2020ನೇ ಸಾಲಿನ ಯುಪಿಎಸ್ಸಿ ಫಲಿತಾಂಶ ಪ್ರಕಟ: ಕರ್ನಾಟಕದ 18 ಅಭ್ಯರ್ಥಿಗಳು ತೇರ್ಗಡೆ
ನವದೆಹಲಿ, ಸೆಪ್ಟೆಂಬರ್ 24: 2020ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್ಸಿ) ಫಲಿತಾಂಶ ಪ್ರಕಟವಾಗಿದ್ದು, 545 ಪುರುಷರು ಮತ್ತು 216 ಮಹಿಳೆಯರು ಸೇರಿ ಒಟ್ಟು 761 ಅಭ್ಯರ್ಥಿಗಳು ಉತ್ತೀರ್ಣಗೊಂಡಿದ್ದಾರೆ.
2020ನೇ ಸಾಲಿನಲ್ಲಿ ಒಟ್ಟು 18 ಮಂದಿ ಕನ್ನಡಿಗರು ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದು, ಕರ್ನಾಟಕದ ಅಕ್ಷಯ್ ಸಿಂಹ ದೇಶಕ್ಕೆ 77ನೇ ಸ್ಥಾನ ಗಳಿಸಿಕೊಂಡಿದ್ದಾರೆ. ಕರ್ನಾಟಕದಿಂದ ತೇರ್ಗಡೆಗೊಂಡ 18 ಅಭ್ಯರ್ಥಿಗಳ ಪೈಕಿ 15 ಅಭ್ಯರ್ಥಿಗಳು ಇಂಡಿಯಾ ಫಾರ್ ಐಎಎಸ್ ಸಂಸ್ಥೆಯಿಂದ ತರಬೇತಿ ಪಡೆದಿದ್ದಾರೆ ಎನ್ನುವುದು ವಿಶೇಷವಾಗಿದೆ.
ಐಐಟಿ ಬಾಂಬೆಯ ಶುಭಂ ಕುಮಾರ್ ಯುಪಿಎಸ್ಸಿ ಫಲಿತಾಂಶದಲ್ಲಿ ದೇಶಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಜಾಗ್ರತಿ ಅವಸ್ಥಿಗೆ ಎರಡನೇ ಶ್ರೇಯಾಂಕ, ಅಂಕಿತ್ ಜೈನ್ ಮೂರನೇ ಶ್ರೇಯಾಂಕ ಪಡೆದು ಸಾಧನೆ ಮಾಡಿದ್ದಾರೆ.

ಅಗ್ರ 25 ಅಭ್ಯರ್ಥಿಗಳಲ್ಲಿ, 13 ಪುರುಷರು ಮತ್ತು 12 ಮಹಿಳೆಯರನ್ನು ಒಳಗೊಂಡಿದ್ದಾರೆ. ಮೊದಲ 25 ಯಶಸ್ವಿ ಅಭ್ಯರ್ಥಿಗಳ ಶಿಕ್ಷಣ ಅರ್ಹತೆಗಳು ಎಂಜಿನಿಯರಿಂಗ್, ಮಾನವಿಕತೆ, ವಾಣಿಜ್ಯ ಮತ್ತು ವೈದ್ಯಕೀಯ ವಿಜ್ಞಾನದ ಪದವಿಗಳಿಂದ ಹಿಡಿದು ಐಐಟಿ, ಬಿಐಟಿಎಸ್, ಎನ್ಎಸ್ಯುಟಿ, ಡಿಟಿಯು, ಜಿಪ್ಮರ್, ದೆಹಲಿ ವಿಶ್ವವಿದ್ಯಾಲಯ, ಮುಂಬೈ ವಿಶ್ವವಿದ್ಯಾಲಯ ಇತ್ಯಾದಿ ಉನ್ನತ ಸಂಸ್ಥೆಗಳಿಂದ ಪದವಿ ಪಡೆದಿದ್ದಾರೆ.
2020ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್ಸಿ) ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 761 ಅಭ್ಯರ್ಥಿಗಳು ಉತ್ತೀರ್ಣಗೊಂಡಿದ್ದಾರೆ.#CivilServiceExamination #UPSC #upscresults pic.twitter.com/Mx7GAfSmjt
— oneindiakannada (@OneindiaKannada) September 24, 2021
ಮಾನವಶಾಸ್ತ್ರ, ಸಿವಿಲ್ ಎಂಜಿನಿಯರಿಂಗ್, ವಾಣಿಜ್ಯ ಮತ್ತು ಲೆಕ್ಕಶಾಸ್ತ್ರ, ಅರ್ಥಶಾಸ್ತ್ರ, ಭೂಗೋಳ, ಗಣಿತ, ಮೆಕ್ಯಾನಿಕಲ್ ಎಂಜಿನಿಯರಿಂಗ್, ವೈದ್ಯಕೀಯ ವಿಜ್ಞಾನ, ತತ್ವಶಾಸ್ತ್ರ, ಭೌತಶಾಸ್ತ್ರ, ರಾಜಕೀಯ ವಿಜ್ಞಾನ, ಅಂತರಾಷ್ಟ್ರೀಯ ಸಂಬಂಧಗಳು, ಸಾರ್ವಜನಿಕ ಆಡಳಿತ ಮತ್ತು ಸಮಾಜಶಾಸ್ತ್ರ ಮುಖ್ಯ ಪರೀಕ್ಷೆಯಲ್ಲಿ ಅವರ ಐಚ್ಛಿಕ ಆಯ್ಕೆಯಾಗಿವೆ.
