Breaking: ಉಪರಾಷ್ಟ್ರಪತಿ ಚುನಾವಣೆ: ಮತದಾನದಿಂದ ಟಿಎಂಸಿ ದೂರ
ನವದೆಹಲಿ, ಜುಲೈ 21: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪಕ್ಷವು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನದಿಂದ ದೂರವಿರುವುದಾಗಿ ತಿಳಿಸಿದೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.
ಆಡಳಿತಾರೂಢ ಬಿಜೆಪಿಯ ಅಭ್ಯರ್ಥಿಯಾಗಿ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್, ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೇಟ್ ಆಳ್ವಾ ಸ್ಪರ್ಧಿಸಿದ್ದಾರೆ.
ಆಡಳಿತ ಪಕ್ಷದ ಜಗದೀಪ್ ಧನಕರ್ ಅಥವಾ ವಿಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವಾ ಇಬ್ಬರಲ್ಲಿ ಯಾರನ್ನೂ ಬೆಂಬಲಿಸದಿರಲು ಪಕ್ಷವು ಸರ್ವಾನುಮತದಿಂದ ನಿರ್ಧರಿಸಿದೆ ಎಂದು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ, ತೃಣಮೂಲ ಕಾಂಗ್ರೆಸ್ ಸಂಸದ ಅಭಿಜಿತ್ ಬ್ಯಾನರ್ಜಿ ತಿಳಿಸಿದರು.

'ಎನ್ಡಿಎ (ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ) ಅಭ್ಯರ್ಥಿಯನ್ನು ಬೆಂಬಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ, ಉಭಯ ಸದನಗಳಲ್ಲಿ 35 ಸಂಸದರನ್ನು ಹೊಂದಿರುವ ನಮ್ಮ ಪಕ್ಷದೊಂದಿಗೆ ಸೂಕ್ತ ಸಮಾಲೋಚನೆ ಮತ್ತು ಚರ್ಚೆಯಿಲ್ಲದೆ ವಿರೋಧ ಪಕ್ಷದ ಅಭ್ಯರ್ಥಿಯನ್ನು ನಿರ್ಧರಿಸಲಾಗಿದೆ. ಹೀಗಾಗಿ ನಾವು ರೀತಿಯಲ್ಲಿ ಮತದಾನ ಪ್ರಕ್ರಿಯೆಯಿಂದ ದೂರವಿರಲು ಸರ್ವಾನುಮತದಿಂದ ನಿರ್ಧರಿಸಿದ್ದೇವೆ." ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಸುದ್ದಿಗಾರರಿಗೆ ತಿಳಿಸಿದರು.
ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇತ್ತಿಚೇಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಜಗದೀಪ್ ಧನಕರ್ ಅವರ ನಡುವೆ ಡಾರ್ಜಿಲಿಂಗ್ನಲ್ಲಿ ಸಭೆ ನಡೆದಿತ್ತು. ತಮ್ಮನ್ನು ಬೆಂಬಲಿಸುವಂತೆ ಜಗದೀಪ್ ಧನಕರ್ ಮಮತಾ ಬ್ಯಾನರ್ಜಿ ಅವರನ್ನು ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

"ಒಂದೆಡೆ ಎನ್ಡಿಎಯ ಜಗದೀಪ್ ಧನಕರ್, ಇನ್ನೊಂದು ಕಡೆ ಮಾರ್ಗರೆಟ್ ಆಳ್ವಾ ಇದ್ದಾರೆ. ಜಗದೀಪ್ ಧನಕರ್ ಅವರ ನಡವಳಿಕೆ ಮತ್ತು ಭಾರಿ ಪಕ್ಷಪಾತ ಕಳೆದ ಮೂರು ವರ್ಷಗಳಿಂದ ಬಂಗಾಳದ ಜನರ ಮೇಲೆ ಹಲ್ಲೆ ನಡೆಸಿದೆ, ನಾವು ಅವರನ್ನು ಬೆಂಬಲಿಸಲು ಸಾಧ್ಯವಿಲ್ಲ" ಎಂದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications