1971ರ ಯುದ್ಧ ನೆನಪಿಸಿಕೊಳ್ಳಿ, ಪಾಕ್ ಗೆ ವೆಂಕಯ್ಯ ನಾಯ್ಡು ಖಡಕ್ ಎಚ್ಚರಿಕೆ
ನವದೆಹಲಿ, ಜುಲೈ 23 : ಭಯೋತ್ಪಾದನೆಗೆ ಪ್ರಚೋದಿಸುತ್ತಿರುವ ಪಾಕಿಸ್ತಾನ ವಿರುದ್ಧ ಎನ್ ಡಿಎ ಪಕ್ಷದ ಉಪ ರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಗುಡುಗಿದ್ದಾರೆ.
ಭಾನುವಾರ ಕಾರ್ಗಿಲ್ ಪರಾಕ್ರಮ ಪರೇಡ್ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, "ಭಯೋತ್ಪಾದನೆಯನ್ನು ಪ್ರಯೋಜಿಸುತ್ತಿರುವ ಪಾಕಿಸ್ತಾನ 1971ರ ಯುದ್ಧವನ್ನು ನೆನಪಿಸಿಕೊಳ್ಳಬೇಕಿದೆ. ಭಯೋತ್ಪಾದನೆಗೆ ನೀಡುತ್ತಿರುವ ನೆರವು ಹಾಗೂ ಕುಮ್ಮಕ್ಕುಗಳು ಅವರಿಗೆ ಎಂದಿಗೂ ಸಹಾಯಕವಾಗುವುದಿಲ್ಲ ಎಂದರು.

ಭಯೋತ್ಪಾದನೆ ಎಂಬುದು ಮಾನವೀಯತೆಯ ಶತ್ರುವಾಗಿದೆ. ಅದಕ್ಕೆ ಧರ್ಮ ಹಾಗೂ ಜಾತಿಯಿಲ್ಲ. ದುರಾದೃಷ್ಟಕರ ವಿಚಾರವೆಂದರೆ ಇಂತಹ ಭಯೋತ್ಪಾದನೆ ಎಂಬುದು ಪಾಕಿಸ್ತಾನದಲ್ಲಿ ರಾಷ್ಟ್ರನೀತಿಯಾಗಿದೆ.
Our neighbour should understand that aiding and abetting terror will not help them, they should recall what happened in 1971: Venkaiah Naidu pic.twitter.com/LHwJVrP7fQ
— ANI (@ANI_news) July 23, 2017
ಭಯೋತ್ಪಾದನೆ ನೆರವು ನೀಡುವುದು ಹಾಗೂ ಕುಮ್ಮಕ್ಕು ನೀಡುವುದರಿಂದ ತಮಗೆ ಯಾವ ಸಹಾಯವಾಗುವುದಿಲ್ಲ ಎಂಬುದನ್ನು ನೆರೆರಾಷ್ಟ್ರ ಮನಗಾಣಬೇಕಿದೆ. 1971ರಲ್ಲಿ ಏನಾಯಿತು ಎಂಬುದನ್ನು ಅವರು ನೆನೆಯಬೇಕಿದೆ ಎಂದು ಖಡಕ್ ಮಾತಿನಲ್ಲಿ ಗುಡುಗಿದರು.
ಇದೇ ವೇಳೆ ಕಾಶ್ಮೀರ ವಿವಾದ ಕುರಿತಂತೆ ಮಾತನಾಡಿರುವ ಅವರು, ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಕಾಶ್ಮೀರದ ಒಂದು ಇಂಚನ್ನು ಬಿಟ್ಟುಕೊಡುವುದಿಲ್ಲ.
ನಾವು ಶಾಂತಿಯನ್ನು ಪ್ರೀತಿಸುವ ಜನ. ಯಾವುದೇ ರಾಷ್ಟ್ರದ ಮೇಲೆ ದಾಳಿ ಮಾಡುವುದಿಲ್ಲ. ಇದು ನಮ್ಮ ವಿಶೇಷತೆ. ನಾವು ಯುದ್ಧವನ್ನು ಬಯಸುವುದಿಲ್ಲ. ಹಿಂಸಾಚಾರಗಳು ನಮಗೆ ಬೇಕಿಲ್ಲ. ನಮಗೆ ಶಾಂತಿ ಬೇಕು.
ನೆರೆರಾಷ್ಟ್ರದೊಂದಿಗೆ ಉತ್ತಮ ಸಂಬಂಧ ಹೊಂದುವುದು ನಮಗೆ ಬೇಕು. ನಮ್ಮಂತೆಯೇ ಅವರೂ ನಡೆದುಕೊಳ್ಳಬೇಕು ಎಂದು ಪಾಕಿಸ್ತಾನಕ್ಕೆ ಸಲಹೆ ನೀಡಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications