ಕ್ರೈಸ್ತ ಸನ್ಯಾಸಿನಿಯರ ಮೇಲಿನ ಮುತ್ತಿಗೆ ಆರೋಪ ಸುಳ್ಳು; ಪಿಯೂಶ್ ಗೋಯಲ್
ನವದೆಹಲಿ, ಮಾರ್ಚ್ 29: ಈಚೆಗೆ ಉತ್ತರ ಪ್ರದೇಶದಲ್ಲಿ ರೈಲು ಪ್ರಯಾಣದ ವೇಳೆ ಕೇರಳ ಮೂಲದ ಕ್ರೈಸ್ತ ಸನ್ಯಾಸಿನಿಯರ ಮೇಲೆ ಮುತ್ತಿಗೆ ಹಾಕಿ ಅವರನ್ನು ರೈಲಿನಿಂದ ಇಳಿಸಿರುವ ಆರೋಪ ಸುಳ್ಳು ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ತಿಳಿಸಿದ್ದು, ಕೇರಳ ಸಿಎಂ ಪಿಣರಾಯಿ ವಿಜಯನ್ ತಪ್ಪು ಹೇಳಿಕೆ ನೀಡಿದ್ದಾರೆ ಎಂದು ಹೇಳಿದ್ದಾರೆ.
"ಉತ್ತರ ಪ್ರದೇಶದಲ್ಲಿ ಯಾವುದೇ ಕ್ರೈಸ್ತ ಸನ್ಯಾಸಿನಿಯರ ಮೇಲೆ ದಾಳಿ ನಡೆಸಿಲ್ಲ. ಕೇರಳ ಮುಖ್ಯಮಂತ್ರಿ ಈ ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ" ಎಂದು ದೂರಿದ್ದಾರೆ.
ಮಾರ್ಚ್ 19ರಂದು ಉತ್ತರ ಪ್ರದೇಶದ ಝಾನ್ಸಿ ರೈಲು ನಿಲ್ದಾಣದಲ್ಲಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇಬ್ಬರು ಕ್ರೈಸ್ತ ಸನ್ಯಾಸಿನಿಯರು ಮತ್ತು ಅವರ ಇಬ್ಬರು ಶಿಷ್ಯೆಯರ ಮೇಲೆ ಮುತ್ತಿಗೆ ಹಾಕಿದ್ದ ಆರೋಪ ಕೇಳಿಬಂದಿತ್ತು. ಕೇರಳ ಸಿಎಂ ಪಿಣರಾಯಿ ವಿಜಯನ್ ಈ ವಿಷಯವನ್ನು ಎತ್ತಿ ಹಿಡಿದು, ಗೃಹ ಸಚಿವರಿಗೆ ಪತ್ರವನ್ನೂ ಬರೆದಿದ್ದರು. ಅಮಿತ್ ಶಾ ಅವರು ಕಠಿಣ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದರು.

ಕ್ರೈಸ್ತ ಸನ್ಯಾಸಿನಿಯರ ವಿರುದ್ಧ ದೂರು ಕೇಳಿಬಂದ ನಂತರ ಅಲ್ಲಿನ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದಾರೆ. ಆ ದೂರು ಸರಿಯಿದೆಯೇ ಎಂಬುದನ್ನು ಪರಿಶೀಲಿಸುವುದು ಪೊಲೀಸರ ಕರ್ತವ್ಯ. ಪೊಲೀಸರು ವಿಚಾರಣೆ ನಡೆಸಿ ಅವರ ದಾಖಲೆಗಳನ್ನು ಪರಿಶೀಲಿಸಿ ನಂತರ ಅವರ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಈ ಘಟನೆ ಕಳೆದ ಶುಕ್ರವಾರ ನಡೆದಿದ್ದು, ತೀವ್ರ ವಿವಾದ ಸೃಷ್ಟಿಸಿತ್ತು. ಮಾರ್ಚ್ 19ರಂದು ಹರಿದ್ವಾರ- ಪುರಿ ಉತ್ಕಲ್ ಎಕ್ಸ್ಪ್ರೆಸ್ನಲ್ಲಿ ಸನ್ಯಾಸಿನಿಯರು ಪ್ರಯಾಣಿಸುತ್ತಿದ್ದರು. ರೈಲ್ವೆ ಬೋಗಿಯಲ್ಲಿ ಕೆಲವು ವ್ಯಕ್ತಿಗಳು ನಾಲ್ವರು ಮಹಿಳೆಯರನ್ನು ಸುತ್ತುವರಿದಿರುವುದು 25 ಸೆಕೆಂಡುಗಳ ವಿಡಿಯೋದಲ್ಲಿ ದಾಖಲಾಗಿತ್ತು.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications