Fake: ಲಾಕ್ಡೌನ್ನಿಂದ ರೈಲು ಬೋಗಿ ನಡುವೆ ಕುಳಿತು ಮಹಿಳೆ ಪ್ರಯಾಣ
ದೆಹಲಿ, ಮೇ 19: ಪುಟ್ಟ ಮಗುವಿನ ಜೊತೆ ರೈಲು ಬೋಗಿಗಳ ನಡುವೆ ಕುಳಿತು ಪ್ರಯಾಣ ಮಾಡುತ್ತಿರುವ ಕಾರ್ಮಿಕ ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Recommended Video
ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರು ಟ್ರಕ್, ಲಾರಿ, ಹೆದ್ದಾರಿಗಳಲ್ಲಿ ನಡೆದುಕೊಂಡು ಸ್ವಂತ ಊರುಗಳಿಗೆ ಹೋಗುತ್ತಿದ್ದಾರೆ. ಪುಟ್ಟ ಪುಟ್ಟ ಮಕ್ಕಳ ಜೊತೆ, ಗಂಟುಮೂಟೆ ಕಟ್ಟಿಕೊಂಡು ಕಾಲ್ನಡಿಗೆಯಲ್ಲಿ ಸಾಗುತ್ತಿರುವ ಕಾರ್ಮಿಕರ ದೃಶ್ಯಗಳು ಕರುಳು ಹಿಂಡುವಂತಿದೆ.
ಇಂತಹ ಸಂದರ್ಭದಲ್ಲಿ ತನ್ನ ಪ್ರಾಣವನ್ನು ಲೆಕ್ಕಿಸಿದ ಕಾರ್ಮಿಕ ಮಹಿಳೆಯೊಬ್ಬರು ರೈಲು ಬೋಗಿಗಳ ನಡುವೆ ಕುಳಿತು ಹೋಗುತ್ತಿರುವ ಅಪಾಯಕಾರಿ ವಿಡಿಯೋ ಹೆಚ್ಚು ಗಮನ ಸೆಳೆದಿದೆ. ಆದರೆ, ಇದು ಭಾರತ ಮೂಲದ ವಿಡಿಯೋ ಅಲ್ಲ ಎಂದು ಎಫ್ ಬಿ ಐ ಸ್ಪಷ್ಟಪಡಿಸಿದೆ.

ಇದು ಲಾಕ್ಡೌನ್ ಸನ್ನಿವೇಶದ ವಿಡಿಯೋ ಅಲ್ಲ, ಇದು ಬಾಂಗ್ಲಾದೇಶ ಮೂಲದ ವಿಡಿಯೋ. 2016ರಲ್ಲಿ ಈ ವಿಡಿಯೋ ವೈರಲ್ ಆಗಿತ್ತು ಎಂದು ಎಫ್ ಬಿ ಐ ತಿಳಿಸಿದೆ. ಇಂತಹ ವಿಡಿಯೋಗಳನ್ನು ಹರಡಿಸಬೇಡಿ ಮತ್ತು ಸಾರ್ವಜನಿಕರು ನಂಬಬೇಡಿ ಎಂದು ಎಚ್ಚರಿಸಿದೆ.
ಕಳೆದ ಎರಡ್ಮೂರು ತಿಂಗಳಿನಿಂದ ಪ್ರಮುಖ ನಗರಗಳಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕರು, ಊರುಗಳಿಗೆ ತೆರಳಲು ಕಷ್ಟಪಡುತ್ತಿದ್ದಾರೆ. ರಾತ್ರಿ-ಹಗಲು ಎನ್ನದೇ ನಡೆದುಕೊಂಡು ಹೋಗುತ್ತಿದ್ದಾರೆ. ಅಕ್ರಮವಾಗಿ ಆಂಬುಲೆನ್ಸ್, ಟ್ರಕ್, ಲಾರಿಗಳಲ್ಲಿ ಪ್ರಯಾಣ ಮಾಡಿರುವ ಘಟನೆಯೂ ವರದಿಯಾಗಿದೆ. ಇದೆಲ್ಲದ ಮಧ್ಯೆ ಸರ್ಕಾರದಿಂದ ಶ್ರಮಿಕ್ ರೈಲು ಮತ್ತು ಬಸ್ಸಿನ ವ್ಯವಸ್ಥೆಯೂ ಆಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications