ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಅಪಘಾತದಿಂದ ಚೇತರಿಸಿಕೊಂಡು ಸಂಸತ್ತಿಗೆ ಆಗಮಿಸಿದ ಸಚಿವ ಶ್ರೀಪಾದ್ ನಾಯಕ್
ನವದೆಹಲಿ, ಮಾರ್ಚ್ 17: ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರು ಬುಧವಾರ ಸಂಸತ್ ಅಧಿವೇಶನದಲ್ಲಿ ಭಾಗವಹಿಸಿದರು. ಕಾರು ಅಪಘಾತದ ನಂತರ ಅವರು ಇದೇ ಮೊದಲ ಬಾರಿಗೆ ಅಧಿವೇಶನದಲ್ಲಿ ಪಾಲ್ಗೊಂಡರು.
ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಪಲ್ಟಿ: ಪತ್ನಿ ಸಾವು
ಜನವರಿ 11, 2021 ರಂದು ಕರ್ನಾಟಕದ ಯಲ್ಲಾಪುರದಿಂದ ಗೋಕರ್ಣಕ್ಕೆ ಹೋಗುವಾಗ ರಸ್ತೆ ಅಪಘಾತದಲ್ಲಿ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರು ತೀವ್ರವಾಗಿ ಗಾಯಗೊಂಡಿದ್ದರು. ಅಲ್ಲದೇ ಅವರ ಪತ್ನಿ ವಿಜಯಾ ಸಾವಿಗೀಡಾಗಿದ್ದರು. ನಂತರ ಆಸ್ಪತ್ರೆಯಲ್ಲಿ ಸಚಿವ ಆಪ್ತ ಕಾರ್ಯದರ್ಶಿ ದೀಪಕ್ ರಾಮದಾಸ್ ಕೂಡಾ ಮೃತಪಟ್ಟಿದ್ದರು.
ಅಂಕೋಲಾ ತಾಲ್ಲೂಕಿನ ಹೊಸಕಂಬಿ ಬಳಿ ಕಾರು ಪಲ್ಟಿಯಾಗಿ, ಕಾರಿನಲ್ಲಿದ್ದ ಸಚಿವ ಶ್ರೀಪಾದ್ ನಾಯಕ್ ಸೇರಿ ನಾಲ್ವರಿಗೆ ಗಾಯವಾಗಿತ್ತು. ಕೇಂದ್ರ ಸಚಿವರ ಪತ್ನಿ ವಿಜಯಾ ನಾಯಕ್ ಗಂಭೀರವಾಗಿ ಗಾಯಗೊಂಡು, ಅವರನ್ನು ಆಸ್ಪತ್ರೆಗೆ ಸಾಗಿಸುವ ಮುನ್ನ ಸಾವನ್ನಪ್ಪಿದ್ದರು.
Comments
parliament accident karwar uttara kannada new delhi ಕೇಂದ್ರ ಸಚಿವ ಸಂಸತ್ ಅಪಘಾತ ಕಾರವಾರ ಉತ್ತರ ಕನ್ನಡ ನವದೆಹಲಿ ಸಂಸತ್ ಅಧಿವೇಶನ
English summary
Union Ayush Minister Sripad Nayak has attended the parliamentary session after recovered accident Injuries.
Story first published: Wednesday, March 17, 2021, 12:29 [IST]