ಟಾಪರ್ಗಳ ಪಟ್ಟಿ ಇಲ್ಲಿದೆ
ಶುಭಂ ಕುಮಾರ್
ಜಾಗ್ರತಿ ಅವಸ್ಥಿ
ಅಂಕಿತಾ ಜೈನ್
ಯಶ್ ಜಲುಕಾ
ಮಮತಾ ಯಾದವ್
ಮೀರಾ. ಕೆ
ಪ್ರವೀಣ್ ಕುಮಾರ್
ಜೀವನ ಕಾರ್ತಿಕ್ ನಾಗಜೀಭಾಯಿ
ಅಪಾಲ ಮಿಶ್ರ
ಸತ್ಯಂ ಗಾಂಧಿ
ದೇವಯ್ಯನು
ಮಿಥುನ್ ಪ್ರೇಮರಾಜ್
ಗೌರವ ಬುಡಾನಿಯಾ
ಕರಿಷ್ಮಾ ನಾಯರ್
ರಿಯಾ ಡಾಬಿ
ಅರ್ಥ್ ಜೈನ್
ಸಾರ್ಥಕ್ ಅಗರವಾಲ್
ರಾಧಿಕಾ ಗುಪ್ತಾ
ಶಾಶ್ವತ್ ತ್ರಿಪುರಾರಿ
ಪಿ. ಶ್ರೀಜಾ
ವೈಶಾಲಿ ಜೈನ್
ನಿತೇಶ್ ಕುಮಾರ್ ಜೈನ್
ಸದಾಫ್ ಚೌಧರಿ
ಕೃಷ್ಣ ಕುಮಾರ್ ಸಿಂಗ್
ವೈಭವ್ ರಾವತ್
ಪುಲ್ಕಿತ್ ಸಿಂಗ್
ಮೈತ್ರೇಯು ನಾಯ್ಡು
ದಿವ್ಯಾ ಮಿಶ್ರಾ
ಪ್ರಖರ್ ಕುಮಾರ್ ಸಿಂಗ್
ದಿವ್ಯಾಂಶು ಚೌಧರಿ
ಈ ಅಭ್ಯರ್ಥಿಗಳನ್ನು IAS, IFS, IPS ಮತ್ತು ಕೇಂದ್ರ ಸೇವೆಗಳಿಗೆ ನೇಮಕಾತಿಗಾಗಿ ಶಿಫಾರಸು ಮಾಡಲಾಗಿದೆ. ನೇಮಕಾತಿಗೆ ಒಟ್ಟು 761 ಅಭ್ಯರ್ಥಿಗಳನ್ನು ಶಿಫಾರಸು ಮಾಡಲಾಗಿದೆ.
ಜನವರಿ 8 ರಿಂದ ಜನವರಿ 17ರವರೆಗೆ ನಡೆದ ಮುಖ್ಯ ಲಿಖಿತ ಪರೀಕ್ಷೆ ಮತ್ತು ಆಗಸ್ಟ್ 2ರಿಂದ ಸೆಪ್ಟೆಂಬರ್ 22ರವರೆಗೆ ನಡೆದ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಮುಖ್ಯ ಲಿಖಿತ ಪರೀಕ್ಷೆಗೆ ಮೊದಲು, ಪ್ರಾಥಮಿಕ ಪರೀಕ್ಷೆ ಅಕ್ಟೋಬರ್ 2020ರಲ್ಲಿ ನಡೆದಿತ್ತು. ಅರ್ಹತೆ ಪಡೆದ ಅಭ್ಯರ್ಥಿಗಳು ಪ್ರಾಥಮಿಕ ಪರೀಕ್ಷೆಗೆ ಮುಖ್ಯ ಪರೀಕ್ಷೆಗೆ ಶಾರ್ಟ್ಲಿಸ್ಟ್ ಮಾಡಲಾಗಿದೆ. ಒಟ್ಟು 2,046 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಶಾರ್ಟ್ಲಿಸ್ಟ್ ಮಾಡಲಾಗಿತ್ತು.
2020ನೇ ಸಾಲಿನಲ್ಲಿ ಯುಪಿಎಸ್ಸಿ ತೇರ್ಗಡೆಯಾದ ಕನ್ನಡಿಗರು
ಅಕ್ಷಯ್ ಸಿಂಹ- 77ನೇ ಸ್ಥಾನ
ನಿಶ್ಚಯ ಪ್ರಸಾದ್- 130ನೇ ಸ್ಥಾನ
ಸಿರಿವೆನೆಲಾ- 204ನೇ ಸ್ಥಾನ
ಅನಿರುಧ್- ಗಂಗಾವರಂ 252ನೇ ಸ್ಥಾನ
ಸೂರಜ್. ಡಿ- 255ನೇ ಸ್ಥಾನ
ನೇತ್ರಾ ಮೇಟಿ- 326ನೇ ಸ್ಥಾನ
ಮೇಘಾ ಜೈನ್- 354ನೇ ಸ್ಥಾನ
ಪ್ರಜ್ವಲ್- 367ನೇ ಸ್ಥಾನ
ಸಾಗರ್. ಎ. ವಾಡಿ- 385ನೇ ಸ್ಥಾನ
ನಾಗರೋಜೆ ಶುಭಂ ಬಾವುಸಾಬ್- 453ನೇ ಸ್ಥಾನ
ಶಕೀರ್ ಅಹಮದ್- 583ನೇ ಸ್ಥಾನ
ಪ್ರಮೋದ್ ಆರಾಧ್ಯ- 601ನೇ ಸ್ಥಾನ
ಸೌರಭ್- 725ನೇ ಸ್ಥಾನ
ವೈಶಾಖ ಬಾಗಿ- 744ನೇ ಸ್ಥಾನ
ಸಂತೋಷ್. ಎಚ್- 751ನೇ ಸ್ಥಾನ
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications