ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಜೆಐ ಪದಚ್ಯುತಿ ಮನವಿ ತಿರಸ್ಕರಿಸಿದ ವೆಂಕಯ್ಯ ನಾಯ್ಡು

|
Google Oneindia Kannada News

ನವದೆಹಲಿ, ಏಪ್ರಿಲ್ 23: ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಕಾಂಗ್ರೆಸ್ ನೇತೃತ್ವದ ಏಳು ಪಕ್ಷಗಳು ಮಂಡಿಸಿದ್ದ ಮಹಾಭಿಯೋಗ(impeachment) ನಿಲುವಳಿಯನ್ನು ರಾಜ್ಯಸಭಾ ಅಧ್ಯಕ್ಷ ಮತ್ತು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿರಸ್ಕರಿಸಿದ್ದಾರೆ.

"ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಮಾಡಿರುವ ಆರೋಪಗಳನ್ನು ನಾನು ಪರಿಶೀಲಿಸಿದ್ದೇನೆ. ಆದರೆ ಈ ಆರೋಪಗಳಲ್ಲಿ ಮುಖ್ಯನ್ಯಾಯಮೂರ್ತಿಗಳು ದೋಷಿಗಳು ಎಂದು ಪರಿಗಣಿಸುವುದಕ್ಕೆ ಸಾಧ್ಯವಿಲ್ಲ. ಈ ಆರೋಪಗಳಲ್ಲಿ ಹುರುಳಿಲ್ಲ. ಆದ್ದರಿಂದ ಪದಚ್ಯುತಿ ನಿಲುವಳಿ ಮಂಡನೆಯನ್ನು ನಾನು ತಿರಸ್ಕರಿಸುತ್ತೇನೆ" ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.

Venkaiah Naidu begins consultation on impeachment motion against CJI

ಭಾರತೀಯ ಸಂವಿಧಾನದ 217 ಮತ್ತು 124(4)ನೇ ವಿಧಿಯ ಅಡಿಯಲ್ಲಿ ದೀಪಕ್ ಮಿಶ್ರಾ ಅವರನ್ನು ಪದಚ್ಯುತಿಗೊಳಿಸುವಂತೆ ಒತ್ತಾಯಿಸಿ, ಕಾಂಗ್ರೆಸ್ ನೇತೃತ್ವದಲ್ಲಿ ಎನ್ ಸಿಪಿ, ಸಿಪಿಐ-ಎಂ ಮತ್ತು ಸಿಪಿಐ, ಸಮಾಜವಾದಿ ಪಕ್ಷ, ಬಹುಜನ ಸಮಾಜವಾದಿ ಪಕ್ಷ ಸೇರಿದಂತೆ 7 ವಿರೋಧ ಪಕ್ಷಗಳು ಮಹಾಭಿಯೋಗ ನಿಲುವಳಿ ಮಂಡಿಸಿದ್ದವು.

English summary
Vice President M Venkaiah Naidu rejects the Impeachment Motion by Congress led opposition parties against Chief Justice of India Dipak Misra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X