ಲೋಕಸಭೆ ಚುನಾವಣೆ ಸ್ಪರ್ಧೆಗೆ ಒಲ್ಲೆ ಎಂದ ವಿರೇಂದ್ರ ಸೆಹ್ವಾಗ್
ನವದೆಹಲಿ, ಮಾರ್ಚ್ 15: ಹೊಡಿ-ಬಡಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಅವರು ಈ ಬಾರಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿತ್ತು, ಆದರೆ ಅದು ಸುಳ್ಳಾಗಿದೆ.
ದೆಹಲಿ ಬಿಜೆಪಿ ನಾಯಕರು ಸೆಹ್ವಾಗ್ ಅವರಿಗೆ ತಮ್ಮ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುವ ಅವಕಾಶ ನೀಡಿದ್ದರು, ಆದರೆ ಸೆಹ್ವಾಗ್ ಅವರು ಪ್ರವಾವವನ್ನು ತಿರಸ್ಕರಿಸಿದ್ದಾರೆ ಎಂದು ದೆಹಲಿ ಬಿಜೆಪಿ ಹಿರಿಯ ಮುಖಂಡರು ಹೇಳಿದ್ದಾರೆ.
ಮಾಜಿ ಕ್ರಿಕೆಟರ್ ಗಂಭೀರ್ ನಂತರ ಸೆಹ್ವಾಗ್ ರಾಜಕೀಯಕ್ಕೆ ಎಂಟ್ರಿ?
ಆದರೆ ಸೆಹ್ವಾಗ್ ಅವರ ಜೊತೆ ಆರಂಭಿಕ ಬ್ಯಾಟ್ಸ್ಮನ್ ಆಗಿದ್ದ ಗೌತಮ್ ಗಂಭೀರ್ ಅವರು ದೆಹಲಿಯಿಂದಲೇ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ, ಆದರೆ ಸೆಹ್ವಾಗ್ ಅವರನ್ನು ಲೋಕಸಭೆಯಲ್ಲಿ ನೋಡುವ ಅವಕಾಶ ಕಳೆದುಕೊಂಡಂತಾಗಿದೆ.

ಸೆಹ್ವಾಗ್ ಅವರು ನಿವೃತ್ತರಾದಾಗಿನಿಂದಲೂ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಟ್ವಿಟ್ಟರ್ ಮೂಲಕ ರಾಜಕೀಯ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದ ಅವರ ಟ್ವೀಟ್ ಗಳು ಬಹುತೇಕ ಕೇಂದ್ರ ಸರ್ಕಾರದ ನಿರ್ಧಾರಗಳ ಪರವಾಗಿರುತ್ತಿದ್ದವು ಹಾಗಾಗಿ ಅವರು ಚುನಾವಣೆಗೆ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ಆದರೆ ಅದು ಸುಳ್ಳಾಗಿದೆ.
ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಸೆಹ್ವಾಗ್, 'ಕೆಲವು ವಿಷಯಗಳು ಬದಲಾಗುವುದೇ ಇಲ್ಲ, ಇದೇ ಊಹಾಪೋಹ 2014ರಲ್ಲೂ ಹರಡಿತ್ತು, ಈಗ 2019ಕ್ಕೂ ಹರಡುತ್ತಿದೆ, ಆದರೆ ನನಗೆ ಆಗಲೂ ಆಸಕ್ತಿ ಇರಲಿಲ್ಲ, ಈಗಲೂ ಇಲ್ಲ' ಎಂದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications