ಮಹಿಳೆ ಮೇಲೆ ಮಹಿಳೆಯಿಂದಲೇ ಅನೈಸರ್ಗಿಕ ಅತ್ಯಾಚಾರ, ಬಂಧನ
ನವದೆಹಲಿ, ಫೆಬ್ರವರಿ 5 : ಸಲಿಂಗಕಾಮಕ್ಕೆ ಮಾನ್ಯತೆ ನೀಡಿ ಸರ್ವೋಚ್ಚ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದ ಬಳಿಕ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 ಅನ್ನು ದುರ್ಬಳಸಿಕೊಂಡು 'ಅತ್ಯಾಚಾರ' ಎಸಗಿದ 19 ವರ್ಷದ ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಬಂಧನಕ್ಕೆ ಕಾರಣವೇನೆಂದರೆ, ಬಂಧಿತ ಮಹಿಳೆ ಪುರುಷರ ಕೃತಕ ಶಿಶ್ನವನ್ನು ತನ್ನ ಸೊಂಟಕ್ಕೆ ಕಟ್ಟಿಕೊಂಡು ಸಂತ್ರಸ್ತ ಮಹಿಳೆಯ ಮೇಲೆ ಬಲವಂತವಾಗಿ ಗುದ ಲೈಂಗಿಕ ಕ್ರಿಯೆ ನಡೆಸಿದ್ದಳು. ಸೆಕ್ಷನ್ 377ರ ಪ್ರಕಾರ, ಯಾವುದೇ ವ್ಯಕ್ತಿಯ ಅನುಮತಿ ಇಲ್ಲದೆ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧ.
ಆರೋಪಿತೆಯನ್ನು ಕರ್ಕರ್ಡೋಮಾ ಕೋರ್ಟಿಗೆ ಹಾಜರು ಪಡಿಸಿ, ವಿಚಾರಣೆಗಾಗಿ ಒಂದು ದಿನದ ಪೊಲೀಸ್ ಕಸ್ಟಡಿ ನೀಡಿ, ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆಕೆಯನ್ನು ಈಗ ತಿಹಾರ್ ಜೈಲಿಗೆ ಕಳುಹಿಸಲಾಗಿದೆ.

ಅಪರಾಧಿ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 164ರ ಅಡಿಯಲ್ಲಿ, ವಿಚಾರಣೆಯ ನಂತರ ಮ್ಯಾಜಿಸ್ಟ್ರೇಟ್ ಮುಂದೆ ಆರೋಪಿತ ಮಹಿಳೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ ನಂತರ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377ರ ಅಡಿಯಲ್ಲಿ ಆಕೆಯನ್ನು ಬಂಧಿಸಲಾಗಿದೆ.
ಒಬ್ಬ ಮಹಿಳೆ ಮತ್ತೊಬ್ಬ ಮಹಿಳೆಯ ಮೇಲೆ ಈ ರೀತಿಯ ಅತ್ಯಾಚಾರ ನಡೆಸಲು ಸಾಧ್ಯವೇ ಎಂಬ ಕಾರಣ ನೀಡಿ, ಸಂತ್ರಸ್ತ ಮಹಿಳೆಯ ದೂರನ್ನು ಪೊಲೀಸರು ದಾಖಲಿಸಿಕೊಂಡಿರಲಿಲ್ಲ. ಸಹಮತದ ಸಲಿಂಗಕಾಮಕ್ಕೆ ಕಾನೂನಿನ ಅಡೆತಡೆ ಇಲ್ಲದಿದ್ದರೂ, ಸಹಮತವಿಲ್ಲದ ಅನೈಸರ್ಗಿಕ ಲೈಂಗಿಕ ಕ್ರಿಯೆ ಅಪರಾಧವಾಗುತ್ತದೆ.
