊಳ್ಳುವಂತಿಲ್ಲ.
ಆರೋಗ್ಯ ಸೇವೆ ಹಾಗೂ ಗ್ರಾಹಕರ ಹಕ್ಕು ಕುರಿತು ಕೇಂದ್ರ ಸರ್ಕಾರ ಹೊಸ ನಿಯಮಗಳನ್ನು ರೂಪಿಸಲು ನಿರ್ಧರಿಸಿದ್ದು, ಇದರ ಕರಡು ಪ್ರತಿಯಲ್ಲಿ ಈ ಅಂಶಗಳು ಉಲ್ಲೇಖವಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಈ ಕರಡು ನೀತಿಯನ್ನು ಸಾರ್ವಜನಿಕರಿಗಾಘಿ ತನ್ನ ವೆಬ್ಸೈಟ್ ನಲ್ಲಿ ಪ್ರಕಟಿಸಿದೆ ಜತೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಿದೆ.

ಆಸ್ಪತ್ರೆ, ಕ್ಲಿನಿಕ್ ಗಳಲ್ಲಿ ಉಂಟಾಗುವ ಕುಂದುಕೊರತೆಗಳ ಬಗ್ಗೆ ದೂರು
ಆಸ್ಪತ್ರೆ, ಕ್ಲಿನಿಕ್ ಗಳಲ್ಲಿ ಎದುರಾಗುವ ಕುಂದುಕೊರತೆಗಳನ್ನು ನಿವಾರಿಸಿಕೊಳ್ಳುವ ಹಕ್ಕು ರೋಗಿಗಳಿಗಿದೆ. ದೂರು ನೀಡಿದ 15 ದಿನದ ಒಳಗಾಗಿ ಅವರಿಗೆ ಪರಿಹಾರ ಅಥವಾ ಸಮಸ್ಯೆ ಕುರಿತು ಕೈಗೊಂಡಿರು ಕ್ರಮಗಳ ಬಗ್ಗೆ ಲಿಖಿತ ಮಾಹಿತಿ ನೀಡಬೇಕಾಗುತ್ತದೆ.

ರೋಗಿಯ ಆರೋಗ್ಯ ಮಾಹಿತಿಯ ಮೂಲ ದಾಖಲೆ ನೀಡಬೇಕು
ರೋಗಿಯ ಆರೋಗ್ಯ ಮಾಹಿತಿ ಮೂಲ ದಾಖಲೆ, ಕೇಸ್ ಪೇಪರ್, ತನಿಖಾ ವರದಿಗಳನ್ನು ಡಿಸ್ಚಾರ್ಜ್ ಆದ 72 ಗಂಟೆಯ ಒಳಗಾಗಿ ಪಡೆಯುವ ಹಕ್ಕು ರೋಗಿ ಅವರ ಕುಟುಂಬದವರಿಗೆ ಇರುತ್ತದೆ.

ಸೆಕೆಂಡ್ ಒಪೀನಿಯನ್ ಪಡೆಯಲು ಮುಕ್ತ ಅವಕಾಶ
ಚಿಕಿತ್ಸೆಗೆ ಸಂಬಂಧಿಸಿ ರೋಗಿಗಳು ಸೆಕೆಂಡ್ ಒಪೀನಿಯನ್ ಪಡೆಯುವ ಮುಕ್ತ ಅವಕಾಶವಿದೆ, ಇದಕ್ಕೆ ಆಸ್ಪತ್ರೆಗಳು ಯಾವುದೇ ಕಾರಣಕ್ಕೂ ಅಡ್ಡಿಪಡಿಸುವಂತಿಲ್ಲ. ರೋಗಿಯ ಖಸಗಿತನದ ಹಕ್ಕು ಉಲ್ಲಂಘಟನೆಯಾಗುವಂತಿಲ್ಲ, ಗ್ರಾಹಕರು ಇಚ್ಛಿಸಿದರೆ ಯಾವ ಸೇವೆ, ಚಿಕಿತ್ಸೆಗೆ ಎಷ್ಟು ವೆಚ್ಚವಾಗಬಹುದು ಎಂಬ ವಿಸ್ತೃತ ಮಾಹಿತಿಯನ್ನು ಆಸ್ಪತ್ರೆ ಮೂಲಕ ಪಡೆಯಬಹುದಾಗಿದೆ.

ಆಸ್ಪತ್ರೆ ಶುಲ್ಕ ಮಾಹಿತಿಯನ್ನು ಪ್ರಕಟಿಸುವುದು
ಆಸ್ಪತ್ರೆಯ ಶುಲ್ಕ ಮತ್ತಿತರೆ ಮಾಹಿತಿಗಳನ್ನು ಇಂಗ್ಲಿಷ್ ಮತ್ತು ಸ್ಥಳೀಯ ಭಾಷೆಯಲ್ಲಿ ಫಲಕದ ಮೇಲೆ ಪ್ರಕಟಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಯಾವುದೋ ಒಂದು ಭಾಷೆಯಲ್ಲಿ ಪ್ರಕಟಿಸುವಂತಿಲ್ಲ.
-
Summer Super Drink: ಪ್ರತಿದಿನ ಎರಡು ಗ್ಲಾಸ್ ಕಬ್ಬಿನ ರಸ: ಬೇಸಿಗೆಯ ಸೂಪರ್ ಡ್ರಿಂಕ್ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications