ದೆಹಲಿಯ ಕೆಂಪುಕೋಟೆ ಮೇಲೆ ಆಯುಧ ಹಿಡಿದು ನಿಂತ ಆರೋಪಿ ಬಂಧನ
ನವದೆಹಲಿ, ಫೆಬ್ರವರಿ.22: ಭಾರತದ 72ನೇ ಗಣರಾಜ್ಯೋತ್ಸವದ ದಿನವೇ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಸೋಮವಾರ ಬಂಧಿಸುವಲ್ಲಿ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಜನವರಿ.26ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿಯ ನಿವಾಸಿ ಜಸ್ಪ್ರೀತ್ ಸಿಂಗ್ ಎಂಬ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಲಾಗಿದೆ. ಹಿಂಸಾಚಾರದ ದಿನ ಕೆಂಪುಕೋಟೆಯ ಕಮಾನುಗಳ ಎರಡೂ ಬದಿಯಲ್ಲಿ ಹತ್ತಿದ್ದ ಆರೋಪಿಯು ಆಯುಧವೊಂದನ್ನು ಹಿಡಿದು ಆಕ್ರಮಣಕಾರಿ ರೂಪದಲ್ಲಿ ನಿಂತಿದ್ದನು.
ದೆಹಲಿ ಹಿಂಸಾಚಾರ ನಡೆದ ದಿನ ಆರೋಪಿಯು ಕೈಯಲ್ಲಿ ಉಕ್ಕಿನ ಆಯುಧ ಹಿಡಿದಿರುವುದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾವಚಿತ್ರವೊಂದನ್ನು ಬಿಡುಗಡೆ ಮಾಡಿದ್ದಾರೆ. ಆಯುಧ ಹಿಡಿದ ಒಂದು ಚಿತ್ರ ಮತ್ತು ಆರೋಪಿಯ ಮತ್ತೊಂದು ಚಿತ್ರವನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ.

ದೆಹಲಿ ಹಿಂಸಾಚಾರ ಪ್ರಕರಣದ ಹಿನ್ನೆಲೆ:
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಮೂರು ಕೃಷಿ ಕಾಯ್ದೆಗಳ ವಿರುದ್ಧ ಜನವರಿ.26ರಂದು ರೈತರು ನಡೆಸಿದ ಟ್ರ್ಯಾಕ್ಟರ್ ಜಾಥಾ ಹಿಂಸಾಚಾರಕ್ಕೆ ತಿರುಗಿತ್ತು. ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಒಂದು ಗುಂಪು ಓಡಾಡುತ್ತಿದ್ದರೆ, ಮತ್ತೊಂದು ತಂಡವು ಕೆಂಪುಕೋಟೆಗೆ ನುಗ್ಗಿ, ತ್ರಿವರ್ಣ ಧ್ವಜ ಎದುರಿನಲ್ಲಿ ಸಿಖ್ ಧ್ವಜವನ್ನು ಹಾರಿಸಿತ್ತು. ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 12 ಮಂದಿ ಪ್ರಮುಖ ಆರೋಪಿಗಳ ಭಾವಚಿತ್ರವನ್ನು ಬಿಡುಗಡೆಗೊಳಿಸಿದ್ದರು. ದೀಪ್ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.

ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ ಆರೋಪಿಗಳ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಪ್ರಮುಖ ಆರೋಪಿಗಳಾದ ಜಜ್ಬೀರ್ ಸಿಂಗ್, ಬುಟಾ ಸಿಂಗ್, ಸುಖ್ ದೇವ್ ಸಿಂಗ್, ಇಕ್ಬಾಲ್ ಸಿಂಗ್ ಬಗ್ಗೆ ಮಾಹಿತಿ ನೀಡಿದರೆ 50,000 ರೂಪಾಯಿ ನಗದು ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications