ಉಪಹಾರ್ ಚಿತ್ರಮಂದಿರ ಕೇಸ್: ಅನ್ಸಾಲ್ ಸೋದರರಿಗೆ ರಿಲೀಫ್
ನವದೆಹಲಿ, ಫೆಬ್ರವರಿ 20: ದೆಹಲಿಯ ಉಪಹಾರ್ ಚಿತ್ರಮಂದಿರದ ಅಗ್ನಿ ಅನಾಹುತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ನ್ಯಾಯಪೀಠ ತಳ್ಳಿ ಹಾಕಿದೆ. ಈ ಮೂಲಕ ಅನ್ಸಾಲ್ ಸೋದರರು ಜೈಲು ಶಿಕ್ಷೆ ತಪ್ಪಿಸಿಕೊಂಡಿದ್ದಾರೆ
ಚಿತ್ರಮಂದಿರ ಮಾಲೀಕರಿರಾದ ಅನ್ಸಾಲ್ ಸೋದರರ ವಿರುದ್ಧ ಸ್ಥಳೀಯ ನ್ಯಾಯಾಲಯವೊಂದರಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆದರೆ, ಇದರಿಂದ ಬಚಾವಾಗಿತ್ತು. ಸಂತ್ರಸ್ತರ ಗುಂಪೊಂದು(AVUT) ಸುಪ್ರೀಂಕೋರ್ಟಿನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಿತ್ತು. ಆದರೆ, ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಹಾಗೂ ಜಸ್ಟೀಸ್ ಎನ್ ವಿ ರಮಣ ಮತ್ತು ಅರುಣ್ ಮಿಶ್ರಾ ಅವರಿದ್ದ ನ್ಯಾಯಪೀಠವು ಗುರುವಾರದಂದು ಅರ್ಜಿಯನ್ನು ತಿರಸ್ಕರಿಸಿದ್ದು, ಸೂಕ್ತ ದಾಖಲೆಗಳ ಕೊರತೆ ಇದೆ ಎಂದು ನ್ಯಾಯಪೀಠ ಹೇಳಿದೆ.
ಈ ಮುಂಚೆ ಜೈಲು ಭೀತಿಯಿಂದ ಗೋಪಾಲ್ ಸೋದರರು ಪಾರಾಗಿದ್ದ ಅನ್ಸಲ್ ಸೋದರರಿಗೆ ಕೇವಲ ಒಂದು ವರ್ಷ ಜೈಲು ಶಿಕ್ಷೆ ಘೋಷಿಸಲಾಗಿತ್ತು.ಆದರೆ, ಈಗ ಪ್ರಕರಣದ ಸಾಕ್ಷ್ಯ ನಾಶ ಮಾಡಿರುವ ಆರೋಪದ ಮೇಲೆ ಅನ್ಸಾಲ್ ಸೋದರರ ವಿರುದ್ಧ ಜಾಮೀನು ರಹಿತ ವಾರೆಂಟ್ (ಎನ್ ಬಿಡಬ್ಲ್ಯೂ) ಜಾರಿಗೊಳಿಸಿ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲವು ಆದೇಶ ನೀಡಿತ್ತು. ಆದರೆ, ವಾರೆಂಟ್ ನಿಂದ ಬಚಾವಾಗಿದ್ದರು.

1997ರ ಜೂನ್ 13ರಂದು ಬಾರ್ಡರ್ ಚಿತ್ರ ಪ್ರದರ್ಶನ ವೇಳೆ ಸಂಭವಿಸಿದ ಅಗ್ನಿ ದುರಂತದಲ್ಲಿ 59 ಮಂದಿ ಸಾವನ್ನಪ್ಪಿದ್ದರು. 103 ಜನ ಗಾಯಗೊಂಡಿದ್ದರು.
ಆರೋಪಿಗಳಾದ ಸುಶೀಲ್ ಅನ್ಸಾಲ್(79) ಹಾಗೂ ಗೋಪಾಲ್ ಅನ್ಸಾಲ್(80) ಅವರು ಮುಂದಿನ ಮೂರು ತಿಂಗಳಿನಲ್ಲಿ ತಲಾ 30 ಕೋಟಿ ರು ಪಾವತಿಸುವಂತೆ 2016ರಲ್ಲಿ ಸುಪ್ರೀಂಕೋರ್ಟ್ ಸೂಚಿಸಿತ್ತು.

ಡಿಸೆಂಬರ್ 2008ರಲ್ಲಿ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದು, ಇಬ್ಬರಿಗೂ ಒಂದು ವರ್ಷ ಜೈಲುವಾಸ ಹಾಗೂ ತಲಾ 30 ಕೋಟಿ ರು ದಂಡ ವಿಧಿಸಲಾಗಿತ್ತು. 20 ವರ್ಷಗಳಿಂದ ಕಾನೂನು ಹೋರಾಟ ನಡೆಸಿರುವ ಸಂತ್ರಸ್ತ ಕೃಷ್ಣಮೂರ್ತಿ ದಂಪತಿ ಅವರು ಈ ಪ್ರಕರಣದಲ್ಲಿ ಸರಿಯಾದ ನ್ಯಾಯ ಸಿಗಬೇಕು, ತಮ್ಮ ಇಬ್ಬರು ಮಕ್ಕಳ ಆತ್ಮಕ್ಕೆ ಶಾಂತಿ ಸಿಗುವ ತನಕ ಹೋರಾಟ ಮುಂದುವರೆಸುವುದಾಗಿ ಹೇಳಿದ್ದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications