ಔಟ್ ಲುಕ್' ಸ್ಥಾಪಕ, ಹಿರಿಯ ಪತ್ರಕರ್ತ ವಿನೋದ್ ಮೆಹ್ತಾ ನಿಧನ
ನವದೆಹಲಿ, ಮಾ.8 : ಹಿರಿಯ ಪತ್ರಕರ್ತ ಹಾಗೂ ಔಟ್ ಲುಕ್ ವಾರಪತ್ರಿಕೆ ಸಮೂಹ ಸಂಸ್ಥೆ ಸ್ಥಾಪಕ ಅಧ್ಯಕ್ಷ ವಿನೋದ್ ಮೆಹ್ತಾ ಅವರು ಭಾನುವಾರ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತ ಅಂತ್ಯಕ್ರಿಯೆಯನ್ನು ಲೋಧಿ ಚಿತಾಗಾರದಲ್ಲಿ ನೆರವೇರಿಸಲಾಗುತ್ತದೆ.
73 ವರ್ಷ ವಯಸ್ಸಿನ ವಿನೋದ್ ಮೆಹ್ತಾ ಅವರು ಪತ್ನಿ ಹಾಗೂ ಪತ್ರಕರ್ತೆ ಸುಮಿತಾ ಪಾಲ್ ಸೇರಿದಂತೆ ಪುತ್ರಿ ಹಾಗೂ ಅಪಾರ ಸಂಖ್ಯೆ ಅಭಿಮಾನಿಗಳನ್ನು ಅಗಲಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಏಮ್ಸ್ ಗೆ ಸೇರಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ಏಮ್ಸ್ ವಕ್ತಾರ ಅಮಿತ್ ಗುಪ್ತಾ ಹೇಳಿದ್ದಾರೆ.

ರಾವಲ್ಪಿಂಡಿ(ಪಾಕಿಸ್ತಾನ)ಯಲ್ಲಿ ಫೆ.1, 1942ರಂದು ಜನಿಸಿದ ಮೆಹ್ತಾ ಅವರು ಔಟ್ ಲುಕ್ ಮ್ಯಾಗಜೀನ್ ನ ಸ್ಥಾಪಕ, ಸಂಪಾದಕರಾಗಿ ಹಾಗೂ ಮುಖ್ಯಸ್ಥರಾಗಿ 2012ರ ತನಕ ಕಾರ್ಯನಿರ್ವಹಿಸಿದರು.
Frank & direct in his opinions, Vinod Mehta will be remembered as a fine journalist & writer. Condolences to his family on his demise.
— Narendra Modi (@narendramodi) March 8, 2015 ದಿ ಇಂಡಿಪೆಂಡೆಂಟ್, ಡಬೋನೇರ್, ಸಂಡೇ ಅಬ್ಸರ್ವರ್, ಪಯನಿಯರ್, ಇಂಡಿಯನ್ ಪೋಸ್ಟ್ ಸೇರಿದಂತೆ ದೇಶದ ಪ್ರತಿಷ್ಠಿತ ದಿನಪತ್ರಿಕೆ ಮತ್ತು ವಾರಪತ್ರಿಕೆಗಳ ಸಂಪಾದಕರಾಗಿದ್ದ ವಿನೋದ್ ಮೆಹ್ತಾ ಅವರ ನಿಧನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ಮಾಧ್ಯಮಗಳ ಮುಖ್ಯಸ್ಥರು ಶೋಕ ವ್ಯಕ್ತಪಡಿಸಿದ್ದಾರೆ.
May you rest in peace Vinod Mehta. God Bless
— barkha dutt (@BDUTT) March 8, 2015 ಹಿಂದಿ ಚಿತ್ರರಂಗದ ಪ್ರಬುದ್ಧ ನಟಿ ಮೀನಾಕುಮಾರಿ ಹಾಗೂ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುತ್ರ ಸಂಜಯ್ಗಾಂಧಿ ಅವರ ಜೀವನಚರಿತ್ರೆಯ ಪುಸ್ತಕ ಬರೆದು ವಿನೋದ್ ಮೆಹ್ತಾ ಜನಪ್ರಿಯರಾಗಿದ್ದರು.
In an age of Pygmy editors who won't stand up to be counted, Vinod Mehta was exceptional. The old school of Mumbai editors. RIP
— Rajdeep Sardesai (@sardesairajdeep) March 8, 2015 V sad to hear of the death of Vinod Mehta. He was an original.
— Sreenivasan Jain (@SreenivasanJain) March 8, 2015 ದೇಶದ ಪ್ರಚಲಿತ ವಿದ್ಯಮಾನಗಳು, ಅಂತಾರಾಷ್ಟ್ರೀಯ ರಾಜತಾಂತ್ರಿಕ ಸಂಬಂಧಗಳ ಕುರಿತು ಮೆಹ್ತಾ ಅವರು ಖಡಕ್ ಆಗಿ ತಮ್ಮ ವಾದ ಮಂಡಿಸುತ್ತಿದ್ದರು.ದೇಶದ ಅನೇಕ ಪ್ರಧಾನಿ ಹಾಗೂ ರಾಷ್ಟ್ರಪತಿಗಳ ಉತ್ತಮ ಒಡನಾಟ ಹೊಂದಿದ್ದ ಮೆಹ್ತಾ ಅವರು ಮಾಧ್ಯಮ ಜಗತ್ತಿನ ದಿಗ್ಗಜರಲ್ಲಿ ಒಬ್ಬರಾಗಿ ಸದಾ ಕಾಲ ಸ್ಮರಿಸಲ್ಪಡುತ್ತಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications