ಉಪ್ರ ಸಿಎಂ ರೇಸ್ ನಲ್ಲಿರುವ ಕೇಶವ್ ಪ್ರಸಾದ್ ಮೌರ್ಯಗೆ ಐಸಿಯುನಲ್ಲಿ ಚಿಕಿತ್ಸೆ
ನವದೆಹಲಿ, ಮಾರ್ಚ್ 16: ಉತ್ತರಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಗುರುವಾರ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಕ್ತದೊತ್ತಡದ ಕುಸಿತ ಹಾಗೂ ಎದೆ ನೋವಿನ ಕಾರಣಕ್ಕೆ ಅವರು ಆಸ್ಪತೆಗೆ ದಾಖಲಾಗಿದ್ದಾರೆ.
ಕೇಶವ್ ಪ್ರಸಾದ್ ಮೌರ್ಯ ಅವರು ಉತ್ತರಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿಗಳ ರೇಸ್ ನಲ್ಲಿ ಇರುವವರು. ಮೌರ್ಯ ಜತೆಗೆ ಕೇಂದ್ರ ಸಚಿವರಾದ ರಾಜ್ ನಾಥ್ ಸಿಂಗ್, ಮನೋಜ್ ಸಿನ್ಹಾ ಹಾಗೂ ಯೋಗಿ ಆದಿತ್ಯನಾಥ್ ಹೆಸರು ಕೂಡ ಕೇಳಿಬರುತ್ತಿದೆ. ಸಂಸದರಾಗಿರುವ ಮೌರ್ಯ, ಬಿಜೆಪಿ ಮತ್ತು ಮಿತ್ರಪಕ್ಷಗಳು ಉತ್ತರಪ್ರದೇಶದಲ್ಲಿ 324 ಸ್ಥಾನಗಳಾನ್ನು ಗಳಿಸಲು ಪ್ರಮುಖ ಪಾತ್ರ ವಹಿಸಿದ್ದಾರೆ.[ಯುಪಿಯಲ್ಲಿ ಯಾರಿಗೆ ಒಲಿಯಲಿದೆ ಮುಖ್ಯಮಂತ್ರಿ ಪಟ್ಟ?]

ಸದ್ಯ ಅನಾರೋಗ್ಯದ ಕಾರಣಕ್ಕೆ ಕೇಶವ್ ಪ್ರಸಾದ್ ಮೌರ್ಯ ಅವರು ದೆಹಲಿಯ ರಾಮ್ ಮನೋಹರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರೆ ಮೌರ್ಯ ಅವರು ತುರ್ತು ಚಿಕಿತ್ಸಾ ಘಟಕದಲ್ಲಿ ಇರುವುದರಿಂದ ಅವರ ಅನಾರೋಗ್ಯದ ಬಗ್ಗೆ ಹಲವು ಊಹಾಪೋಹಗಳು ಹರಿದಾಡುತ್ತಿವೆ.[ಉತ್ತರಪ್ರದೇಶ ಮುಖ್ಯಮಂತ್ರಿ ಆಯ್ಕೆ, ಮುಂದುವರಿದ ಕುತೂಹಲ]
ಸದ್ಯಕ್ಕೆ ಉತ್ತರಪ್ರದೇಶದಲ್ಲಿ ಪ್ರಮಾಣ ವಚನ ಸ್ವೀಕಾರ ಮಾರ್ಚ್ 17ಕ್ಕೆ ಎಂದು ಈಗಾಗಲೇ ಬಿಜೆಪಿ ಘೋಷಿಸಿಯಾಗಿದೆ. ಆದರೆ ಮಣಿಪುರ ಹಾಗೂ ಗೋವಾದಲ್ಲಿ ವಿಶ್ವಾಸಮತ ಸಾಬೀತುಪಡಿಸಿದ ನಂತರವಷ್ಟೇ ಬಿಜೆಪಿ ವರಿಷ್ಠರು ಉತ್ತರಪ್ರದೇಶದ ಕಡೆಗೆ ನೋಡುತ್ತಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications