ಸ್ಪಾಟ್ ಫಿಕ್ಸಿಂಗ್ : ವಿಜಯ್ ಮಲ್ಯ, ಪವಾರ್ ಕೂಡಾ ಭಾಗಿ
ಮುಂಬೈ, ಫೆ.25: ಇಂಡಿಯನ್ ಪ್ರಿಮಿಯರ್ ಲೀಗ್ ನ ವಿವಾದಿತ ತಂಡ ಚೆನ್ನೈ ಸೂಪರ್ ಕಿಂಗ್ಸ್ ಒಡೆಯ ಗುರುನಾಥ್ ಮೈಯಪ್ಪನ್ ಅವರನ್ನು ರಕ್ಷಿಸಲು ನಾಯಕ ಎಂಎಸ್ ಧೋನಿ ಹಾಗೂ ಎನ್ ಶ್ರೀನಿವಾಸನ್ ಆವರು ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಅಂಶ ಬೆಳಕಿಗೆ ಬಂದ ಬೆನ್ನಲ್ಲೇ ಇನ್ನಷ್ಟು ಸ್ಫೋಟಕ ಮಾಹಿತಿಗಳು ಹೊರ ಬಿದ್ದಿವೆ. ಬುಕ್ಕಿಗಳ ನಂಟು ಹೊಂದಿ ವಿಚಾರಣೆಗೊಳಪಡುತ್ತಿರುವ ನಟ ವಿಂದೂ ದಾರಾ ಸಿಂಗ್ ಅನೇಕ ಪ್ರಮುಖ ಹೆಸರುಗಳನ್ನು ಬಹಿರಂಗಗೊಳಿಸಿದ್ದಾರೆ.
ಬೆಟ್ಟಿಂಗ್ ಹಾಗೂ ಮ್ಯಾಚ್ ಫಿಕ್ಸಿಂಗ್ ನಲ್ಲಿ ಉದ್ಯಮಿ ವಿಜಯ್ ಮಲ್ಯ ಹಾಗೂ ಕೇಂದ್ರ ಸಚಿವ ಶರದ್ ಪವಾರ್ ಇದ್ದಾರೆ. ಮಿಕ್ಕವರಿಗೆ(ಫ್ರಾಂಚೈಸಿ ಮಾಲೀಕರು) ಅಷ್ಟಾಗಿ ಈ ಬಗ್ಗೆ ಅರಿವಿಲ್ಲ ಎಂದು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ವಿಚಾರಣೆ ವೇಳೆ ಬಹಿರಂಗಪಡಿಸಿದ್ದಾರೆ.
ಮಲ್ಯ ಚಾಣಾಕ್ಷ: ವಿಜಯ್ ಮಲ್ಯ ಅವರು ತಮ್ಮ ಇತರೆ ಸಂಸ್ಥೆಗಳಲ್ಲಿ ನಷ್ಟ ಅನುಭವಿಸಿದರೂ ಐಪಿಎಲ್ ನಿಂದ ದುಡ್ಡು ಮಾಡುವುದು ಅವರಿಗೆ ಚೆನ್ನಾಗಿ ಗೊತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವಲ್ಲದೆ ಇನ್ನೂ ಅನೇಕ ತಂಡಗಳ ಮೇಲೆ ಹಣ ಹೂಡಿಕೆ ಮಾಡಿದ್ದಾರೆ. ಐಪಿಎಲ್ ಪಂದ್ಯಗಳನ್ನು ಫಿಕ್ಸ್ ಮಾಡುವ ಕನಿಷ್ಠವೆಂದರೂ 100-200 ಕೋಟಿ ರು ಗಳಿಸುತ್ತಿದ್ದಾರೆ.
ಐಪಿಎಲ್ ಆರಂಭಿಸಿದ ಲಲಿತ್ ಮೋದಿ ಅವರು ಭಾರತ ಬಿಟ್ಟು ದಕ್ಷಿಣ ಅಫ್ರಿಕಾಕ್ಕೆ ಟೂರ್ನಿಯನ್ನು ಕರೆದೊಯ್ದು ಯಶಸ್ವಿಗೊಳಿಸಿದ್ದು ಶರದ್ ಪವಾರ್ ಹಾಗೂ ಕಾಂಗ್ರೆಸ್ ನಾಯಕರಿಗೆ ಇಷ್ಟವಾಗಿರಲಿಲ್ಲ. ಮೋದಿ, ಶಶಿ ತರೂರ್, ಕೊಚ್ಚಿ ತಂಡದ ಕಥೆ ಎಲ್ಲರಿಗೂ ಗೊತ್ತೇ ಇದೆ.

ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಹಾಗೂ ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ ನಡುವಿನ ಕಿತ್ತಾಟದ ಫಲವೇ ಪಂದ್ಯಗಳ ಫಿಕ್ಸಿಂಗ್ ಗೆ ನಾಂದಿ ಹಾಡಿತು. ಇಡೀ ಐಪಿಎಲ್ ಪಂದ್ಯಗಳ ಮ್ಯಾಚ್ ಫಿಕ್ಸಿಂಗ್ ಪ್ರಕರಣವಾಗಿದೆ ಎಂದು ಝೀ ಮೀಡಿಯಾ ಕಾರ್ಪೊಗೆ ಸಿಂಗ್ ತಿಳಿಸಿದ್ದಾರೆ. ಪವಾರ್ ಅವರನ್ನು ಪ್ರಶ್ನಿಸಲು ಹೋದರೆ ನಿಮ್ಮ ಚಾನೆಲ್ ಬಂದ್ ಆಗುತ್ತದೆ ಎಂದು ಎಚ್ಚರಿಕೆಯನ್ನು ವಿಂದೂ ನೀಡಿದ್ದಾರೆ.
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣವನ್ನು ಮುಚ್ಚಿಹಾಕಲು ಭಾರತ ಹಾಗೂ ಚೆನ್ನೈ ತಂಡದ ನಾಯಕ ಎಂಎಸ್ ಧೋನಿ ಯತ್ನಿಸಿದ್ದಾರೆ ಎಂದು ಐಪಿಎಲ್ ನ ಉಚ್ಚಾಟಿತ ಆಯುಕ್ತ ಲಲಿತ್ ಮೋದಿ ಗಂಭೀರ ಆರೋಪ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. [ಗುರು ಸಿಎಸ್ ಕೆ ಬಾಸ್ ಅಲ್ವಂತೆ ಗುರೂ]
ಐಪಿಎಲ್ ನಿಯಮದ ಪ್ರಕಾರ ಯಾವುದೇ ತಂಡದ ಮಾಲೀಕರು, ಫ್ರಾಂಚೈಸಿ ಸದಸ್ಯರು ಕಳ್ಳಾಟದಲ್ಲಿ ಭಾಯಾಗಿದ್ದರೆ ಅಥವಾ ಐಪಿಎಲ್ ನಿಯಮ ಮೀರಿ ವರ್ತಿಸಿದ್ದರೆ ಅವರನ್ನು ಹಾಗೂ ಅವರು ಪ್ರತಿನಿಧಿಸುವ ತಂಡವನ್ನು ವಜಾಗೊಳಿಸಬಹುದಾಗಿದೆ. ಆದರೆ, ಇಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕಾಗಲಿ, ಗುರುನಾಥ್ ಹಾಗೂ ಧೋನಿಗಾಗಲಿ ಯಾವುದೇ ಹಾನಿಯಾಗಿಲ್ಲದಿರುವುದು ದುರಂತ ಎಂದು ಮೋದಿ ಹೇಳಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications