ಲಷ್ಕರ್ ದಾಳಿ ಎಚ್ಚರಿಕೆ, ದೆಹಲಿಯಲ್ಲಿ ಹೈ ಅಲರ್ಟ್
ನವದೆಹಲಿ, ಡಿ. 13: ಭಾರತದ ರಾಜಧಾನಿ ನವದೆಹಲಿ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ತಯಾರಿ ನಡೆಸಲಿದೆ, ಎಚ್ಚರದಿಂದಿರಿ...
ಹೀಗೆಂದು ಭಾರತಕ್ಕೆ ಅಮೆರಿಕ ಸ್ಪಷ್ಟ ಎಚ್ಚರಿಕೆ ನೀಡಿದೆ. ಇದನ್ನು ಕೇಂದ್ರ ಗೃಹ ಸಚಿವಾಲಯ ದೃಢಪಡಿಸಿದೆ. ಹೌದು, ಭಾರತದ ಮೇಲೆ ದಾಳಿ ನಡೆಯಲಿದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆಗಳು ಸ್ಪಷ್ಟ ಎಚ್ಚರಿಕೆ ನೀಡಿವೆ. ಆದರೆ, ಎಲ್ಲಿ, ಯಾವಾಗ ದಾಳಿ ನಡೆಯುತ್ತದೆ ಎಂಬುದರ ಕುರಿತು ಮಾಹಿತಿ ಸಿಕ್ಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. [ಗಣರಾಜ್ಯೋತ್ಸವದಂದು ಲಷ್ಕರ್, ಸಿಮಿ ದಾಳಿ ಸಾಧ್ಯತೆ]
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಗಣರಾಜ್ಯೋತ್ಸವದಂದು ಭಾರತದ ಅತಿಥಿಯಾಗಿ ಭಾಗವಹಿಸಲು ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಈ ಎಚ್ಚರಿಕೆಯನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ.

ಬಿಗಿ ಭದ್ರತೆ: ದೆಹಲಿಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದರ ಜೊತೆಗೆ ಪಕ್ಕದ ರಾಜ್ಯಗಳಾದ ಉತ್ತರ ಪ್ರದೇಶ ಹಾಗೂ ರಾಜಸ್ತಾನದೊಂದಿಗೂ ಇಂಟೆಲಿಜೆನ್ಸ್ ಬ್ಯೂರೊ ನಿರಂತರ ಸಂಪರ್ಕದಲ್ಲಿದೆ. ಈ ಕುರಿತು ಅಧಿಕಾರಿಗಳ ಮಟ್ಟದಲ್ಲಿ ಅನೇಕ ಸಭೆಗಳನ್ನು ನಡೆಸಲಾಗಿದೆ. ದೆಹಲಿ ಪೊಲೀಸ್ ಆಯುಕ್ತ ಬಿ.ಎಸ್. ಬಸ್ಸಿ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿ ಕೈಗೊಂಡಿರುವ ಭದ್ರತಾ ಕ್ರಮಗಳ ಕುರಿತು ತಿಳಿಸಿದ್ದಾರೆ. [ಗಣರಾಜ್ಯೋತ್ಸವಕ್ಕೆ ಒಬಾಮಾ ಬರ್ತಾರೆ]
ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿರುವ ರಾಜಪಥದಲ್ಲಿ ದೆಹಲಿ ಪೊಲೀಸ್ ಮತ್ತು ನಾಗಾಲ್ಯಾಂಡ್ ಸಶಸ್ತ್ರ ಪೊಲೀಸರು ವಿವಿಐಪಿಗಳು ಸಾಗುವ ದಾರಿ ಹಾಗೂ ಗಣರಾಜ್ಯೋತ್ಸವದಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಕುಳಿತುಕೊಳ್ಳುವ ವೇದಿಕೆಗೆ ರಕ್ಷಣೆ ಒದಗಿಸುತ್ತಿದ್ದಾರೆ. [ಲಷ್ಕರ್ ಆರಂಭಿಸಿದೆ ಕಸಬ್ ಕ್ಲಾಸ್]
ಈ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಪೊಲೀಸ್ ಶ್ವಾನಗಳು ಎಲ್ಲ ಪ್ರದೇಶಗಳನ್ನು ಪರೀಕ್ಷಿಸುತ್ತಿದ್ದು, ಬಾಂಬ್ ಪತ್ತೆ ಯಂತ್ರ ಅಳವಡಿಸಲಾಗಿದೆ. ಇಲ್ಲಿ ಕೆಲಸ ಮಾಡುವವರಿಗೆ ವಿಶೇಷ ಗುರುತು ಪತ್ರ ನೀಡಲಾಗಿದೆ. [ಹಿಟ್ ಲಿಸ್ಟ್ ನಲ್ಲಿ ಅಡ್ವಾಣಿ, ಮೋದಿ]
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ












Click it and Unblock the Notifications