ಮರಣ ದಂಡನೆ ವಿರೋಧಿಗಳ ಸಾಲಿಗೆ ವರುಣ್ ಗಾಂಧಿ
ನವದೆಹಲಿ,ಆಗಸ್ಟ್ .2:ಭಾರತದಲ್ಲಿ ಮರಣ ದಂಡನೆ, ಗಲ್ಲು ಶಿಕ್ಷೆ ರದ್ದುಗೊಳಿಸಿ ಎಂಬ ಕೂಗಿದೆ ಬಿಜೆಪಿ ಮುಖಂಡ ವರುಣ್ ಗಾಂಧಿ ದನಿಗೂಡಿಸಿದ್ದಾರೆ, ಗಲ್ಲು ಶಿಕ್ಷೆ ವಿರೋಧಿಸುವವರ ಸಾಲಿಗೆ ಬಿಜೆಪಿ ಸಂಸದ ವರುಣ್ ಗಾಂಧಿ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಇದು ನನ್ನ ಅಭಿಪ್ರಾಯ ಮಾತ್ರ ಎಂದು ವರುಣ್ ಸ್ಪಷ್ಟನೆ ನೀಡಿದ್ದಾರೆ.
ಇಲ್ಲಿ ತನಕ ಗಲ್ಲಿಗೇರುವವರಲ್ಲಿ ಶೇ.94ರಷ್ಟು ದಲಿತ ಹಾಗೂ ಅಲ್ಪಸಂಖ್ಯಾತರಾಗಿರುವುದು ಆತಂಕಕಾರಿ ಎಂದು ಔಟ್ಲುಕ್ ನಿಯತಕಾಲಿಕದಲ್ಲಿ ಬರೆದಿರುವ ಲೇಖನದಲ್ಲಿ ವರುಣ್ ಪ್ರತಿಪಾದಿಸಿದ್ದಾರೆ. ಕೆಲ ದಿನಗಳ ಹಿಂದೆ ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಕೂಡಾ ಗಲ್ಲುಶಿಕ್ಷೆಯನ್ನು ವಿರೋಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಮರಣ ದಂಡನೆಗೊಳಗಾದವರ ವಿವರಗಳನ್ನು ಪರಿಶೀಲಿಸುವಾಗ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ತುಳಿಯಲ್ಪಟ್ಟವರೇ ಶೇ.75ರಷ್ಟಿರುವುದು ಗಮನಕ್ಕೆ ಬರುತ್ತದೆ. ಮರಣ ದಂಡನೆಯು ಪ್ರತಿಹಿಂಸೆಯನ್ನು ಕಾನೂನುಬದ್ಧಗೊಳಿಸುತ್ತದೆ ಅಷ್ಟೇ. ಅದನ್ನು ರದ್ದುಗೊಳಿಸುವ ಅಗತ್ಯವಿದೆ. ಐತಿಹಾಸಿಕವಾಗಿ ಮರಣದಂಡನೆಯು ಪ್ರಜಾಪೀಡನೆಗೆ ಸಾಧನವಾಗಿತ್ತು ಮತ್ತು ಈಗಲೂ ಅದರ ಬಳಕೆ ಕಾಲ ವಿರೋಧಾತ್ಮಕವಾಗಿದೆ.
ಮರಣ ದಂಡನೆಗೆ ಗುರಿಯಾದವರನ್ನು ನೇಣಿಗೇರಿಸುವ ವಧಾಕಾರ ನಾಗರಿಕ ಸಮಾಜಕ್ಕೊಂದು ಅವಮಾನ ಎಂದೂ ಅವರು ಬಣ್ಣಿಸಿದ್ದಾರೆ. ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್ನನ್ನು ಗಲ್ಲಿಗೇರಿಸಿರುವ ಹಿನ್ನೆಲೆಯಲ್ಲಿ ವರುಣ್ರ ಈ ಅಭಿಪ್ರಾಯ ಹೊರಬಿದ್ದಿದೆ.
ಮರಣ ದಂಡನೆಗಳಿಂದ ಅಪರಾಧ ಪ್ರವೃತ್ತಿ ತಗ್ಗುತ್ತದೆ ಎನ್ನುವುದು ಸಾಬೀತಾಗಿಲ್ಲ ಎಂದಿರುವ ಅವರು,ಭಾರತವು ಬದಲಾಗುತ್ತಿರುವ ಜಾಗತಿಕ ಚಿತ್ರಣವನ್ನು ಗುರುತಿಸುವ ಮತ್ತು ಮರಣ ದಂಡನೆಯನ್ನು ರದ್ದುಗೊಳಿಸುವ ಅಗತ್ಯವಿದೆ ಎಂದು ವಾದಿಸಿದ್ದಾರೆ.(ಐಎಎನ್ಎಸ್)
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications