ಉಪಹಾರ್ ದುರಂತ: ಅನ್ಸಾಲ್ ಸೋದರರಿಗೆ ದಂಡ
ನವದೆಹಲಿ, ಆಗಸ್ಟ್ 19: 1997ರಲ್ಲಿ ಸಂಭವಿಸಿದ ಉಪಹಾರ್ ಚಿತ್ರಮಂದಿರದ ಅಗ್ನಿ ಅನಾಹುತಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನಿಂದ ಬುಧವಾರ ಮಹತ್ವದ ಆದೇಶ ಹೊರಡಿಸಿದೆ. ಚಿತ್ರಮಂದಿರದ ಮಾಲೀಕರಾದ ಅನ್ಸಾಲ್ ಬ್ರದರ್ಸ್ 60 ಕೋಟಿ ರು ದಂಡ ವಿಧಿಸಿದೆ. ಅದರೆ, ಆನ್ಸಾಲ್ ಸೋದರರು ಜೈಲಿಗೆ ಹೋಗುವ ಅವಶ್ಯಕತೆ ಇಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ.
ಆರೋಪಿಗಳಾದ ಸುಶೀಲ್ ಅನ್ಸಾಲ್ ಹಾಗೂ ಗೋಪಾಲ್ ಅನ್ಸಾಲ್ ಅವರು ಮುಂದಿನ ಮೂರು ತಿಂಗಳಿನಲ್ಲಿ ತಲಾ 30 ಕೋಟಿ ರು ಪಾವತಿಸುವಂತೆ ಸೂಚಿಸಲಾಗಿದೆ.
ಈ ಹಿಂದೆ ಉಪಹಾರ್ ದುರಂತದ ಸಂತ್ರಸ್ತರಿಗೆ ನೀಡಬೇಕಾದ ಪರಿಹಾರ ಹೈಕೋರ್ಟ್ ಆದೇಶಿಸಿದ್ದ ಪರಿಹಾರ ಧನವನ್ನು ಸುಮಾರು ಅರ್ಧಕ್ಕೆ ಇಳಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು, ಇದರಿಂದ ಸಂತ್ರಸ್ತ ಕುಟುಂಬಗಳಿಗೆ ಭಾರೀ ಹಿನ್ನಡೆಯಾಗಿತ್ತು.

ಚಿತ್ರಮಂದಿರದ ಮಾಲಕರಾದ ಅನ್ಸಾಲ್ ಸೋದರಿಗೆ ವಿಧಿಸಲಾಗಿದ್ದ ಹಾನಿ ಪರಿಹಾರವನ್ನು ಅದು ರೂ. 25 ಕೋಟಿಯಿಂದ ರೂ. 25 ಲಕ್ಷಕ್ಕೆ ಇಳಿಸಿತ್ತು. ನ್ಯಾಯಮೂರ್ತಿ ಆರ್.ವಿ. ರವೀಂದ್ರನ್ ನೇತೃತ್ವದ ಪೀಠವೊಂದು 20 ವರ್ಷ ಮೇಲ್ಪಟ್ಟ ಮೃತರ ಕುಟುಂಬಗಳಿಗೆ ಹೈಕೋರ್ಟ್ ನಿಗದಿಗೊಳಿಸಿದ್ದ ರೂ. 18ಲಕ್ಷ ಪರಿಹಾರವನ್ನು ರೂ. 10ಲಕ್ಷ ಹಾಗೂ 20 ವರ್ಷಕ್ಕಿಂತ ಕೆಳಗಿನವರಿಗೆ ರೂ. 15 ಲಕ್ಷದಿಂದ ರೂ. 7.5 ಲಕ್ಷಕ್ಕೆ ಇಳಿಸಿ ಆದೇಶ ನೀಡಿತ್ತು.
ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ನ್ಯಾಯಾಲಯ ಮೃತರ ಮತ್ತು ಗಾಯಾಳುಗಳ ಸಂಬಂಧಿಕರಿಗೆ 25 ಕೋಟಿ ರು. ಪರಿಹಾರ ನೀಡುವಂತೆ ಆದೇಶ ನೀಡಿತ್ತು. ಆದರೆ ದೆಹಲಿ ನ್ಯಾಯಾಲಯ ಹೇರಿದ ದಂಡದ ಮೊತ್ತ ಹೆಚ್ಚಾಯಿತು ಎಂದು ಅನ್ಸಾಲ್ ಸಹೋದರರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
1997ರ ಜೂ. 13ರಂದು 'ಬಾರ್ಡರ್' ಚಿತ್ರದ ಪ್ರಥಮ ಪ್ರದರ್ಶನದ ವೇಳೆ ಉಪಹಾರ್ ಚಿತ್ರಮಂದಿರದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ 59 ಮಂದಿ ಸಾವಿಗೀಡಾಗಿ 103 ಜನ ಗಾಯಗೊಂಡಿದ್ದರು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications