ಉಪಹಾರ್ ಚಿತ್ರಮಂದಿರ ಕೇಸ್: ಅನ್ಸಾಲ್ ಸೋದರರಿಗೆ ರಿಲೀಫ್
ನವದೆಹಲಿ, ಫೆಬ್ರವರಿ 20: ದೆಹಲಿಯ ಉಪಹಾರ್ ಚಿತ್ರಮಂದಿರದ ಅಗ್ನಿ ಅನಾಹುತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ನ್ಯಾಯಪೀಠ ತಳ್ಳಿ ಹಾಕಿದೆ. ಈ ಮೂಲಕ ಅನ್ಸಾಲ್ ಸೋದರರು ಜೈಲು ಶಿಕ್ಷೆ ತಪ್ಪಿಸಿಕೊಂಡಿದ್ದಾರೆ
ಚಿತ್ರಮಂದಿರ ಮಾಲೀಕರಿರಾದ ಅನ್ಸಾಲ್ ಸೋದರರ ವಿರುದ್ಧ ಸ್ಥಳೀಯ ನ್ಯಾಯಾಲಯವೊಂದರಿಂದ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಆದರೆ, ಇದರಿಂದ ಬಚಾವಾಗಿತ್ತು. ಸಂತ್ರಸ್ತರ ಗುಂಪೊಂದು(AVUT) ಸುಪ್ರೀಂಕೋರ್ಟಿನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಿತ್ತು. ಆದರೆ, ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಹಾಗೂ ಜಸ್ಟೀಸ್ ಎನ್ ವಿ ರಮಣ ಮತ್ತು ಅರುಣ್ ಮಿಶ್ರಾ ಅವರಿದ್ದ ನ್ಯಾಯಪೀಠವು ಗುರುವಾರದಂದು ಅರ್ಜಿಯನ್ನು ತಿರಸ್ಕರಿಸಿದ್ದು, ಸೂಕ್ತ ದಾಖಲೆಗಳ ಕೊರತೆ ಇದೆ ಎಂದು ನ್ಯಾಯಪೀಠ ಹೇಳಿದೆ.
59 ಮಂದಿ ಸಾವಿಗೆ ಕಾರಣನಾದವನಿಗೆ 1 ವರ್ಷ ಜೈಲು
ಈ ಮುಂಚೆ ಜೈಲು ಭೀತಿಯಿಂದ ಗೋಪಾಲ್ ಸೋದರರು ಪಾರಾಗಿದ್ದ ಅನ್ಸಲ್ ಸೋದರರಿಗೆ ಕೇವಲ ಒಂದು ವರ್ಷ ಜೈಲು ಶಿಕ್ಷೆ ಘೋಷಿಸಲಾಗಿತ್ತು.ಆದರೆ, ಈಗ ಪ್ರಕರಣದ ಸಾಕ್ಷ್ಯ ನಾಶ ಮಾಡಿರುವ ಆರೋಪದ ಮೇಲೆ ಅನ್ಸಾಲ್ ಸೋದರರ ವಿರುದ್ಧ ಜಾಮೀನು ರಹಿತ ವಾರೆಂಟ್ (ಎನ್ ಬಿಡಬ್ಲ್ಯೂ) ಜಾರಿಗೊಳಿಸಿ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲವು ಆದೇಶ ನೀಡಿತ್ತು. ಆದರೆ, ವಾರೆಂಟ್ ನಿಂದ ಬಚಾವಾಗಿದ್ದರು.
1997ರ ಜೂನ್ 13ರಂದು ಬಾರ್ಡರ್ ಚಿತ್ರ ಪ್ರದರ್ಶನ ವೇಳೆ ಸಂಭವಿಸಿದ ಅಗ್ನಿ ದುರಂತದಲ್ಲಿ 59 ಮಂದಿ ಸಾವನ್ನಪ್ಪಿದ್ದರು. 103 ಜನ ಗಾಯಗೊಂಡಿದ್ದರು.
ಆರೋಪಿಗಳಾದ ಸುಶೀಲ್ ಅನ್ಸಾಲ್(79) ಹಾಗೂ ಗೋಪಾಲ್ ಅನ್ಸಾಲ್(80) ಅವರು ಮುಂದಿನ ಮೂರು ತಿಂಗಳಿನಲ್ಲಿ ತಲಾ 30 ಕೋಟಿ ರು ಪಾವತಿಸುವಂತೆ 2016ರಲ್ಲಿ ಸುಪ್ರೀಂಕೋರ್ಟ್ ಸೂಚಿಸಿತ್ತು.
ಡಿಸೆಂಬರ್ 2008ರಲ್ಲಿ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದು, ಇಬ್ಬರಿಗೂ ಒಂದು ವರ್ಷ ಜೈಲುವಾಸ ಹಾಗೂ ತಲಾ 30 ಕೋಟಿ ರು ದಂಡ ವಿಧಿಸಲಾಗಿತ್ತು. 20 ವರ್ಷಗಳಿಂದ ಕಾನೂನು ಹೋರಾಟ ನಡೆಸಿರುವ ಸಂತ್ರಸ್ತ ಕೃಷ್ಣಮೂರ್ತಿ ದಂಪತಿ ಅವರು ಈ ಪ್ರಕರಣದಲ್ಲಿ ಸರಿಯಾದ ನ್ಯಾಯ ಸಿಗಬೇಕು, ತಮ್ಮ ಇಬ್ಬರು ಮಕ್ಕಳ ಆತ್ಮಕ್ಕೆ ಶಾಂತಿ ಸಿಗುವ ತನಕ ಹೋರಾಟ ಮುಂದುವರೆಸುವುದಾಗಿ ಹೇಳಿದ್ದರು.