ಈಶಾನ್ಯ ಭಾರತದಿಂದ ಕೆಲಸಕ್ಕೆಂದು ದೆಹಲಿಗೆ ಬಂದಿದ್ದ ಯುವತಿಯನ್ನು ಆರೋಪಿತ ಮಹಿಳೆ ಎರಡು ತಿಂಗಳುಗಳ ಕಾಲ ತನ್ನ ಬಳಿಯೇ ಬಲವಂತವಾಗಿ ಇರಿಸಿಕೊಂಡಿದ್ದಳು ಮತ್ತು ದೈಹಿಕವಾಗಿ ಹಾಗು ಲೈಂಗಿಕವಾಗಿ ದೌರ್ಜನ್ಯ ನಡೆಸಿದ್ದಳು. ಆದರೆ, ಈ ಬಗ್ಗೆ ದೂರು ನೀಡಿದ್ದರೂ ಸೀಮಾಪುರಿ ಪೊಲೀಸ್ ಠಾಣೆಯ ಅಧಿಕಾರಿಗಳು ದೂರು ಸ್ವೀಕರಿಸಲು ನಿರಾಕರಿಸಿದ್ದರು.
ಗುರುಗ್ರಾಮದಲ್ಲಿ ತಾನಿದ್ದ ಕೆಲಸ ಬಿಟ್ಟು ವ್ಯಾಪಾರದಲ್ಲಿ ತೊಡಗಲು ಸಂತ್ರಸ್ತ ಮಹಿಳೆ ನಿರ್ಧರಿಸಿದ್ದಳು. ಅದಕ್ಕೆ ಉದ್ಯೋಗ ಸಂಗಾತಿಗಳನ್ನು ಹುಡುಕಬೇಕಾಗಿತ್ತು. ಆಗ ಭೇಟಿಯಾದವರೇ ಎಚ್ಸಿಎಲ್ ನಲ್ಲಿ ಕೆಲಸ ಮಾಡುತ್ತಿದ್ದ ರೋಹಿತ್ ಮತ್ತು ಮತ್ತೊಬ್ಬ ರಾಹುಲ್. ಇಬ್ಬರೂ ಮಹಿಳೆಯನ್ನು ಪುಸಲಾಯಿಸಿ ಅಪಾರ್ಟ್ಮೆಂಟಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದರು ಮತ್ತು ಅಶ್ಲೀಲ ವಿಡಿಯೋ ಚಿತ್ರೀಕರಿಸಿದ್ದರು. ಅದೇ ಅಪಾರ್ಟ್ಮೆಂಟ್ ನಲ್ಲಿ ಆರೋಪಿತ ಮಹಿಳೆಯೂ ಇದ್ದಳು.
ಮೂವರೂ ಸೇರಿ ಆಕೆಯ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ, ಮಹಿಳೆಯ ಮೂಲಕ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿತ್ತು. ಇತರ ವಿಟಪುರುಷರಿಗೂ ಅನುಕೂಲವಾಗುವಂತೆ ಸಂತ್ರಸ್ತ ಮಹಿಳೆಯನ್ನು ಅಣಿಗೊಳಿಸಲಾಗುತ್ತಿತ್ತು. ಇದನ್ನು ಮಾಡಲು ಆರೋಪಿ ಮಹಿಳೆಗೆ ಅತೀವ ಆನಂದವಾಗುತ್ತಿತ್ತು. ಈ ದೌರ್ಜನ್ಯ ಎಸಗಿದ್ದಕ್ಕಾಗಿ ಆಕೆಗೆ ಶಿಕ್ಷೆ ಆಗಲೇಬೇಕು ಎಂದು ಸಂತ್ರಸ್ತೆ ಕೇಳಿಕೊಂಡಿದ್ದಾಳೆ. ಕಡೆಗೆ, ಹೇಮಂತ್ ಶರ್ಮಾ ಎಂಬ ಸಾಮಾಜಿಕ ಕಾರ್ಯಕರ್ತನ ಮೂಲಕ ಆಕೆ ಪಾರಾಗಿದ್ದಾಳೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications