ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಿಜೆಐ ಪದಚ್ಯುತಿ ಮನವಿ ತಿರಸ್ಕರಿಸಿದ ವೆಂಕಯ್ಯ ನಾಯ್ಡು
ನವದೆಹಲಿ, ಏಪ್ರಿಲ್ 23: ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಕಾಂಗ್ರೆಸ್ ನೇತೃತ್ವದ ಏಳು ಪಕ್ಷಗಳು ಮಂಡಿಸಿದ್ದ ಮಹಾಭಿಯೋಗ(impeachment) ನಿಲುವಳಿಯನ್ನು ರಾಜ್ಯಸಭಾ ಅಧ್ಯಕ್ಷ ಮತ್ತು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿರಸ್ಕರಿಸಿದ್ದಾರೆ.
"ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಮಾಡಿರುವ ಆರೋಪಗಳನ್ನು ನಾನು ಪರಿಶೀಲಿಸಿದ್ದೇನೆ. ಆದರೆ ಈ ಆರೋಪಗಳಲ್ಲಿ ಮುಖ್ಯನ್ಯಾಯಮೂರ್ತಿಗಳು ದೋಷಿಗಳು ಎಂದು ಪರಿಗಣಿಸುವುದಕ್ಕೆ ಸಾಧ್ಯವಿಲ್ಲ. ಈ ಆರೋಪಗಳಲ್ಲಿ ಹುರುಳಿಲ್ಲ. ಆದ್ದರಿಂದ ಪದಚ್ಯುತಿ ನಿಲುವಳಿ ಮಂಡನೆಯನ್ನು ನಾನು ತಿರಸ್ಕರಿಸುತ್ತೇನೆ" ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಭಾರತೀಯ ಸಂವಿಧಾನದ 217 ಮತ್ತು 124(4)ನೇ ವಿಧಿಯ ಅಡಿಯಲ್ಲಿ ದೀಪಕ್ ಮಿಶ್ರಾ ಅವರನ್ನು ಪದಚ್ಯುತಿಗೊಳಿಸುವಂತೆ ಒತ್ತಾಯಿಸಿ, ಕಾಂಗ್ರೆಸ್ ನೇತೃತ್ವದಲ್ಲಿ ಎನ್ ಸಿಪಿ, ಸಿಪಿಐ-ಎಂ ಮತ್ತು ಸಿಪಿಐ, ಸಮಾಜವಾದಿ ಪಕ್ಷ, ಬಹುಜನ ಸಮಾಜವಾದಿ ಪಕ್ಷ ಸೇರಿದಂತೆ 7 ವಿರೋಧ ಪಕ್ಷಗಳು ಮಹಾಭಿಯೋಗ ನಿಲುವಳಿ ಮಂಡಿಸಿದ್ದವು.
Comments
English summary
Vice President M Venkaiah Naidu rejects the Impeachment Motion by Congress led opposition parties against Chief Justice of India Dipak Misra.