ದೇವ್, ರೂಪಾನಿ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಲೇವಡಿ
ನವದೆಹಲಿ, ಮೇ 01: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ತ್ರಿಪುರ ಮುಖ್ಯಮಂತ್ರಿ ವಿಪ್ಲವ್ ಕುಮಾರ್ ದೇವ್ ನೀಡಿದ ವಿವಾದಾತ್ಮಕ ಹೇಳಿಕೆಗಳ ಕುರಿತು ಕಾಂಗ್ರೆಸ್ ಲೇವಡಿ ಮಾಡಿದೆ.
ಕಳೆದವಾರ ಸರ್ಚ್ ಇಂಜಿನ್ ಗೂಗಲ್ ಅನ್ನು ವಿಜಯ ರೂಪಾನಿ ನಾರದ ಮುನಿಗಳಿಗೆ ಹೋಲಿಸಿದ್ದರು. ಸಭೆಯೊಂದರಲ್ಲಿ ಮಾತನಾಡುತ್ತಿದ್ದ ತ್ರಿಪುರ ಮುಖ್ಯಮಂತ್ರಿ ವಿಪ್ಲವ್ ದೇವ್, 'ಸರ್ಕಾರಿ ಕೆಲಸ ಹುಡುಕುವ ಬದಲು ಪಾನ್ ಅಂಗಡಿ ತೆರೆಯಿರಿ' ಎಂದು ಹೇಳಿದ್ದರು.
ಈ ಕುರಿತು ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಮುಖಂಡೆ ರೇಣುಕಾ ಚೌಧರಿ, "ನೀವು ವಿಜಯ ರೂಪಾನಿ ಎಂಬ ಮುಖ್ಯಮಂತ್ರಿಯನ್ನು ಪಡೆದಿದ್ದೀರಿ. ಈ ಗುಜರಾತ್ ಮುಖ್ಯಮಂತ್ರಿ ನಮಗೆ ಹೇಳುತ್ತಾರೆ, ನಾರದ ಮುನಿಯೇ ನಿಜವಾಗಿಯೂ ಗೂಗಲ್ ಪರಿಕಲ್ಪನೆ ಪರಿಚಯಿಸಿದ್ದು ಅಂತ. ನಿಜಕ್ಕೂ ಅದ್ಭುತ. ಈ ಬಗ್ಗೆ ಗೂಗಲ್ ಏನು ಚಿಂತಿಸಬಹುದು ಎಂದು ನಾನು ಯೋಚಿಸುತ್ತಿದ್ದೇನೆ. ನೀವು ಇನ್ನೊಬ್ಬ ಮುಖ್ಯಮಂತ್ರಿಯನ್ನು ಹೊಂದಿದ್ದೀರಿ. ಅವರು, 'ಸರ್ಕಾರಿ ಕೆಲಸ ಹುಡುಕುತ್ತ ಕಾಲಹರಣ ಮಾಡಬೇಡಿ. ನಿರುದ್ಯೋಗಿಗಳು, ಸುಶಿಕ್ಷಿತರು ಪಾನ್ ಶಾಪ್ ತೆರೆಯಿರಿ' ಎನ್ನುತ್ತಾರೆ" ಎಂದು ಲೇವಡಿ ಮಾಡಿದ್ದಾರೆ.

"ದೇವ್ ಅವರ ಹೇಳಿಕೆ ಕುರಿತು ನರೇಂದ್ರ ಮೋದಿಯವರು ಬೇಸರ ವ್ಯಕ್ತಪಡಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದೆಲ್ಲವೂ ನಾಟಕ. ಅವರೆಲ್ಲರ ಸಿದ್ಧಾಂತವೂ ಒಂದೇ. ಭಾರತಕ್ಕೆ ಇದು ಖಂದಿತ ಬೇಕಿಲ್ಲ" ಎಂದು ಚೌಧರಿ ಹೇಳಿದ್ದಾರೆ.
ಏಪ್ರಿಲ್ 28 ರಂದು ಸಭೆಯೊಂದರಲ್ಲಿ ಮಾತನಾಡುತ್ತಿದ್ದ ದೇವ್, ''ಸರ್ಕಾರಿ ಕೆಲಸ ಪಡೆಯಲು ರಾಜಕೀಯ ಪಕ್ಷಗಳ ಹಿಂದೆ ಓಡಬೇಡಿ. ಸುಮ್ಮನೆ ಕಾಲಹರಣವಾದಂತಾಗುತ್ತದೆ. ಅದರ ಬದಲು ನೀವೇನಾದರೂ ಒಂದು ಪಾನ್ ಶಾಪ್ ಇಟ್ಟರೆ, ಸರ್ಕಾರಿ ಕೆಲಸಕ್ಕಾಗಿ ವ್ಯರ್ಥಮಾಡಿದಷ್ಟು ಸಮಯದಲ್ಲಿ ಸುಮಾರು 5 ಲಕ್ಷ ರೂ. ಬ್ಯಾಂಕ್ ಬ್ಯಾಲೆನ್ಸ್ ಇಡಬಹುದು" ಎಂದಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications