ಸಂಗೀತ ದಿಗ್ಗಜರ ಬದುಕು ಬರಹ ಕೃತಿ ಮೋದಿಗೆ ಅರ್ಪಣೆ
ನವದೆಹಲಿ, ಜೂನ್ 13: ಖ್ಯಾತ ಸರೋದ್ ವಾದಕ ಉಸ್ತಾದ್ ಅಮ್ಜದ್ ಅಲಿ ಖಾನ್ ಅವರಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಹಿರಿಯ ಸರೋದ್ ವಾದಕ ಅಮ್ಜದ್ ಅಲಿ ಖಾನ್ ಅವರು ಸಮಕಾಲೀನ 20 ಶ್ರೇಷ್ಠ ಭಾರತೀಯ ಶಾಸ್ತ್ರೀಯ ಸಂಗೀತ ಲೋಕದ ದಿಗ್ಗಜರ ಬದುಕು ಕುರಿತ ತಮ್ಮ 'ಮಾಸ್ಟರ್ ಆನ್ ಮಾಸ್ಟರ್ಸ್' ಕೃತಿಯನ್ನು ಪ್ರಧಾನಿಯವರಿಗೆ ಅರ್ಪಿಸಿದರು.

ಸಾಮಾಜಿಕ ಮಾಧ್ಯಮಗಳಿಂದ ಕುತ್ತು: ಭಾರತೀಯ ಪರಂಪರೆ, ಸಾಹಿತ್ಯ, ಸಂಸ್ಕೃತಿ, ಸಂಗೀತವನ್ನು ಉಳಿಸಿ ಬೆಳೆಸಲು ಕಾರ್ಯದಲ್ಲಿ ಸಂಗೀತ ದಿಗ್ಗಜರು ಮುಂದಾಗಿದ್ದಾರೆ. ಇದಕ್ಕೆ ನಾವೆಲ್ಲರೂ ಕೈಜೋಡಿಸಬೇಕು ಎಂದು ಪ್ರಧಾನಿ ಮೋದಿ ಅವರು ಇದೇ ಸಂದರ್ಭದಲ್ಲಿ ಹೇಳಿದರು. ಸಾಮಾಜಿಕ ಮಾಧ್ಯಮಗಳಿಂದ ಶಾಸ್ತ್ರೀಯ ಸಂಗೀತಕ್ಕೆ ಧಕ್ಕೆ ಉಂಟಾಗಿದೆ ಎಂದು ಉಸ್ತಾದ್ ಅಮ್ಜದ್ ಖಾನ್ ಅವರು ಅಭಿಪ್ರಾಯಪಟ್ಟರು.
ಮಹೋನ್ನತ ಕೃತಿ : 20ನೇ ಶತಮಾನದ 12 ಸಂಗೀತ ದಿಗ್ಗಜರ ಬದುಕಿನ ಚಿತ್ರಣವನ್ನು ಕಟ್ಟಿಕೊಡುವ ಕೃತಿ ಇದಾಗಿದೆ. ಬಡೇ ಗುಲಾಂ ಅಲಿ ಖಾನ್, ಅಮೀರ್ ಖಾನ್, ಬೇಗಂ ಅಖ್ತರ್, ಅಲ್ಲಾ ರಖಾ, ಕೇಸರ್ ಬಾಯಿ ಕೇರ್ಕರ್, ಕುಮಾರ ಗಂಧರ್ವ, ಎಂಎಸ್ ಸುಬ್ಬಲಕ್ಷ್ಮಿ, ಭೀಮಸೇನ್ ಜೋಶಿ, ಬಿಸ್ಮಿಲ್ಲಾ ಖಾನ್, ರವಿಶಂಕರ್, ವಿಲಾಯತ್ ಖಾನ್ ಹಾಗು ಕಿಶನ್ ಮಹಾರಾಜ್ ಅವರ ಬಗ್ಗೆ ಅಮ್ಜದ್ ಖಾನ್ ಅವರು ಬರೆದಿದ್ದಾರೆ. ಘರಾನಾ ಪದ್ಧತಿ, ಸಂಗೀತ ಪರಂಪರೆಯ ಬಗ್ಗೆ ಬೆಳಕು ಚೆಲ್ಲುವ ಈ ಕೃತಿ ಸಂಗೀತ ಪ್ರೇಮಿಗಳ ಮನೆಯಲ್ಲಿ ಇರಲೇಬೇಕಾದ ಕೃತಿ ಎನಿಸಿದೆ.
ಅಮೆಜಾನ್ ನಲ್ಲಿ ಈ ಪುಸ್ತಕ ಖರೀದಿಸಬಹುದು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications