ಸುಷ್ಮಾ ಪಾರ್ಥೀವ ಶರೀರ ಮುಂದೆ ಪ್ರಧಾನಿ ಮೋದಿ ಕಣ್ಣೀರಧಾರೆ
Recommended Video
ನವದೆಹಲಿ, ಆಗಸ್ಟ್ 07: ಒಂದು ಕಾಲದಲ್ಲಿ ಪ್ರಧಾನಿ ಮೋದಿ ಅವರ ಕೇಂದ್ರ ಸಚಿವ ಸಂಪುಟದ ಶಕ್ತಿಯಾಗಿದ್ದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ಅಗಲಿಕೆಯ ನೋವಿನಿಂದ ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದಾರೆ. ನಿನ್ನೆ ರಾತ್ರಿ ನಿಧನವಾರ್ತೆ ಕೇಳಿದ ಕೂಡಲೇ ಪ್ರಧಾನಿ ಸಚಿವಾಲಯದಿಂದ ಭಾವುಕ ಟ್ವೀಟ್ ಗಳು ಸರಣಿಯಾಗಿ ಹೊರ ಬಂದವು. ಮೋದಿ ಸಂಪುಟದ ಪ್ರಮುಖ ಸಚಿವರು ತಕ್ಷಣವೆ ಏಮ್ಸ್ ಗೆ ಧಾವಿಸಿ, ಸಕಲ ವ್ಯವಸ್ಥೆ ನೋಡಿಕೊಂಡರು. ಇಂದು ಸುಷ್ಮಾ ಸ್ವರಾಜ್ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಸುಷ್ಮಾ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಚಿತ್ರಗಳಲ್ಲಿ ಸುಷ್ಮಾ ಸ್ವರಾಜ್ ಅಂತಿಮ ದರ್ಶನ
ಸುಷ್ಮಾ ನಿವಾಸಕ್ಕೆ ತೆರಳಿದ ಕೆಂಪು ವಸ್ತ್ರಧಾರಿಯಾಗಿ ಚಿರನಿದ್ರೆಗೆ ಜಾರಿರುವ ಸುಷ್ಮಾ ಅವರ ಪಾರ್ಥೀವಶರೀರವನ್ನು ನೋಡಿ ಎರದು ಕೈ ಜೋಡಿಸಿ ಕೆಲ ಹೊತ್ತು ನಿಂತಲ್ಲೇ ನಿಂದರು. ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸುವಾಗ ಮೋದಿ ಕಣ್ಣಾಲಿ ತುಂಬಿ ಬಂದಿತ್ತು.
ನಂತರ ಸುಷ್ಮಾ ಪುತ್ರಿ ಬಾನ್ಸುರಿ ಹಾಗೂ ಪತಿ ಸ್ವರಾಜ್ ಕೌಶಲ್ ಅವರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬುವ ಮಾತುಗಳನ್ನಾಡಿದರು ಆದರೆ, ಈ ಸಂದರ್ಭದಲ್ಲಿ ದುಃಖ ಉಮ್ಮಳಿಸಿ ಬಂದಿತ್ತು, ಕಣ್ಣೀರು ತಡೆಯುವ ಯಾವ ಪ್ರಯತ್ನವನ್ನು ಮಾಡುವಂತಿರಲಿಲ್ಲ, ಅಗಲಿದ ಸೋದರಿ ಸಮಾನ ಸುಷ್ಮಾ ಅವರಿಗೆ ಕಂಬನಿಧಾರೆ ಹರಿಸಿದರು.

ಇದು ನನ್ನ ಜೀವಮಾನದ ಅಮೂಲ್ಯ ದಿನ
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದಾಗಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದ್ದ ಸುಷ್ಮಾ ಅವರು 'ಈ ದಿನಕ್ಕಾಗಿ ನನ್ನ ಜೀವಮಾನದಲ್ಲಿ ಇದೇ ದಿನಕ್ಕೋಸ್ಕರ ಕಾಯುತ್ತಿದ್ದೆ" ಎಂದು ಕೊನೆಯ ಬಾರಿಗೆ ಟ್ವೀಟ್ ಮೂಲಕ ಪ್ರಧಾನಿ ಮೋದಿಯವರಿಗೆ ಧನ್ಯವಾದ ತಿಳಿಸಿದ್ದರು.
|
ಬಿಜೆಪಿ ಹಿರಿಯ ಜೀವಿ ಎಲ್ ಕೆ ಅಡ್ವಾಣಿ ಕಂಬನಿ
ಬಿಜೆಪಿ ಹಿರಿಯ ಜೀವಿ ಎಲ್ ಕೆ ಅಡ್ವಾಣಿ ಅವರು ಸುಷ್ಮಾ ಅವರಿಗೆ ಅಂತಿಮ ನಮನ ಸಲ್ಲಿಸಿ, ಸುಷ್ಮಾ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಡ್ವಾಣಿ ಪುತ್ರಿ ಪ್ರತಿಭಾ ಅವರು ಕೂಡಾ ಭಾವುಕರಾಗಿ ಪಾರ್ಥೀವ ಶರೀರದ ಮುಂದೆ ಕಣ್ಣೀರು ಹರಿಸಿದರು.
| Array |
ವಾಜಪೇಯಿ ನಿಧನಕ್ಕೆ ಮೋದಿ ಕಂಬನಿ
2018ರ ಆಗಸ್ಟ್ 16ರಂದು ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅಗಲಿಕೆಯ ನೋವಿನಲ್ಲಿ ಕಣ್ಣೀರಿಟ್ಟಿದ್ದ ಮೋದಿ ಅವರು, ವಿದೇಶಗಳಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಅವರ ನಿಧನರಿಂದ ಸಹಜವಾಗಿ ತೀವ್ರವಾಗಿ ದುಃಖಿತರಾಗಿದ್ದಾರೆ.
ಸುಷ್ಮಾ ಸ್ವರಾಜ್ ನೆನಪು ಹಸಿರಾಗಿಸುವ ಸುಂದರ ಚಿತ್ರಗಳು
|
ಸುಷ್ಮಾ ಬಗ್ಗೆ ಮೋದಿ ಟ್ವೀಟ್
"ಸುಷ್ಮಾ ಅನಾರೋಗ್ಯವನ್ನೂ ಲೆಕ್ಕಿಸದೆ ವಿದೇಶಾಂಗ ವ್ಯವಹಾರ ಖಾತೆಯನ್ನು ನಿಭಾಯಿಸಿದ್ದರು. ಅವರ ಇಡೀ ಜೀವನವನ್ನು ದೇಶದ ಜನರ ಸೇವೆಗೆ ಮೀಸಲಿಟ್ಟಿದ್ದರು. ಕೋಟ್ಯಂತರ ಜನರಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದರು ಎಂದು ಟ್ವೀಟ್ ಮಾಡಿದ್ದರು. ಹಾಗೇ ಅವರ ನಿಧನದಿಂದ ತೀವ್ರ ದುಃಖವಾಗಿದೆ" ಎಂದು ಮೋದಿ ಟ್ವೀಟ್ ಮಾಡಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications